<p><strong>ಯಲಹಂಕ: </strong>ಬ್ಯಾಟರಾಯನಪುರ ಕ್ಷೇತ್ರದ ರಾಮಚಂದ್ರಪುರದ ರಘುರಾಂ ಬಡಾವಣೆಯಲ್ಲಿ ಜೀರ್ಣೋದ್ಧಾರಗೊಳಿಸಿರುವ ಕಲ್ಯಾಣರಾಮ ದೇವಸ್ಥಾನದಲ್ಲಿ ಶ್ರೀರಾಮಚಂದ್ರ, ಸೀತಾ, ಲಕ್ಷ್ಮಣ ಸಮೇತ ಆಂಜನೇಯ ಸ್ವಾಮಿಯ ನೂತನ ಶಿಲಾವಿಗ್ರಹದ ಪ್ರತಿಷ್ಠಾಪನೆ ಶುಕ್ರವಾರ ನಡೆಯಿತು.</p>.<p>ದೇವರಿಗೆಬೆಳಿಗ್ಗೆಯಿಂದಲೇ ವಿವಿಧ ರೀತಿಯ ಅಭಿಷೇಕ,ಹೋಮ ಹಾಗೂ ಪೂಜಾ ಕೈಂಕರ್ಯಗಳು ನಡೆದವು. ಪ್ರತಿಷ್ಠಾಪನೆ ಅಂಗವಾಗಿ ಮಹಿಳೆಯರು ಕಳಶಗಳನ್ನು ಹೊತ್ತು ಗ್ರಾಮದಲ್ಲಿ ಮೆರವಣಿಗೆ ನಡೆಸಿದರು. ನಂತರ ದೇವಸ್ಥಾನದ ಗೋಪುರದಲ್ಲಿರುವ ಕಳಶಕ್ಕೆ ಕ್ರೇನ್ ಮೂಲಕ ಕ್ಷೀರಾಭಿಷೇಕ ಮಾಡಲಾಯಿತು.</p>.<p>‘ಆಟದ ಮೈದಾನ ಮತ್ತು ಉದ್ಯಾನಕ್ಕೆ ಹೊಂದಿಕೊಂಡಿರುವ ಈ ದೇವಾಲಯದ ಜೀರ್ಣೋದ್ಧಾರ ನಡೆದಿರುವುದರಿಂದ ವಾಯುವಿಹಾರಕ್ಕೆ ಬರುವವರು ಹಾಗೂ ಸಾರ್ವಜನಿಕರು ದೇವಸ್ಥಾನದ ಆವರಣದಲ್ಲಿ ಕುಳಿತು ವಿಶ್ರಾಂತಿಸಲು ಅನುಕೂಲವಾಗಲಿದೆ’ ಎಂದುಶಾಸಕ ಕೃಷ್ಣಬೈರೇಗೌಡ ತಿಳಿಸಿದರು.</p>.<p>ಮುಖಂಡರಾದ ಆರ್.ಎಂ.ಶ್ರೀನಿವಾಸ್, ಎನ್.ಎನ್.ಶ್ರೀನಿವಾಸಯ್ಯ, ಬಿ.ಎಸ್.ಗೋಪಾಲಕೃಷ್ಣ, ಸುಧಾಕರ್, ಪಟೇಲ್ ಪಿಳ್ಳೇಗೌಡ, ಪಟೇಲ್ ಮಂಜಣ್ಣ, ಮುನಿಯಪ್ಪ, ಅಶ್ವತ್ಥನಾರಾಯಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong>ಬ್ಯಾಟರಾಯನಪುರ ಕ್ಷೇತ್ರದ ರಾಮಚಂದ್ರಪುರದ ರಘುರಾಂ ಬಡಾವಣೆಯಲ್ಲಿ ಜೀರ್ಣೋದ್ಧಾರಗೊಳಿಸಿರುವ ಕಲ್ಯಾಣರಾಮ ದೇವಸ್ಥಾನದಲ್ಲಿ ಶ್ರೀರಾಮಚಂದ್ರ, ಸೀತಾ, ಲಕ್ಷ್ಮಣ ಸಮೇತ ಆಂಜನೇಯ ಸ್ವಾಮಿಯ ನೂತನ ಶಿಲಾವಿಗ್ರಹದ ಪ್ರತಿಷ್ಠಾಪನೆ ಶುಕ್ರವಾರ ನಡೆಯಿತು.</p>.<p>ದೇವರಿಗೆಬೆಳಿಗ್ಗೆಯಿಂದಲೇ ವಿವಿಧ ರೀತಿಯ ಅಭಿಷೇಕ,ಹೋಮ ಹಾಗೂ ಪೂಜಾ ಕೈಂಕರ್ಯಗಳು ನಡೆದವು. ಪ್ರತಿಷ್ಠಾಪನೆ ಅಂಗವಾಗಿ ಮಹಿಳೆಯರು ಕಳಶಗಳನ್ನು ಹೊತ್ತು ಗ್ರಾಮದಲ್ಲಿ ಮೆರವಣಿಗೆ ನಡೆಸಿದರು. ನಂತರ ದೇವಸ್ಥಾನದ ಗೋಪುರದಲ್ಲಿರುವ ಕಳಶಕ್ಕೆ ಕ್ರೇನ್ ಮೂಲಕ ಕ್ಷೀರಾಭಿಷೇಕ ಮಾಡಲಾಯಿತು.</p>.<p>‘ಆಟದ ಮೈದಾನ ಮತ್ತು ಉದ್ಯಾನಕ್ಕೆ ಹೊಂದಿಕೊಂಡಿರುವ ಈ ದೇವಾಲಯದ ಜೀರ್ಣೋದ್ಧಾರ ನಡೆದಿರುವುದರಿಂದ ವಾಯುವಿಹಾರಕ್ಕೆ ಬರುವವರು ಹಾಗೂ ಸಾರ್ವಜನಿಕರು ದೇವಸ್ಥಾನದ ಆವರಣದಲ್ಲಿ ಕುಳಿತು ವಿಶ್ರಾಂತಿಸಲು ಅನುಕೂಲವಾಗಲಿದೆ’ ಎಂದುಶಾಸಕ ಕೃಷ್ಣಬೈರೇಗೌಡ ತಿಳಿಸಿದರು.</p>.<p>ಮುಖಂಡರಾದ ಆರ್.ಎಂ.ಶ್ರೀನಿವಾಸ್, ಎನ್.ಎನ್.ಶ್ರೀನಿವಾಸಯ್ಯ, ಬಿ.ಎಸ್.ಗೋಪಾಲಕೃಷ್ಣ, ಸುಧಾಕರ್, ಪಟೇಲ್ ಪಿಳ್ಳೇಗೌಡ, ಪಟೇಲ್ ಮಂಜಣ್ಣ, ಮುನಿಯಪ್ಪ, ಅಶ್ವತ್ಥನಾರಾಯಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>