<p>ಬೆಂಗಳೂರು: ಆನೆಗೊಂದಿ ಮಾದಕವಸ್ತು ಮಾಫಿಯಾ ಕೇಂದ್ರವಾಗಿದೆ ಎಂದು ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದ ಶಾಸಕ ಬಸವರಾಜ ರಾಯರಡ್ಡಿ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಭಾವಚಿತ್ರ ದಹಿಸಿದ್ದ ಆರೋಪದ ಮೇಲೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.</p>.<p>ಬುಧವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ರಾಯರಡ್ಡಿ, ‘ಸೋಮವಾರ ನಾನು ಸದನದಲ್ಲಿ ಮಾತನಾಡಿದ್ದೆ. ಅದನ್ನು ವಿರೋಧಿಸಿ ಗಂಗಾವತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ನನ್ನ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಸುಟ್ಟಿದ್ದಾರೆ. ಬೆದರಿಕೆಯನ್ನೂ ಹಾಕುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಆಗ ಮಧ್ಯ ಪ್ರವೇಶಿಸಿದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿ. ಜನಾರ್ದನ ರೆಡ್ಡಿ, ‘ಪ್ರತಿಭಟನೆ ಕುರಿತು ನನ್ನತ್ತ ನೋಡಿ ಮಾತನಾಡುತ್ತಿದ್ದಾರೆ. ರಾಯರಡ್ಡಿ ವಿರುದ್ಧ ಪ್ರತಿಭಟನೆ ನಡೆಸಿದವರು ಕಾಂಗ್ರೆಸ್ನವರೇ. ವಿಧಾನ ಪರಿಷತ್ನ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ್ ನೇತೃತ್ವದಲ್ಲೇ ಪ್ರತಿಭಟನೆ ನಡೆದಿದೆ’ ಎಂದರು.</p>.<p>‘ಜನಾರ್ದನ ರೆಡ್ಡಿ ಬೆಂಬಲಿಗರು ಮತ್ತು ನಕಲಿ ಕಾಂಗ್ರೆಸ್ನವರು ಸೇರಿ ಪ್ರತಿಭಟನೆ ನಡೆಸಿದ್ದಾರೆ’ ಎಂದು ರಾಯರಡ್ಡಿ ಹೇಳಿದರು.</p>.<p>ಬಳಿಕ ಉತ್ತರ ನೀಡಿದ ಪರಮೇಶ್ವರ, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿದ್ದು, ಐವರನ್ನು ಬಂಧಿಸಲಾಗಿದೆ. ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು.</p>.<p>‘ಫಾರ್ಮ್ ಸ್ಟೇ’ಗಳನ್ನು ತೆರವು ಮಾಡದಂತೆ ಜನಾರ್ದನ ರೆಡ್ಡಿ ಆಗ್ರಹಿಸಿದರು. ಕೆಲಕಾಲ ವಾಕ್ಸಮರವೂ ನಡೆಯಿತು. ಮಧ್ಯ ಪ್ರವೇಶಿಸಿದ ಸ್ಪೀಕರ್ ಯು.ಟಿ. ಖಾದರ್, ‘ದ್ವೇಷ ಮುಕ್ತ ಮತ್ತು ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲ ಶಾಸಕರೂ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಆನೆಗೊಂದಿ ಮಾದಕವಸ್ತು ಮಾಫಿಯಾ ಕೇಂದ್ರವಾಗಿದೆ ಎಂದು ವಿಧಾನಸಭೆಯಲ್ಲಿ ಹೇಳಿಕೆ ನೀಡಿದ್ದ ಶಾಸಕ ಬಸವರಾಜ ರಾಯರಡ್ಡಿ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಭಾವಚಿತ್ರ ದಹಿಸಿದ್ದ ಆರೋಪದ ಮೇಲೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.</p>.<p>ಬುಧವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ರಾಯರಡ್ಡಿ, ‘ಸೋಮವಾರ ನಾನು ಸದನದಲ್ಲಿ ಮಾತನಾಡಿದ್ದೆ. ಅದನ್ನು ವಿರೋಧಿಸಿ ಗಂಗಾವತಿಯಲ್ಲಿ ಪ್ರತಿಭಟನೆ ನಡೆಸಲಾಗಿದೆ. ನನ್ನ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಸುಟ್ಟಿದ್ದಾರೆ. ಬೆದರಿಕೆಯನ್ನೂ ಹಾಕುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಆಗ ಮಧ್ಯ ಪ್ರವೇಶಿಸಿದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿ. ಜನಾರ್ದನ ರೆಡ್ಡಿ, ‘ಪ್ರತಿಭಟನೆ ಕುರಿತು ನನ್ನತ್ತ ನೋಡಿ ಮಾತನಾಡುತ್ತಿದ್ದಾರೆ. ರಾಯರಡ್ಡಿ ವಿರುದ್ಧ ಪ್ರತಿಭಟನೆ ನಡೆಸಿದವರು ಕಾಂಗ್ರೆಸ್ನವರೇ. ವಿಧಾನ ಪರಿಷತ್ನ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ್ ನೇತೃತ್ವದಲ್ಲೇ ಪ್ರತಿಭಟನೆ ನಡೆದಿದೆ’ ಎಂದರು.</p>.<p>‘ಜನಾರ್ದನ ರೆಡ್ಡಿ ಬೆಂಬಲಿಗರು ಮತ್ತು ನಕಲಿ ಕಾಂಗ್ರೆಸ್ನವರು ಸೇರಿ ಪ್ರತಿಭಟನೆ ನಡೆಸಿದ್ದಾರೆ’ ಎಂದು ರಾಯರಡ್ಡಿ ಹೇಳಿದರು.</p>.<p>ಬಳಿಕ ಉತ್ತರ ನೀಡಿದ ಪರಮೇಶ್ವರ, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿದ್ದು, ಐವರನ್ನು ಬಂಧಿಸಲಾಗಿದೆ. ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು’ ಎಂದರು.</p>.<p>‘ಫಾರ್ಮ್ ಸ್ಟೇ’ಗಳನ್ನು ತೆರವು ಮಾಡದಂತೆ ಜನಾರ್ದನ ರೆಡ್ಡಿ ಆಗ್ರಹಿಸಿದರು. ಕೆಲಕಾಲ ವಾಕ್ಸಮರವೂ ನಡೆಯಿತು. ಮಧ್ಯ ಪ್ರವೇಶಿಸಿದ ಸ್ಪೀಕರ್ ಯು.ಟಿ. ಖಾದರ್, ‘ದ್ವೇಷ ಮುಕ್ತ ಮತ್ತು ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲ ಶಾಸಕರೂ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>