ವಿಚಾರಣೆ ವೇಳೆ ಪ್ರಕರಣದ ಪ್ರತಿವಾದಿಯೂ ಆದ ಡಿ.ಸಿ. ಗೌರಿಶಂಕರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ ಹಾರನಹಳ್ಳಿ, ‘ತುಮಕೂರು ತಾಲ್ಲೂಕಿನ ಹಳ್ಳಿಗಳಆರರಿಂದ ಹದಿನಾರು ವರ್ಷದ ಒಳಗಿನ ಸುಮಾರು 16,386 ರಷ್ಟು ವಿದ್ಯಾರ್ಥಿಗಳಿಗೆ ಒನ್ ರುಪಿ ಚಾರಿಟಿ ಟ್ರಸ್ಟ್ ಆರೋಗ್ಯ ವಿಮೆ ವಿತರಿಸಿದೆ. ದಿ ನ್ಯೂ ಇನ್ಶೂರೆನ್ಸ್ಇಂಡಿಯಾ ಕಂಪನಿಯು ಈ ಗುಂಪು ಆರೋಗ್ಯ ವಿಮೆ ಮಾಡಿಸಿದ್ದು, ಒಟ್ಟು ಪ್ರೀಮಿಯಂ ಮೊತ್ತ 6.57 ಲಕ್ಷ ಪಾವತಿ ಮಾಡಿದೆ’ ಎಂದರು.