ಯಶವಂತಪುರದ ಎಪಿಎಂಸಿ ಯಾರ್ಡ್ನ 6ನೇ ಮುಖ್ಯರಸ್ತೆಯಲ್ಲಿರುವ ಗಣೇಶ ದೇವಸ್ಥಾನ ಪಕ್ಕದ ಸಭಾಂಗಣದಲ್ಲಿ ಈ ನೋಂದಣಿ ಕಾರ್ಯಕ್ರಮವಿರುತ್ತದೆ. ದಿನಪತ್ರಿಕೆ ವಿತರಕರು ಮತ್ತು ಪತ್ರಿಕೆ ಹಂಚುವವರು ನೋಂದಣಿ ಮಾಡಿಸಿ, ‘ಇ–ಶ್ರಮ್’ ಕಾರ್ಡ್ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಶಂಭುಲಿಂಗ ಕೆ. ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.