<p><strong>ಯಲಹಂಕ: </strong>ಕಾಂಗ್ರೆಸ್ ತಂಡ, ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಬಿಜಿ ಸ್ವಯಂ ಸೇವಕರ ಸಂಘದ ಆಶ್ರಯದಲ್ಲಿ ಬ್ಯಾಟರಾಯನಪುರ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಆಯೋಜಿಸಿದ್ದ 3ನೇ ವಾರ್ಷಿಕ ‘ಇಂಟರ್ ಅಪಾರ್ಟ್ಮೆಂಟ್ ಸ್ಪೋರ್ಟ್ಸ್ ಫೆಸ್ಟ್-2025ʼ ಅನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಉದ್ಘಾಟಿಸಿದರು.<strong> </strong></p>.<p>ನಂತರ ಮಾತನಾಡಿದ ಅವರು, ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವಾರು ಅಪಾರ್ಟ್ಮೆಂಟ್ಗಳಿದ್ದು, ಇಲ್ಲಿನ ನಿವಾಸಿಗಳಿಗೆ ಸುತ್ತಮುತ್ತಲ ಬಡಾವಣೆಗಳ ಜನರ ಸಂಪರ್ಕವೇ ಇರುವುದಿಲ್ಲ. ಈ ದಿಸೆಯಲ್ಲಿ ಇವರಿಬ್ಬರ ನಡುವೆ ಸೌಹಾರ್ದ ಸಂಬಂಧವನ್ನು ಗಟ್ಟಿಗೊಳಿಸುವ ಸಲುವಾಗಿ ಕ್ರೀಡಾ ಉತ್ಸವ ಆಯೋಜಿಸಲಾಗಿದೆ ಎಂದರು.</p>.<p>ಕ್ಷೇತ್ರ ವ್ಯಾಪ್ತಿಯಲ್ಲಿ ನಾಲ್ಕು ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗಿದ್ದು, ಜಕ್ಕೂರು ಸಮೀಪದ ಡಾ.ಶಿವರಾಮ ಕಾರಂತ ಬಡಾವಣೆಯಲ್ಲಿ ಮತ್ತೊಂದು ಒಳಾಂಗಣ ಕ್ರೀಡಾಂಗಣ ನಿರ್ಮಾಣ ಪ್ರಗತಿಯಲ್ಲಿದೆ. ಈ ಸೌಲಭ್ಯಗಳ ಕುರಿತು ಜನರಿಗೆ ಮಾಹಿತಿ ನೀಡುವುದರ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಂಡು, ಒಳ್ಳೆಯ ಆರೋಗ್ಯ ಕಾಪಾಡಿಕೊಳ್ಳಬೇಕು. ಭವಿಷ್ಯದಲ್ಲಿ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಬೇಕೆಂಬ ಉದ್ದೇಶದಿಂದ ಪ್ರತಿವರ್ಷ ಕ್ರೀಡಾ ಉತ್ಸವ ಏರ್ಪಡಿಸಲಾಗುತ್ತಿದೆ ಎಂದು ತಿಳಿಸಿದರು </p>.<p>ಸಂಘಟಕಿ ಮೀನಾಕ್ಷಿ ಶೇಷಾದ್ರಿ ಮಾತನಾಡಿ, ಕ್ರಿಕೆಟ್, ವಾಲಿಬಾಲ್, ಫುಟ್ಬಾಲ್, ಚೆಸ್, ಕೇರಮ್, ಟೆಬಲ್ ಟೆನಿಸ್, ಹಗ್ಗ-ಜಗ್ಗಾಟ, ಬ್ಯಾಡ್ಮಿಂಟನ್ ಸೇರಿ ಒಟ್ಟು 14 ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದ್ದು, 3600 ಜನರು ಭಾಗವಹಿಸಿದ್ದಾರೆ ಎಂದರು.</p>.<p>ಲೀಗ್ ಹಂತದ ಪಂದ್ಯಗಳು ಮುಗಿದಿದ್ದು, ಭಾನುವಾರ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ನಡೆಯಲಿವೆ. ಸಂಜೆ 4 ಗಂಟೆಗೆ ಸಂಗೀತ ಕಾರ್ಯಕ್ರಮದ ನಂತರ ವಿಜೇತರಿಗೆ ಆಕರ್ಷಕ ಟ್ರೋಫಿ, ನಗದು ಹಾಗೂ ಎಲ್ಲ ಸ್ಪರ್ಧಿಗಳಿಗೆ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.</p>.<p>ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ಎಂ.ಜಯಗೋಪಾಲಗೌಡ, ಪಾರ್ತಿಬರಾಜನ್, ವಿ.ಹರಿ, ಎಚ್.ಎ.ಶಿವಕುಮಾರ್, ಹನುಮಂತಿ, ಕೆ.ದಿಲೀಪ್ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong>ಕಾಂಗ್ರೆಸ್ ತಂಡ, ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೆಬಿಜಿ ಸ್ವಯಂ ಸೇವಕರ ಸಂಘದ ಆಶ್ರಯದಲ್ಲಿ ಬ್ಯಾಟರಾಯನಪುರ ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಆಯೋಜಿಸಿದ್ದ 3ನೇ ವಾರ್ಷಿಕ ‘ಇಂಟರ್ ಅಪಾರ್ಟ್ಮೆಂಟ್ ಸ್ಪೋರ್ಟ್ಸ್ ಫೆಸ್ಟ್-2025ʼ ಅನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಉದ್ಘಾಟಿಸಿದರು.<strong> </strong></p>.<p>ನಂತರ ಮಾತನಾಡಿದ ಅವರು, ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವಾರು ಅಪಾರ್ಟ್ಮೆಂಟ್ಗಳಿದ್ದು, ಇಲ್ಲಿನ ನಿವಾಸಿಗಳಿಗೆ ಸುತ್ತಮುತ್ತಲ ಬಡಾವಣೆಗಳ ಜನರ ಸಂಪರ್ಕವೇ ಇರುವುದಿಲ್ಲ. ಈ ದಿಸೆಯಲ್ಲಿ ಇವರಿಬ್ಬರ ನಡುವೆ ಸೌಹಾರ್ದ ಸಂಬಂಧವನ್ನು ಗಟ್ಟಿಗೊಳಿಸುವ ಸಲುವಾಗಿ ಕ್ರೀಡಾ ಉತ್ಸವ ಆಯೋಜಿಸಲಾಗಿದೆ ಎಂದರು.</p>.<p>ಕ್ಷೇತ್ರ ವ್ಯಾಪ್ತಿಯಲ್ಲಿ ನಾಲ್ಕು ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗಿದ್ದು, ಜಕ್ಕೂರು ಸಮೀಪದ ಡಾ.ಶಿವರಾಮ ಕಾರಂತ ಬಡಾವಣೆಯಲ್ಲಿ ಮತ್ತೊಂದು ಒಳಾಂಗಣ ಕ್ರೀಡಾಂಗಣ ನಿರ್ಮಾಣ ಪ್ರಗತಿಯಲ್ಲಿದೆ. ಈ ಸೌಲಭ್ಯಗಳ ಕುರಿತು ಜನರಿಗೆ ಮಾಹಿತಿ ನೀಡುವುದರ ಜೊತೆಗೆ ಕ್ರೀಡೆಗಳಲ್ಲಿ ಪಾಲ್ಗೊಂಡು, ಒಳ್ಳೆಯ ಆರೋಗ್ಯ ಕಾಪಾಡಿಕೊಳ್ಳಬೇಕು. ಭವಿಷ್ಯದಲ್ಲಿ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಬೇಕೆಂಬ ಉದ್ದೇಶದಿಂದ ಪ್ರತಿವರ್ಷ ಕ್ರೀಡಾ ಉತ್ಸವ ಏರ್ಪಡಿಸಲಾಗುತ್ತಿದೆ ಎಂದು ತಿಳಿಸಿದರು </p>.<p>ಸಂಘಟಕಿ ಮೀನಾಕ್ಷಿ ಶೇಷಾದ್ರಿ ಮಾತನಾಡಿ, ಕ್ರಿಕೆಟ್, ವಾಲಿಬಾಲ್, ಫುಟ್ಬಾಲ್, ಚೆಸ್, ಕೇರಮ್, ಟೆಬಲ್ ಟೆನಿಸ್, ಹಗ್ಗ-ಜಗ್ಗಾಟ, ಬ್ಯಾಡ್ಮಿಂಟನ್ ಸೇರಿ ಒಟ್ಟು 14 ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದ್ದು, 3600 ಜನರು ಭಾಗವಹಿಸಿದ್ದಾರೆ ಎಂದರು.</p>.<p>ಲೀಗ್ ಹಂತದ ಪಂದ್ಯಗಳು ಮುಗಿದಿದ್ದು, ಭಾನುವಾರ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ನಡೆಯಲಿವೆ. ಸಂಜೆ 4 ಗಂಟೆಗೆ ಸಂಗೀತ ಕಾರ್ಯಕ್ರಮದ ನಂತರ ವಿಜೇತರಿಗೆ ಆಕರ್ಷಕ ಟ್ರೋಫಿ, ನಗದು ಹಾಗೂ ಎಲ್ಲ ಸ್ಪರ್ಧಿಗಳಿಗೆ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.</p>.<p>ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ಎಂ.ಜಯಗೋಪಾಲಗೌಡ, ಪಾರ್ತಿಬರಾಜನ್, ವಿ.ಹರಿ, ಎಚ್.ಎ.ಶಿವಕುಮಾರ್, ಹನುಮಂತಿ, ಕೆ.ದಿಲೀಪ್ಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>