<p><strong>ಬೆಂಗಳೂರು: </strong>ಬೆಂಗಳೂರು-ದೊಡ್ಡಬಳ್ಳಾಪುರ ಮಧ್ಯದ ರಾಜ್ಯ ಹೆದ್ದಾರಿ ಯಲ್ಲಿ ಟೋಲ್ ಸಂಗ್ರಹ ಮಾಡದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.</p>.<p>ಈ ಕುರಿತಂತೆ ದೊಡ್ಡಬಳ್ಳಾಪುರದ ವಕೀಲ ಜಿ. ವೆಂಕಟೇಶ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ರವಿ ಮಳಿಮಠ ಮತ್ತು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಪ್ರತಿವಾದಿಗಳಾದ ಲೋಕೋಪಯೋಗಿ ಇಲಾಖೆ ವಿಶೇಷಾಧಿಕಾರಿ ಮತ್ತು ‘ಯಲಹಂಕ ಎ ಪಿ ಬಾರ್ಡರ್ ಟೋಲ್ ಹೈವೇಸ್ ಪ್ರೈ.ಲಿ’ ಕಂಪನಿಗೆ ಟೋಲ್ ಸಂಗ್ರಹಿಸದಂತೆ ಮಧ್ಯಂತರ ನಿರ್ದೇಶನ ನೀಡಿತು.</p>.<p><strong>ಪ್ರಕರಣವೇನು?</strong></p>.<p>‘ಬೆಂಗಳೂರು-ದೊಡ್ಡಬಳ್ಳಾಪುರ ರಾಜ್ಯ ಹೆದ್ದಾರಿ ನಿರ್ಮಾಣ ಕಾಮಗಾರಿ ಪೂರ್ಣ ಗೊಳ್ಳದಿದ್ದರೂ ಅಕ್ರಮವಾಗಿ ಟೋಲ್ ಸಂಗ್ರಹಿಸಲಾಗುತ್ತಿದೆ’ ಎಂದು ಅರ್ಜಿ ದಾರರು ಆರೋಪಿಸಿದ್ದರು. ವಿಚಾರಣೆ ನಡೆಸಿದ್ದ ಪೀಠ, ‘ಕಾಮ ಗಾರಿ ಪರಿಶೀಲಿಸಿ ಎಂಜಿನಿಯರ್ ನೀಡುವ ವರದಿಯನ್ನು ಕೋರ್ಟ್ಗೆ ಸಲ್ಲಿಸಬೇಕು’ ಎಂದು ಸರ್ಕಾರಕ್ಕೆ ನಿರ್ದೇಶಿಸಿತ್ತು.</p>.<p>ಸರ್ಕಾರದ ಪರ ವಕೀಲರು ವರದಿ ಸಲ್ಲಿಸಿ, ‘ಕಾಮಗಾರಿ ಶೇ 75ರಷ್ಟು ಪೂರ್ಣ ಗೊಂಡಿದೆ’ ಎಂದರು. ಇದನ್ನು ಅರ್ಜಿದಾರರ ಪರ ವಕೀಲ ವೆಂಕಟೇಶ್ ಪಿ. ದಳವಾಯಿ ಆಕ್ಷೇಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೆಂಗಳೂರು-ದೊಡ್ಡಬಳ್ಳಾಪುರ ಮಧ್ಯದ ರಾಜ್ಯ ಹೆದ್ದಾರಿ ಯಲ್ಲಿ ಟೋಲ್ ಸಂಗ್ರಹ ಮಾಡದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.</p>.<p>ಈ ಕುರಿತಂತೆ ದೊಡ್ಡಬಳ್ಳಾಪುರದ ವಕೀಲ ಜಿ. ವೆಂಕಟೇಶ್ ಸಲ್ಲಿಸಿರುವ ಅರ್ಜಿಯನ್ನು ನ್ಯಾ. ರವಿ ಮಳಿಮಠ ಮತ್ತು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಪ್ರತಿವಾದಿಗಳಾದ ಲೋಕೋಪಯೋಗಿ ಇಲಾಖೆ ವಿಶೇಷಾಧಿಕಾರಿ ಮತ್ತು ‘ಯಲಹಂಕ ಎ ಪಿ ಬಾರ್ಡರ್ ಟೋಲ್ ಹೈವೇಸ್ ಪ್ರೈ.ಲಿ’ ಕಂಪನಿಗೆ ಟೋಲ್ ಸಂಗ್ರಹಿಸದಂತೆ ಮಧ್ಯಂತರ ನಿರ್ದೇಶನ ನೀಡಿತು.</p>.<p><strong>ಪ್ರಕರಣವೇನು?</strong></p>.<p>‘ಬೆಂಗಳೂರು-ದೊಡ್ಡಬಳ್ಳಾಪುರ ರಾಜ್ಯ ಹೆದ್ದಾರಿ ನಿರ್ಮಾಣ ಕಾಮಗಾರಿ ಪೂರ್ಣ ಗೊಳ್ಳದಿದ್ದರೂ ಅಕ್ರಮವಾಗಿ ಟೋಲ್ ಸಂಗ್ರಹಿಸಲಾಗುತ್ತಿದೆ’ ಎಂದು ಅರ್ಜಿ ದಾರರು ಆರೋಪಿಸಿದ್ದರು. ವಿಚಾರಣೆ ನಡೆಸಿದ್ದ ಪೀಠ, ‘ಕಾಮ ಗಾರಿ ಪರಿಶೀಲಿಸಿ ಎಂಜಿನಿಯರ್ ನೀಡುವ ವರದಿಯನ್ನು ಕೋರ್ಟ್ಗೆ ಸಲ್ಲಿಸಬೇಕು’ ಎಂದು ಸರ್ಕಾರಕ್ಕೆ ನಿರ್ದೇಶಿಸಿತ್ತು.</p>.<p>ಸರ್ಕಾರದ ಪರ ವಕೀಲರು ವರದಿ ಸಲ್ಲಿಸಿ, ‘ಕಾಮಗಾರಿ ಶೇ 75ರಷ್ಟು ಪೂರ್ಣ ಗೊಂಡಿದೆ’ ಎಂದರು. ಇದನ್ನು ಅರ್ಜಿದಾರರ ಪರ ವಕೀಲ ವೆಂಕಟೇಶ್ ಪಿ. ದಳವಾಯಿ ಆಕ್ಷೇಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>