<p><strong>ಬೆಂಗಳೂರು</strong>: ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಒಳ ಮೀಸಲಾತಿ ಹೋರಾಟ ಸಮಿತಿ ನೇತೃತ್ವದಲ್ಲಿ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು.</p>.<p>ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಮಾದಿಗ, ಅಲೆಮಾರಿ ಹಾಗೂ ಇತರೆ ಸಮುದಾಯಗಳ ಸಾವಿರಾರು ಜನರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ‘ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ’ ಎಂಬ ಘೋಷಣೆಗಳನ್ನು ಮೊಳಗಿಸಿದರು.</p>.<p>ಮೂರು ದಶಕಗಳಿಂದ ಹೋರಾಟ ನಡೆಸುತ್ತಿದ್ದರೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನೇತೃತ್ವದ ಸರ್ಕಾರಗಳು ಬೇಡಿಕೆ ಈಡೇರಿಸಲಿಲ್ಲ. ಚುನಾವಣೆ ಸಂದರ್ಭದಲ್ಲಿ ಕೇವಲ ಭರವಸೆ ನೀಡಿ ಮೋಸ ಮಾಡುತ್ತಿವೆ ಎಂದು ಸಮುದಾಯದ ನಾಯಕರು ಕಿಡಿ ಕಾರಿದರು.</p>.<p>ಒಳಮೀಸಲಾತಿ ತಪ್ಪಿಸುವ ಹುನ್ನಾರದಿಂದ ಫೆಬ್ರುವರಿ 27ರಂದು ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂಪಡೆದು, ನೇಮಕಾತಿಯಲ್ಲಿ ಒಳಮೀಸಲಾತಿ ಕಡ್ಡಾಯಗೊಳಿಸಬೇಕು. ನೇರ ನೇಮಕಾತಿ, ಬಡ್ತಿ, ಮುಂಬಡ್ತಿ ಮತ್ತು ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಯಲ್ಲಿ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡ ಬಸವರಾಜ್ ಕೌತಾಳ್ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 27ರವರೆಗೂ ಕಾಯದೆ ಎರಡು ದಿನದಲ್ಲಿ ಸಂಪುಟ ಸಭೆ ನಡೆಸಿ, ತೀರ್ಮಾನ ಪ್ರಕಟಿಸಬೇಕು. ನೇಮಕಾತಿಗಳಲ್ಲಿ ವಿಶ್ವವಿದ್ಯಾಲಯವನ್ನು ಒಂದು ಘಟಕ ಎಂದು ಪರಿಗಣಿಸಬೇಕು ಎನ್ನುವ ಪ್ರಸ್ತಾವ ಕೈಬಿಡಬೇಕು. ಅಲೆಮಾರಿ ಸಮುದಾಯಗಳಿಗೆ ಶೇಕಡ 1ರಷ್ಟು ಪ್ರತ್ಯೇಕ ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಮಾತನಾಡಿ, ‘ಒಳಮೀಸಲಾತಿ ಜಾರಿ ಮಾಡಲು ಸರ್ಕಾರ ಹಿಂದೇಟು ಹಾಕಬಾರದು. ದಲಿತರು, ಮುಸ್ಲಿಂ ಸಮುದಾಯದವರು ಒಂದಾದರೆ 131 ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಬಹುದು. ಮೀಸಲಾತಿ ಪಡೆಯುವವರೆಗೂ ಹೋರಾಟ ನಿಲ್ಲಿಸಬೇಡಿ’ ಎಂದು ಕರೆ ನೀಡಿದರು.</p>.<p>ಇದೇ ವೇಳೆ ಕ್ರಾಂತಿಕಾರಿ ಗೀತೆಗಳನ್ನು ಹಾಡಲಾಯಿತು.</p>.<p>ಪ್ರತಿಭಟನೆಯಲ್ಲಿ ಮುಖಂಡರಾದ ಮಾರಸಂದ್ರ ಮುನಿಯಪ್ಪ, ಹನುಮೇಗೌಡ ಬೀರನಕಲ್, ಎಸ್.ಮಾರಪ್ಪ, ಅಂಬಣ್ಣ ಅರೋಲಿಕರ್, ನರಸಪ್ಪ ದಂಡೋರ, ಬಿ.ಆರ್. ಭಾಸ್ಕರ್ ಪ್ರಸಾದ್, ಹರಿರಾಮ್, ಕೇಶವಮೂರ್ತಿ, ಫರ್ನಾಂಡಿಸ್ ಇಪ್ಪಳಗಾಂವ್, ಕರಿಯಪ್ಪ ಗುಡಿಮನಿ ಭಾಗವಹಿಸಿದ್ದರು.</p>.<p><strong>ತೀರ್ಮಾನಕ್ಕೆ ಒಂದು ದಿನ ಸಾಕು: ಮಾದಾರ ಚನ್ನಯ್ಯ ಶ್ರೀ </strong></p><p>‘ಈ ಬಗ್ಗೆ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿಗೆ ಒಂದು ದಿನ ಸಾಕು. ಮಾದಿಗ ಹಾಗೂ ಇತರೆ ಸಮುದಾಯಕ್ಕೆ ಒಳ ಮೀಸಲಾತಿ ನೀಡಲು ಇಷ್ಟವಿಲ್ಲದಿದ್ದರೆ ಸರ್ಕಾರ ನಿರ್ಧಾರ ತಿಳಿಸಲಿ. ಮುಂದಿನ ದಾರಿ ನೋಡಿಕೊಳ್ಳುತ್ತೇವೆ’ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಎಚ್ಚರಿಸಿದರು. </p><p>ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು ‘ಒಳ ಮೀಸಲಾತಿಗಾಗಿ ನಡೆದ ಹೋರಾಟದಲ್ಲಿ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಸದಾಶಿವ ಆಯೋಗ ನಾಗಮೋಹನದಾಸ್ ಆಯೋಗದ ವರದಿಯನ್ನು ತಿರಸ್ಕರಿಸಲಾಗಿದೆ. ತೆಲಂಗಾಣ ಆಂಧ್ರಪ್ರದೇಶ ಪಂಜಾಬ್ನಲ್ಲಿ ಒಳಮೀಸಲಾತಿ ಜಾರಿಯಾಗಿದೆ. ಈ ರಾಜ್ಯಗಳಲ್ಲಿಇಲ್ಲದ ಕಾನೂನು ತೊಡಕು ಕರ್ನಾಟಕದಲ್ಲಿ ಮಾತ್ರ ಏಕೆ ಇದೆ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಒಳ ಮೀಸಲಾತಿ ಹೋರಾಟ ಸಮಿತಿ ನೇತೃತ್ವದಲ್ಲಿ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು.</p>.<p>ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಮಾದಿಗ, ಅಲೆಮಾರಿ ಹಾಗೂ ಇತರೆ ಸಮುದಾಯಗಳ ಸಾವಿರಾರು ಜನರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ‘ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ’ ಎಂಬ ಘೋಷಣೆಗಳನ್ನು ಮೊಳಗಿಸಿದರು.</p>.<p>ಮೂರು ದಶಕಗಳಿಂದ ಹೋರಾಟ ನಡೆಸುತ್ತಿದ್ದರೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನೇತೃತ್ವದ ಸರ್ಕಾರಗಳು ಬೇಡಿಕೆ ಈಡೇರಿಸಲಿಲ್ಲ. ಚುನಾವಣೆ ಸಂದರ್ಭದಲ್ಲಿ ಕೇವಲ ಭರವಸೆ ನೀಡಿ ಮೋಸ ಮಾಡುತ್ತಿವೆ ಎಂದು ಸಮುದಾಯದ ನಾಯಕರು ಕಿಡಿ ಕಾರಿದರು.</p>.<p>ಒಳಮೀಸಲಾತಿ ತಪ್ಪಿಸುವ ಹುನ್ನಾರದಿಂದ ಫೆಬ್ರುವರಿ 27ರಂದು ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂಪಡೆದು, ನೇಮಕಾತಿಯಲ್ಲಿ ಒಳಮೀಸಲಾತಿ ಕಡ್ಡಾಯಗೊಳಿಸಬೇಕು. ನೇರ ನೇಮಕಾತಿ, ಬಡ್ತಿ, ಮುಂಬಡ್ತಿ ಮತ್ತು ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಯಲ್ಲಿ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡ ಬಸವರಾಜ್ ಕೌತಾಳ್ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 27ರವರೆಗೂ ಕಾಯದೆ ಎರಡು ದಿನದಲ್ಲಿ ಸಂಪುಟ ಸಭೆ ನಡೆಸಿ, ತೀರ್ಮಾನ ಪ್ರಕಟಿಸಬೇಕು. ನೇಮಕಾತಿಗಳಲ್ಲಿ ವಿಶ್ವವಿದ್ಯಾಲಯವನ್ನು ಒಂದು ಘಟಕ ಎಂದು ಪರಿಗಣಿಸಬೇಕು ಎನ್ನುವ ಪ್ರಸ್ತಾವ ಕೈಬಿಡಬೇಕು. ಅಲೆಮಾರಿ ಸಮುದಾಯಗಳಿಗೆ ಶೇಕಡ 1ರಷ್ಟು ಪ್ರತ್ಯೇಕ ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿದರು.</p>.<p>ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಮಾತನಾಡಿ, ‘ಒಳಮೀಸಲಾತಿ ಜಾರಿ ಮಾಡಲು ಸರ್ಕಾರ ಹಿಂದೇಟು ಹಾಕಬಾರದು. ದಲಿತರು, ಮುಸ್ಲಿಂ ಸಮುದಾಯದವರು ಒಂದಾದರೆ 131 ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಬಹುದು. ಮೀಸಲಾತಿ ಪಡೆಯುವವರೆಗೂ ಹೋರಾಟ ನಿಲ್ಲಿಸಬೇಡಿ’ ಎಂದು ಕರೆ ನೀಡಿದರು.</p>.<p>ಇದೇ ವೇಳೆ ಕ್ರಾಂತಿಕಾರಿ ಗೀತೆಗಳನ್ನು ಹಾಡಲಾಯಿತು.</p>.<p>ಪ್ರತಿಭಟನೆಯಲ್ಲಿ ಮುಖಂಡರಾದ ಮಾರಸಂದ್ರ ಮುನಿಯಪ್ಪ, ಹನುಮೇಗೌಡ ಬೀರನಕಲ್, ಎಸ್.ಮಾರಪ್ಪ, ಅಂಬಣ್ಣ ಅರೋಲಿಕರ್, ನರಸಪ್ಪ ದಂಡೋರ, ಬಿ.ಆರ್. ಭಾಸ್ಕರ್ ಪ್ರಸಾದ್, ಹರಿರಾಮ್, ಕೇಶವಮೂರ್ತಿ, ಫರ್ನಾಂಡಿಸ್ ಇಪ್ಪಳಗಾಂವ್, ಕರಿಯಪ್ಪ ಗುಡಿಮನಿ ಭಾಗವಹಿಸಿದ್ದರು.</p>.<p><strong>ತೀರ್ಮಾನಕ್ಕೆ ಒಂದು ದಿನ ಸಾಕು: ಮಾದಾರ ಚನ್ನಯ್ಯ ಶ್ರೀ </strong></p><p>‘ಈ ಬಗ್ಗೆ ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿಗೆ ಒಂದು ದಿನ ಸಾಕು. ಮಾದಿಗ ಹಾಗೂ ಇತರೆ ಸಮುದಾಯಕ್ಕೆ ಒಳ ಮೀಸಲಾತಿ ನೀಡಲು ಇಷ್ಟವಿಲ್ಲದಿದ್ದರೆ ಸರ್ಕಾರ ನಿರ್ಧಾರ ತಿಳಿಸಲಿ. ಮುಂದಿನ ದಾರಿ ನೋಡಿಕೊಳ್ಳುತ್ತೇವೆ’ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಎಚ್ಚರಿಸಿದರು. </p><p>ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು ‘ಒಳ ಮೀಸಲಾತಿಗಾಗಿ ನಡೆದ ಹೋರಾಟದಲ್ಲಿ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಸದಾಶಿವ ಆಯೋಗ ನಾಗಮೋಹನದಾಸ್ ಆಯೋಗದ ವರದಿಯನ್ನು ತಿರಸ್ಕರಿಸಲಾಗಿದೆ. ತೆಲಂಗಾಣ ಆಂಧ್ರಪ್ರದೇಶ ಪಂಜಾಬ್ನಲ್ಲಿ ಒಳಮೀಸಲಾತಿ ಜಾರಿಯಾಗಿದೆ. ಈ ರಾಜ್ಯಗಳಲ್ಲಿಇಲ್ಲದ ಕಾನೂನು ತೊಡಕು ಕರ್ನಾಟಕದಲ್ಲಿ ಮಾತ್ರ ಏಕೆ ಇದೆ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>