<p><strong>ಬೆಂಗಳೂರು:</strong> ‘ಬಹಳ ವರ್ಷದಿಂದ ಈ ಭಾಗದ ಜನರು ಕಂಡಿದ್ದ ಕನಸು ಇಂದು ಕಾಂಗ್ರೆಸ್ ಸರ್ಕಾರದಿಂದ ನನಸಾಗಿದೆ’ ಎಂದು ವಸತಿ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಹೇಳಿದರು.</p>.<p>ಆನೇಕಲ್ ತಾಲ್ಲೂಕಿನ ಸೂರ್ಯನಗರದ ಕೆ.ಎಚ್.ಬಿ ಸೂರ್ಯ ಕ್ರೀಡಾ ಗ್ರಾಮದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಈ ಭಾಗದಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ಹಾಗೂ ಶಾಲೆ ನಿರ್ಮಾಣ ಮಾಡುವುದಾಗಿ ತಿಳಿಸಿದ ನಂತರ ರೈತರು ಜಮೀನು ನೀಡಲು ಒಪ್ಪಿದ್ದರು. ವಿ. ಸೋಮಣ್ಣ ವಸತಿ ಸಚಿವರಾಗಿದ್ದಾಗಲೂ ಯೋಜನೆ ಸಾಕಾರಗೊಳಿಸಲು ಪ್ರಯತ್ನಿಸಿದರು. ಆದರೆ ಆಗಲಿಲ್ಲ. ಇದೀಗ ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಒತ್ತಾಸೆ ಮೇರೆಗೆ ಈ ಯೋಜನೆ ಸಾಕಾರಗೊಂಡಿದೆ’ ಎಂದರು.</p>.<p>ಗುಜರಾತ್ನ ಅಹಮದಾಬಾದ್<br>ನಲ್ಲಿರುವ ಕ್ರೀಡಾಂಗಣದ ಆಸನ ಸಾಮರ್ಥ್ಯ 1.32 ಲಕ್ಷ. ಸೂರ್ಯ ನಗರದಲ್ಲಿ ನಿರ್ಮಾಣವಾಗುತ್ತಿರುವುದು ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣವಾಗಲಿದೆ. ರೈತರಿಗೆ ಕೊಟ್ಟ ಮಾತಿನಂತೆ ಶಾಲೆ ನಿರ್ಮಿಸಲು ಹತ್ತು ಎಕರೆ ಜಮೀನು ಮೀಸಲಿಡಲಾಗುವುದು ಎಂದು ಹೇಳಿದರು.</p>.<p>‘1,209 ನಿವೇಶನಗಳಿಗೆ 16 ಸಾವಿರ ಅರ್ಜಿ ಬಂದಿದೆ ಎಂದರೆ ಬಹಳ ಬೇಡಿಕೆ ಇದೆ. ಹೆಚ್ಚಿನ ನಿವೇಶನಗಳನ್ನು ಹೊರಗಿನವರೇ ಖರೀದಿಸುತ್ತಿದ್ದು, ಶೇಕಡ 50 ನಿವೇಶನ ಸ್ಥಳೀಯರಿಗೆ ನೀಡುವಂತೆ ಸುರೇಶ್ ಅವರು ಹೇಳಿದ್ದಾರೆ. ಮುಂದಿನ ಯೋಜನೆಗಳಲ್ಲಿ ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮಾತನಾಡಿ, ‘ಆನೇಕಲ್ ಭಾಗಕ್ಕೆ ಮೆಟ್ರೊ ಸಂಪರ್ಕ ಕುರಿತು ಸರ್ವೇ ಕಾರ್ಯ ಆರಂಭವಾಗಿದೆ. ಆದಷ್ಟು ಬೇಗ ಈ ಯೋಜನೆಗಳನ್ನು ಜಾರಿಗೆ ತರಬೇಕು. ಮುಂದಿನ ದಿನಗಳಲ್ಲಿ ಇದೇ ಭಾಗದಲ್ಲಿ 6 ಪಥದ ಎಸ್ಟಿಆರ್ಆರ್ ರಸ್ತೆ ಬರುತ್ತಿದ್ದು, 1 ಕಿ.ಮೀ ದೂರದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಇಲ್ಲಿಂದ 4 ಕಿ.ಮೀ. ದೂರದಲ್ಲಿ ಅತ್ತಿಬೆಲೆಯ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಸಾಧಿಸಬಹುದಾಗಿದೆ’ ಎಂದರು.</p>.<p>ಯುವಕರು ಕ್ರೀಡೆಯತ್ತ ಆಸಕ್ತಿ ವಹಿಸಬೇಕಾದರೆ, ಕ್ರೀಡಾಪಟುಗಳಿಗೆ ಉತ್ತೇಜನ ನೀಡಬೇಕಾದರೆ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣ ಮಾಡಬೇಕು. ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಮಾಡಬೇಕು ಎಂದು ಹೇಳಿದರು.</p>.<p>27 ಕ್ರೀಡೆಗಳ ಕ್ರೀಡಾಂಗಣ: ‘ಸೂರ್ಯ ನಗರ ಕ್ರೀಡಾ ಸಂಕೀರ್ಣದಲ್ಲಿ 27 ಕ್ರೀಡೆಗಳ ಕ್ರೀಡಾಂಗಣ ಬರಲಿದ್ದು, ₹2,000 ಕೋಟಿ ಮೊತ್ತದಲ್ಲಿ ಯೋಜನೆ ಅನುಷ್ಠಾನ ಆಗಲಿದೆ. ಮೆಟ್ರೊ ಸಂಪರ್ಕ ಅಗತ್ಯವಿದ್ದು, ರಸ್ತೆ ಅಭಿವೃದ್ಧಿ ಹಾಗೂ ಇತರೆ ಮೂಲಸೌಕರ್ಯಕ್ಕೆ ಆದ್ಯತೆ ನೀಡಬೇಕು’ ಎಂದು ಆನೇಕಲ್ ಶಾಸಕ ಬಿ. ಶಿವಣ್ಣ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದರು.</p>.<p>ಇದೇ ವೇಳೆ ಕರ್ನಾಟಕ ಗೃಹ ಮಂಡಳಿ ನಡೆದು ಬಂದ ಹಾದಿ ಕುರಿತ ಕಾಫಿ ಟೇಬಲ್ ಅನ್ನು ಬಿಡುಗಡೆ ಮಾಡಲಾಯಿತು.</p>.<div><blockquote>ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ಹಾಗೂ ಕ್ರೀಡಾ ಸಂಕೀರ್ಣ ನಿರ್ಮಾಣದ ಮೂಲಕ ಕಾಂಗ್ರೆಸ್ ಸರ್ಕಾರ ಬೆಂಗಳೂರಿಗೆ ದೊಡ್ಡ ಕೊಡುಗೆ ನೀಡುತ್ತಿದೆ. <br></blockquote><span class="attribution">ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ</span></div>.<h2> ಕ್ರೀಡಾಂಗಣ ರಾಜ್ಯದ ಹೆಮ್ಮೆ: ಶಿವಲಿಂಗೇಗೌಡ </h2><p>ಕ್ರೀಡೆಗಳ ಆಯೋಜನೆ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕಕ್ಕೆ ಈ ಕ್ರೀಡಾಂಗಣ ಹೆಮ್ಮ ತರಲಿದೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ‘ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಘಡ ಸಂಭವಿಸಿದ ನಂತರ ನಗರದ ಹೊರವಲಯದಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲು ಸಚಿವ ಸಂಪುಟವು ಅನುಮೋದನೆ ನೀಡಿತು. ಕ್ರೀಡಾಂಗಣವನ್ನು ಸರ್ಕಾರ ಮಾಡಬೇಕಾಗಿತ್ತು ಗೃಹ ಮಂಡಳಿ ಯಾಕೆ ಮಾಡಬೇಕೆಂದು ವಿರೋಧ ಪಕ್ಷದವರು ಟೀಕಿಸಿದ್ದಾರೆ. ಆದರೆ ಹೌಸಿಂಗ್ ಬೋರ್ಡ್ ಹಣ ಸರ್ಕಾರದ ಹಣ ಎನ್ನುವುದು ಅವರಿಗೆ ಗೊತ್ತಿಲ್ಲ ಎನ್ನಿಸುತ್ತದೆ. ಕಾನೂನು ಚೌಕಟ್ಟಿನಲ್ಲಿ ಗೃಹ ಮಂಡಳಿಗೆ ಬೃಹತ್ ಯೋಜನೆ ಕೈಗೊಳ್ಳಲು ಅವಕಾಶವಿದೆ’ ಎಂದರು. ಇಂತಹ ಒಳ್ಳೆಯ ಕಾರ್ಯದಲ್ಲಿ ಅಪಶಕುನ ಆಡಬಾರದು. ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಈ ಯೋಜನೆ ಬಹಳ ಮುಖ್ಯವಾಗಿದೆ. ಗುಜರಾತ್ ಹೊರತುಪಡಿಸಿದರೆ ಇಡೀ ದೇಶದಲ್ಲಿ ಇದೇ ಅತಿ ದೊಡ್ಡ ಕ್ರೀಡಾಂಗಣ ಆಗಲಿದೆ. ಇದರಿಂದ ರಾಜ್ಯಕ್ಕೆ ಹೆಚ್ಚು ಗೌರವ ತರುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬಹಳ ವರ್ಷದಿಂದ ಈ ಭಾಗದ ಜನರು ಕಂಡಿದ್ದ ಕನಸು ಇಂದು ಕಾಂಗ್ರೆಸ್ ಸರ್ಕಾರದಿಂದ ನನಸಾಗಿದೆ’ ಎಂದು ವಸತಿ ಸಚಿವ ಬಿ.ಝಡ್. ಜಮೀರ್ ಅಹಮದ್ ಖಾನ್ ಹೇಳಿದರು.</p>.<p>ಆನೇಕಲ್ ತಾಲ್ಲೂಕಿನ ಸೂರ್ಯನಗರದ ಕೆ.ಎಚ್.ಬಿ ಸೂರ್ಯ ಕ್ರೀಡಾ ಗ್ರಾಮದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಈ ಭಾಗದಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ಹಾಗೂ ಶಾಲೆ ನಿರ್ಮಾಣ ಮಾಡುವುದಾಗಿ ತಿಳಿಸಿದ ನಂತರ ರೈತರು ಜಮೀನು ನೀಡಲು ಒಪ್ಪಿದ್ದರು. ವಿ. ಸೋಮಣ್ಣ ವಸತಿ ಸಚಿವರಾಗಿದ್ದಾಗಲೂ ಯೋಜನೆ ಸಾಕಾರಗೊಳಿಸಲು ಪ್ರಯತ್ನಿಸಿದರು. ಆದರೆ ಆಗಲಿಲ್ಲ. ಇದೀಗ ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಒತ್ತಾಸೆ ಮೇರೆಗೆ ಈ ಯೋಜನೆ ಸಾಕಾರಗೊಂಡಿದೆ’ ಎಂದರು.</p>.<p>ಗುಜರಾತ್ನ ಅಹಮದಾಬಾದ್<br>ನಲ್ಲಿರುವ ಕ್ರೀಡಾಂಗಣದ ಆಸನ ಸಾಮರ್ಥ್ಯ 1.32 ಲಕ್ಷ. ಸೂರ್ಯ ನಗರದಲ್ಲಿ ನಿರ್ಮಾಣವಾಗುತ್ತಿರುವುದು ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣವಾಗಲಿದೆ. ರೈತರಿಗೆ ಕೊಟ್ಟ ಮಾತಿನಂತೆ ಶಾಲೆ ನಿರ್ಮಿಸಲು ಹತ್ತು ಎಕರೆ ಜಮೀನು ಮೀಸಲಿಡಲಾಗುವುದು ಎಂದು ಹೇಳಿದರು.</p>.<p>‘1,209 ನಿವೇಶನಗಳಿಗೆ 16 ಸಾವಿರ ಅರ್ಜಿ ಬಂದಿದೆ ಎಂದರೆ ಬಹಳ ಬೇಡಿಕೆ ಇದೆ. ಹೆಚ್ಚಿನ ನಿವೇಶನಗಳನ್ನು ಹೊರಗಿನವರೇ ಖರೀದಿಸುತ್ತಿದ್ದು, ಶೇಕಡ 50 ನಿವೇಶನ ಸ್ಥಳೀಯರಿಗೆ ನೀಡುವಂತೆ ಸುರೇಶ್ ಅವರು ಹೇಳಿದ್ದಾರೆ. ಮುಂದಿನ ಯೋಜನೆಗಳಲ್ಲಿ ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.</p>.<p>ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮಾತನಾಡಿ, ‘ಆನೇಕಲ್ ಭಾಗಕ್ಕೆ ಮೆಟ್ರೊ ಸಂಪರ್ಕ ಕುರಿತು ಸರ್ವೇ ಕಾರ್ಯ ಆರಂಭವಾಗಿದೆ. ಆದಷ್ಟು ಬೇಗ ಈ ಯೋಜನೆಗಳನ್ನು ಜಾರಿಗೆ ತರಬೇಕು. ಮುಂದಿನ ದಿನಗಳಲ್ಲಿ ಇದೇ ಭಾಗದಲ್ಲಿ 6 ಪಥದ ಎಸ್ಟಿಆರ್ಆರ್ ರಸ್ತೆ ಬರುತ್ತಿದ್ದು, 1 ಕಿ.ಮೀ ದೂರದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿದೆ. ಇಲ್ಲಿಂದ 4 ಕಿ.ಮೀ. ದೂರದಲ್ಲಿ ಅತ್ತಿಬೆಲೆಯ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಸಾಧಿಸಬಹುದಾಗಿದೆ’ ಎಂದರು.</p>.<p>ಯುವಕರು ಕ್ರೀಡೆಯತ್ತ ಆಸಕ್ತಿ ವಹಿಸಬೇಕಾದರೆ, ಕ್ರೀಡಾಪಟುಗಳಿಗೆ ಉತ್ತೇಜನ ನೀಡಬೇಕಾದರೆ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣ ಮಾಡಬೇಕು. ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಮಾಡಬೇಕು ಎಂದು ಹೇಳಿದರು.</p>.<p>27 ಕ್ರೀಡೆಗಳ ಕ್ರೀಡಾಂಗಣ: ‘ಸೂರ್ಯ ನಗರ ಕ್ರೀಡಾ ಸಂಕೀರ್ಣದಲ್ಲಿ 27 ಕ್ರೀಡೆಗಳ ಕ್ರೀಡಾಂಗಣ ಬರಲಿದ್ದು, ₹2,000 ಕೋಟಿ ಮೊತ್ತದಲ್ಲಿ ಯೋಜನೆ ಅನುಷ್ಠಾನ ಆಗಲಿದೆ. ಮೆಟ್ರೊ ಸಂಪರ್ಕ ಅಗತ್ಯವಿದ್ದು, ರಸ್ತೆ ಅಭಿವೃದ್ಧಿ ಹಾಗೂ ಇತರೆ ಮೂಲಸೌಕರ್ಯಕ್ಕೆ ಆದ್ಯತೆ ನೀಡಬೇಕು’ ಎಂದು ಆನೇಕಲ್ ಶಾಸಕ ಬಿ. ಶಿವಣ್ಣ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದರು.</p>.<p>ಇದೇ ವೇಳೆ ಕರ್ನಾಟಕ ಗೃಹ ಮಂಡಳಿ ನಡೆದು ಬಂದ ಹಾದಿ ಕುರಿತ ಕಾಫಿ ಟೇಬಲ್ ಅನ್ನು ಬಿಡುಗಡೆ ಮಾಡಲಾಯಿತು.</p>.<div><blockquote>ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ಹಾಗೂ ಕ್ರೀಡಾ ಸಂಕೀರ್ಣ ನಿರ್ಮಾಣದ ಮೂಲಕ ಕಾಂಗ್ರೆಸ್ ಸರ್ಕಾರ ಬೆಂಗಳೂರಿಗೆ ದೊಡ್ಡ ಕೊಡುಗೆ ನೀಡುತ್ತಿದೆ. <br></blockquote><span class="attribution">ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ</span></div>.<h2> ಕ್ರೀಡಾಂಗಣ ರಾಜ್ಯದ ಹೆಮ್ಮೆ: ಶಿವಲಿಂಗೇಗೌಡ </h2><p>ಕ್ರೀಡೆಗಳ ಆಯೋಜನೆ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕಕ್ಕೆ ಈ ಕ್ರೀಡಾಂಗಣ ಹೆಮ್ಮ ತರಲಿದೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ‘ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವಘಡ ಸಂಭವಿಸಿದ ನಂತರ ನಗರದ ಹೊರವಲಯದಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಿಸಲು ಸಚಿವ ಸಂಪುಟವು ಅನುಮೋದನೆ ನೀಡಿತು. ಕ್ರೀಡಾಂಗಣವನ್ನು ಸರ್ಕಾರ ಮಾಡಬೇಕಾಗಿತ್ತು ಗೃಹ ಮಂಡಳಿ ಯಾಕೆ ಮಾಡಬೇಕೆಂದು ವಿರೋಧ ಪಕ್ಷದವರು ಟೀಕಿಸಿದ್ದಾರೆ. ಆದರೆ ಹೌಸಿಂಗ್ ಬೋರ್ಡ್ ಹಣ ಸರ್ಕಾರದ ಹಣ ಎನ್ನುವುದು ಅವರಿಗೆ ಗೊತ್ತಿಲ್ಲ ಎನ್ನಿಸುತ್ತದೆ. ಕಾನೂನು ಚೌಕಟ್ಟಿನಲ್ಲಿ ಗೃಹ ಮಂಡಳಿಗೆ ಬೃಹತ್ ಯೋಜನೆ ಕೈಗೊಳ್ಳಲು ಅವಕಾಶವಿದೆ’ ಎಂದರು. ಇಂತಹ ಒಳ್ಳೆಯ ಕಾರ್ಯದಲ್ಲಿ ಅಪಶಕುನ ಆಡಬಾರದು. ವೇಗವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಈ ಯೋಜನೆ ಬಹಳ ಮುಖ್ಯವಾಗಿದೆ. ಗುಜರಾತ್ ಹೊರತುಪಡಿಸಿದರೆ ಇಡೀ ದೇಶದಲ್ಲಿ ಇದೇ ಅತಿ ದೊಡ್ಡ ಕ್ರೀಡಾಂಗಣ ಆಗಲಿದೆ. ಇದರಿಂದ ರಾಜ್ಯಕ್ಕೆ ಹೆಚ್ಚು ಗೌರವ ತರುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>