<p>ಬೆಂಗಳೂರು: ‘ವಿಧವೆಯರ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ ಉತ್ತಮಪಡಿಸುವ ವಾತಾವರಣ ನಿರ್ಮಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯೆ ತಾರಾ ಅನೂರಾಧಾ ಹೇಳಿದರು.</p>.<p>ಪರಿಹಾರ್ ಫೌಂಡೇಷನ್ ವತಿಯಿಂದ ಆರ್.ವಿ.ಟೀಚರ್ಸ್ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ವಿಧವೆಯರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಜುಲೈ 2ರಂದು ನಡೆಯಲಿರುವ ಬಜೆಜ್ ಅಧಿವೇಶನದಲ್ಲಿ ವಿಧವೆ, ವಿಚ್ಛೇದಿತರು ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗೆ ಹೆಚ್ಚು ಸೌಲಭ್ಯ ನೀಡುವಂತೆ ಒತ್ತಾಯಿಸುವೆ’ ಎಂದರು.</p>.<p>ಶಾಸಕಿ ಸೌಮ್ಯಾರೆಡ್ಡಿ ಮಾತನಾಡಿ, ‘ಆರ್ಥಿಕ, ಸಾಮಾಜಿಕ, ಆರೋಗ್ಯ ಸೌಲಭ್ಯ ಮತ್ತು<br />ತಿಂಗಳಿಗಾಗುವಷ್ಟು ಪಡಿತರ ವ್ಯವಸ್ಥೆ ಸೇರಿದಂತೆ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸಲು ಹಲವು ಕಾರ್ಯಕ್ರಮಗಳನ್ನು ಸಂಸ್ಥೆ ಜಾರಿಗೆ ತಂದಿರುವುದು ಶ್ಲಾಘನೀಯ’ ಎಂದು ಹೇಳಿದರು.</p>.<p>ಕಿರುತೆರೆ ನಟಿ ಭಾರ್ಗವಿ ನಾರಾಯಣ್ ಮಾತನಾಡಿ, ‘ವಿಧವೆಯರನ್ನು ಸಮಾಜದ ಮುಖ್ಯವಾಹಿ ನಿಗೆ ತರುವ ಜವಾಬ್ದಾರಿ ಸರ್ಕಾರ ಮತ್ತು ಸಮಾಜದ ಹೊಣೆ’ ಎಂದರು.</p>.<p>ಸಂಸ್ಥೆಯ ಸಂಸ್ಥಾಪಕ ಡಾ.ಎನ್.ಬಿ.ಜಯಪ್ರಕಾಶ್ ಮಾತನಾಡಿ, ‘ ವಿಧವೆಯರಿಗೆ ಸಂಸ್ಥೆಯು ಆರೋಗ್ಯ ಸಿರಿ, ಸ್ಪಂದನ, ಮಿಲನ, ಮಿಥರಾ ಮತ್ತು ಸ್ವಾತನ್ಯ ಎಂಬ ಯೋಜನೆಗಳನ್ನು ರೂಪಿಸಲಾಗಿದೆ’ ಎಂದು ವಿವರಿಸಿದರು.</p>.<p>ವಿಧವೆಯರು ನೆರವಿಗಾಗಿ ದೂ.080-41482727 ಅನ್ನು ಸಂಪರ್ಕಿಸಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ವಿಧವೆಯರ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ ಉತ್ತಮಪಡಿಸುವ ವಾತಾವರಣ ನಿರ್ಮಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯೆ ತಾರಾ ಅನೂರಾಧಾ ಹೇಳಿದರು.</p>.<p>ಪರಿಹಾರ್ ಫೌಂಡೇಷನ್ ವತಿಯಿಂದ ಆರ್.ವಿ.ಟೀಚರ್ಸ್ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ವಿಧವೆಯರ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಜುಲೈ 2ರಂದು ನಡೆಯಲಿರುವ ಬಜೆಜ್ ಅಧಿವೇಶನದಲ್ಲಿ ವಿಧವೆ, ವಿಚ್ಛೇದಿತರು ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗೆ ಹೆಚ್ಚು ಸೌಲಭ್ಯ ನೀಡುವಂತೆ ಒತ್ತಾಯಿಸುವೆ’ ಎಂದರು.</p>.<p>ಶಾಸಕಿ ಸೌಮ್ಯಾರೆಡ್ಡಿ ಮಾತನಾಡಿ, ‘ಆರ್ಥಿಕ, ಸಾಮಾಜಿಕ, ಆರೋಗ್ಯ ಸೌಲಭ್ಯ ಮತ್ತು<br />ತಿಂಗಳಿಗಾಗುವಷ್ಟು ಪಡಿತರ ವ್ಯವಸ್ಥೆ ಸೇರಿದಂತೆ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸಲು ಹಲವು ಕಾರ್ಯಕ್ರಮಗಳನ್ನು ಸಂಸ್ಥೆ ಜಾರಿಗೆ ತಂದಿರುವುದು ಶ್ಲಾಘನೀಯ’ ಎಂದು ಹೇಳಿದರು.</p>.<p>ಕಿರುತೆರೆ ನಟಿ ಭಾರ್ಗವಿ ನಾರಾಯಣ್ ಮಾತನಾಡಿ, ‘ವಿಧವೆಯರನ್ನು ಸಮಾಜದ ಮುಖ್ಯವಾಹಿ ನಿಗೆ ತರುವ ಜವಾಬ್ದಾರಿ ಸರ್ಕಾರ ಮತ್ತು ಸಮಾಜದ ಹೊಣೆ’ ಎಂದರು.</p>.<p>ಸಂಸ್ಥೆಯ ಸಂಸ್ಥಾಪಕ ಡಾ.ಎನ್.ಬಿ.ಜಯಪ್ರಕಾಶ್ ಮಾತನಾಡಿ, ‘ ವಿಧವೆಯರಿಗೆ ಸಂಸ್ಥೆಯು ಆರೋಗ್ಯ ಸಿರಿ, ಸ್ಪಂದನ, ಮಿಲನ, ಮಿಥರಾ ಮತ್ತು ಸ್ವಾತನ್ಯ ಎಂಬ ಯೋಜನೆಗಳನ್ನು ರೂಪಿಸಲಾಗಿದೆ’ ಎಂದು ವಿವರಿಸಿದರು.</p>.<p>ವಿಧವೆಯರು ನೆರವಿಗಾಗಿ ದೂ.080-41482727 ಅನ್ನು ಸಂಪರ್ಕಿಸಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>