ಪಾಲಿಕೆ ಮಾಜಿ ಸದಸ್ಯ ಕೆ.ನಾಗಭೂಷಣ್ ಮಾತನಾಡಿ, ‘ಮಹಿಳೆ ಸ್ವಾವಲಂಬಿಯಾದರೆ ಕುಟುಂಬದ ಏಳಿಗೆಯ ಜತೆಗೆ ದೇಶದ ಪ್ರಗತಿಯೂ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಿರಂತರವಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಸಬಲೀಕರಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಹಿಳೆಯರಿಗೆ ಬದುಕು ಕಟ್ಟಿಕೊಳ್ಳಲು ಅಗತ್ಯ ನೆರವು ನೀಡಲಾಗುತ್ತಿದೆ. ಮಹಿಳೆಯರ ಸುರಕ್ಷತೆ ಹಾಗೂ ಸುಭದ್ರತೆಗಾಗಿ ದಿಟ್ಟ ಕ್ರಮಗಳನ್ನು ಕೈಗೊಂಡಿರುವ ಕಾರಣ ಕ್ಷೇತ್ರದಲ್ಲಿ ಲಕ್ಷಾಂತರ ಮಹಿಳೆಯರು ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ನಿರಾತಂಕವಾಗಿ ಉದ್ಯೋಗ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ’ ಎಂದು ಹೇಳಿದರು.