<p><strong>ಪೀಣ್ಯ ದಾಸರಹಳ್ಳಿ</strong>: ‘ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಅಸ್ಮಿತೆಯೊಂದಿಗೆ ಪ್ರತಿಭೆಯನ್ನು ಮರೆಯುತ್ತಿರುವುದು ಒಳ್ಳೆಯ ಬೆಳವಣಿಗೆ’ ಎಂದು ಸಾಹಿತಿ ವೈ.ಬಿ.ಎಚ್. ಜಯದೇವ್ ಅಭಿಪ್ರಾಯಪಟ್ಟರು.</p>.<p>ಹಾವನೂರು ಬಡಾವಣೆಯ ಭೂಮಿಕಾ ಸೇವಾ ಫೌಂಡೇಶನ್ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>‘ಮಹಿಳೆ ಶೈಕ್ಷಣಿಕ, ಆರ್ಥಿಕವಾಗಿ ಸಬಲೆಯಾಗಿ ಸ್ವಾವಲಂಬಿಯಾಗಿದ್ದಾಳೆ. ತಾಂತ್ರಿಕ ಯುಗದಲ್ಲೂ ಮಹಿಳೆ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಅಪಾರ ಸಾಧನೆ ಮಾಡುತ್ತಿರುವುದು ಶ್ಲಾಘನೀಯ. ಪುರುಷರ ಸಮಾನ ಸ್ಥಾನಮಾನವನ್ನು ಸಂಪಾದಿಸಿದ್ದಾಳೆ’ ಎಂದು ಹೇಳಿದರು.</p>.<p>ಶಾಸಕ ಎಸ್. ಮುನಿರಾಜು ಮಾತನಾಡಿ, ‘ಎಲ್ಲ ರಂಗದಲ್ಲೂ ಯಶಸ್ವಿಯಾಗಿ ಕಾರ್ಯನಿರ್ವಹಿಸುವ ಶಕ್ತಿಯನ್ನು ಭಗವಂತ ಮಹಿಳೆಯರಿಗೆ ನೀಡಿದ್ದಾನೆ. ಶಕ್ತಿ ದೇವರ ಪೂಜೆ ಮಾಡಿ ಕುಟುಂಬವನ್ನು ಆರೋಗ್ಯವಂತರನ್ನಾಗಿ ಕಾಪಾಡಿಕೊಳ್ಳುವ ಕಾಳಜಿ ಮಹಿಳೆಯರಿಗಿದೆ’ ಎಂದರು.</p>.<p>ಫೌಂಡೇಶನ್ ಅಧ್ಯಕ್ಷೆ ಲತಾ ಕುಂದರಗಿ, ‘ನಮ್ಮ ಸಂಸ್ಥೆಯಿಂದ ಮಹಿಳೆಯರಿಗೆ ಉಚಿತ ಕಂಪ್ಯೂಟರ್, ಹೊಲಿಗೆ, ಬ್ಯೂಟಿಷಿಯನ್ ತರಬೇತಿ ನೀಡಿ ಅವರಿಗೆ ತರಬೇತಿ ಪ್ರಮಾಣ ಪತ್ರ ನೀಡಲಾಗುತ್ತಿದೆ’ ಎಂದರು.</p>.<p>ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಅಭಿನಂದಿಸಲಾಯಿತು. ಸೇಂಟ್ ಮಾರ್ಕ್ಸ್ ಶಾಲೆಯ ಪ್ರಾಂಶುಪಾಲರಾದ ಚೈತ್ರ ಗೌಡ, ಆಸೆಂಟ್ ಕಾಲೇಜಿನ ಉಪನ್ಯಾಸಕಿ ಶ್ವೇತಾ ವೆಂಕಟೇಶ್, ಕನ್ನಡ ಸೇನೆ ಖಜಾಂಚಿ ರಾಜೇಂದ್ರ ಕೊಣ್ಣೂರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ</strong>: ‘ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಅಸ್ಮಿತೆಯೊಂದಿಗೆ ಪ್ರತಿಭೆಯನ್ನು ಮರೆಯುತ್ತಿರುವುದು ಒಳ್ಳೆಯ ಬೆಳವಣಿಗೆ’ ಎಂದು ಸಾಹಿತಿ ವೈ.ಬಿ.ಎಚ್. ಜಯದೇವ್ ಅಭಿಪ್ರಾಯಪಟ್ಟರು.</p>.<p>ಹಾವನೂರು ಬಡಾವಣೆಯ ಭೂಮಿಕಾ ಸೇವಾ ಫೌಂಡೇಶನ್ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.</p>.<p>‘ಮಹಿಳೆ ಶೈಕ್ಷಣಿಕ, ಆರ್ಥಿಕವಾಗಿ ಸಬಲೆಯಾಗಿ ಸ್ವಾವಲಂಬಿಯಾಗಿದ್ದಾಳೆ. ತಾಂತ್ರಿಕ ಯುಗದಲ್ಲೂ ಮಹಿಳೆ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಅಪಾರ ಸಾಧನೆ ಮಾಡುತ್ತಿರುವುದು ಶ್ಲಾಘನೀಯ. ಪುರುಷರ ಸಮಾನ ಸ್ಥಾನಮಾನವನ್ನು ಸಂಪಾದಿಸಿದ್ದಾಳೆ’ ಎಂದು ಹೇಳಿದರು.</p>.<p>ಶಾಸಕ ಎಸ್. ಮುನಿರಾಜು ಮಾತನಾಡಿ, ‘ಎಲ್ಲ ರಂಗದಲ್ಲೂ ಯಶಸ್ವಿಯಾಗಿ ಕಾರ್ಯನಿರ್ವಹಿಸುವ ಶಕ್ತಿಯನ್ನು ಭಗವಂತ ಮಹಿಳೆಯರಿಗೆ ನೀಡಿದ್ದಾನೆ. ಶಕ್ತಿ ದೇವರ ಪೂಜೆ ಮಾಡಿ ಕುಟುಂಬವನ್ನು ಆರೋಗ್ಯವಂತರನ್ನಾಗಿ ಕಾಪಾಡಿಕೊಳ್ಳುವ ಕಾಳಜಿ ಮಹಿಳೆಯರಿಗಿದೆ’ ಎಂದರು.</p>.<p>ಫೌಂಡೇಶನ್ ಅಧ್ಯಕ್ಷೆ ಲತಾ ಕುಂದರಗಿ, ‘ನಮ್ಮ ಸಂಸ್ಥೆಯಿಂದ ಮಹಿಳೆಯರಿಗೆ ಉಚಿತ ಕಂಪ್ಯೂಟರ್, ಹೊಲಿಗೆ, ಬ್ಯೂಟಿಷಿಯನ್ ತರಬೇತಿ ನೀಡಿ ಅವರಿಗೆ ತರಬೇತಿ ಪ್ರಮಾಣ ಪತ್ರ ನೀಡಲಾಗುತ್ತಿದೆ’ ಎಂದರು.</p>.<p>ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಅಭಿನಂದಿಸಲಾಯಿತು. ಸೇಂಟ್ ಮಾರ್ಕ್ಸ್ ಶಾಲೆಯ ಪ್ರಾಂಶುಪಾಲರಾದ ಚೈತ್ರ ಗೌಡ, ಆಸೆಂಟ್ ಕಾಲೇಜಿನ ಉಪನ್ಯಾಸಕಿ ಶ್ವೇತಾ ವೆಂಕಟೇಶ್, ಕನ್ನಡ ಸೇನೆ ಖಜಾಂಚಿ ರಾಜೇಂದ್ರ ಕೊಣ್ಣೂರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>