ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಸಂದರ್ಶನ ಪಡೆದ ಕಂಪನಿ ಹೆಸರಿನಲ್ಲಿ ₹ 5.03 ಲಕ್ಷ ವಂಚನೆ

Last Updated 3 ಜೂನ್ 2021, 17:03 IST
ಅಕ್ಷರ ಗಾತ್ರ

ಬೆಂಗಳೂರು: ಸಂದರ್ಶನ ನೀಡಿದ್ದ ಕಂಪನಿ ಹೆಸರಿನಲ್ಲಿ ಅಭ್ಯರ್ಥಿಯನ್ನು ಸಂಪರ್ಕಿಸಿದ್ದ ಆನ್‌ಲೈನ್ ವಂಚಕರು, ಕೆಲಸ ಕೊಡಿಸುವ ಆಮಿಷವೊಡ್ಡಿ ₹ 5.03 ಲಕ್ಷ ಪಡೆದು ವಂಚಿಸಿದ್ದಾರೆ.

ವೈಟ್‌ಫೀಲ್ಡ್‌ ನಿವಾಸಿಯಾಗಿರುವ 21 ವರ್ಷದ ಯುವಕ ವಂಚನೆ ಬಗ್ಗೆ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಶ್ರವಣ್‌ಕುಮಾರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

‘ದೂರುದಾರ ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಫೆಬ್ರುವರಿ 21ರಂದು ಮಾರತ್ತಹಳ್ಳಿಯಲ್ಲಿರುವ ಕಂಪನಿಯೊಂದರ ಸಂದರ್ಶನಕ್ಕೆ ಹಾಜರಾಗಿದ್ದರು. ಆದರೆ, ಅವರು ಸಂದರ್ಶನದಲ್ಲಿ ಅನುತ್ತೀರ್ಣರಾಗಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಅದೇ ಕಂಪನಿ ಹೆಸರಿನಲ್ಲೇ ದೂರುದಾರರನ್ನು ಸಂಪರ್ಕಿಸಿದ್ದ ಆರೋಪಿ ಶ್ರವಣ್‌ಕುಮಾರ್, ಕೆಲ ಶುಲ್ಕಗಳನ್ನು ಹಾಗೂ ಕಮಿಷನರ್ ಕೊಟ್ಟರೆ ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿದ್ದ. ಅದನ್ನು ನಂಬಿದ್ದ ದೂರುದಾರ, ಹಂತ ಹಂತವಾಗಿ ₹ 5.03 ಲಕ್ಷ ನೀಡಿದ್ದರು. ಅದಾದ ನಂತರ ಆರೋಪಿ ನಾಪತ್ತೆಯಾಗಿದ್ದಾನೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT