‘ಸಿಎಸ್ಎಸ್ ಗ್ರೂಪ್ ಕಂಪನಿಯಲ್ಲಿ ಹುದ್ದೆಗಳು ಖಾಲಿ ಇವೆ. ಜ. 11ರಂದು ಬೆಳಿಗ್ಗೆ ಸಂದರ್ಶನಕ್ಕೆ ಬನ್ನಿ’ ಆರೋಪಿಗಳು ಸಂದೇಶ ಕಳುಹಿಸಿದ್ದರು. ಅದನ್ನು ನಂಬಿದ್ದ ಪ್ರದೀಪ್, ನಿಗದಿತ ದಿನದಂದು ಬೆಂಗಳೂರಿಗೆ ಬಂದಿದ್ದರು. ಅವರನ್ನು ಕಾರಿನಲ್ಲಿ ಹತ್ತಿಸಿಕೊಂಡು ನಗರದಲ್ಲಿ ಸುತ್ತಾಡಿಸಿದ್ದ ಆರೋಪಿಗಳು, ಜೀವ ಬೆದರಿಕೆಯೊಡ್ಡಿ ₹ 6.18 ಲಕ್ಷ ಸುಲಿಗೆ ಮಾಡಿದ್ದರು. ಬಳಿಕ, ದೂರುದಾರರನ್ನು ಬಿಟ್ಟು ಪರಾರಿಯಾಗಿದ್ದರು’ ಎಂದು ಹೇಳಿದರು.