<p><strong>ಬೆಂಗಳೂರು: </strong>ಸಾಫ್ಟ್ವೇರ್ ಕಂಪನಿ ಹೆಸರಿನಲ್ಲಿ ಸಂದರ್ಶನಕ್ಕೆ ಕರೆದು ಅಭ್ಯರ್ಥಿಯೊಬ್ಬರನ್ನು ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ನಾಲ್ವರು ಆರೋಪಿಗಳನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಆಂಧ್ರಪ್ರದೇಶದ ಮಲ್ಲ ಶಿವಶಂಕರ್ ರೆಡ್ಡಿ ಅಲಿಯಾಸ್ ಗೋಪಿಚಂದ್ (26), ಗುಂಜ ಮಂಗರಾವ್ (35), ಶೇಖ್ ಶಹಬಾಷಿ (30) ಹಾಗೂ ಮಹೇಶ್ (21) ಬಂಧಿತರು. ಇವರ ಬ್ಯಾಂಕ್ ಖಾತೆಯಲ್ಲಿದ್ದ ₹ 5.95 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಖಾಸಗಿ ಕಂಪನಿ ಉದ್ಯೋಗಿಗಳಾದ ಆರೋಪಿಗಳು, ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಇರುವುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಜಾಹೀರಾತು ನೀಡುತ್ತಿದ್ದರು. ಆರೋಪಿ ಮಲ್ಲು ಶಿವಶಂಕರ್ ರೆಡ್ಡಿ, ಗೋಪಿಚಂದ್ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ಖಾತೆ ತೆರೆದಿದ್ದ. ಅದೇ ಖಾತೆ ಮೂಲಕ ದೂರುದಾರ ಪ್ರದೀಪ್ ಅವರನ್ನು ಪರಿಷಯ ಮಾಡಿಕೊಂಡಿದ್ದ’ ಎಂದು ತಿಳಿಸಿದರು.</p>.<p>‘ಸಿಎಸ್ಎಸ್ ಗ್ರೂಪ್ ಕಂಪನಿಯಲ್ಲಿ ಹುದ್ದೆಗಳು ಖಾಲಿ ಇವೆ. ಜ. 11ರಂದು ಬೆಳಿಗ್ಗೆ ಸಂದರ್ಶನಕ್ಕೆ ಬನ್ನಿ’ ಆರೋಪಿಗಳು ಸಂದೇಶ ಕಳುಹಿಸಿದ್ದರು. ಅದನ್ನು ನಂಬಿದ್ದ ಪ್ರದೀಪ್, ನಿಗದಿತ ದಿನದಂದು ಬೆಂಗಳೂರಿಗೆ ಬಂದಿದ್ದರು. ಅವರನ್ನು ಕಾರಿನಲ್ಲಿ ಹತ್ತಿಸಿಕೊಂಡು ನಗರದಲ್ಲಿ ಸುತ್ತಾಡಿಸಿದ್ದ ಆರೋಪಿಗಳು, ಜೀವ ಬೆದರಿಕೆಯೊಡ್ಡಿ ₹ 6.18 ಲಕ್ಷ ಸುಲಿಗೆ ಮಾಡಿದ್ದರು. ಬಳಿಕ, ದೂರುದಾರರನ್ನು ಬಿಟ್ಟು ಪರಾರಿಯಾಗಿದ್ದರು’ ಎಂದು ಹೇಳಿದರು.</p>.<p>‘ಅಪಹರಣ ಹಾಗೂ ಸುಲಿಗೆ ಸಂಬಂಧ ಪ್ರದೀಪ್ ದೂರು ನೀಡಿದ್ದರು. ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಸುಲಿಗೆ ಮಾಡಿದ್ದ ಹಣದಲ್ಲಿ ಸ್ವಲ್ಪ ಹಣವನ್ನು ಆರೋಪಿಗಳು ಖರ್ಚು ಮಾಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಾಫ್ಟ್ವೇರ್ ಕಂಪನಿ ಹೆಸರಿನಲ್ಲಿ ಸಂದರ್ಶನಕ್ಕೆ ಕರೆದು ಅಭ್ಯರ್ಥಿಯೊಬ್ಬರನ್ನು ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ನಾಲ್ವರು ಆರೋಪಿಗಳನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಆಂಧ್ರಪ್ರದೇಶದ ಮಲ್ಲ ಶಿವಶಂಕರ್ ರೆಡ್ಡಿ ಅಲಿಯಾಸ್ ಗೋಪಿಚಂದ್ (26), ಗುಂಜ ಮಂಗರಾವ್ (35), ಶೇಖ್ ಶಹಬಾಷಿ (30) ಹಾಗೂ ಮಹೇಶ್ (21) ಬಂಧಿತರು. ಇವರ ಬ್ಯಾಂಕ್ ಖಾತೆಯಲ್ಲಿದ್ದ ₹ 5.95 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಖಾಸಗಿ ಕಂಪನಿ ಉದ್ಯೋಗಿಗಳಾದ ಆರೋಪಿಗಳು, ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಇರುವುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಜಾಹೀರಾತು ನೀಡುತ್ತಿದ್ದರು. ಆರೋಪಿ ಮಲ್ಲು ಶಿವಶಂಕರ್ ರೆಡ್ಡಿ, ಗೋಪಿಚಂದ್ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ಖಾತೆ ತೆರೆದಿದ್ದ. ಅದೇ ಖಾತೆ ಮೂಲಕ ದೂರುದಾರ ಪ್ರದೀಪ್ ಅವರನ್ನು ಪರಿಷಯ ಮಾಡಿಕೊಂಡಿದ್ದ’ ಎಂದು ತಿಳಿಸಿದರು.</p>.<p>‘ಸಿಎಸ್ಎಸ್ ಗ್ರೂಪ್ ಕಂಪನಿಯಲ್ಲಿ ಹುದ್ದೆಗಳು ಖಾಲಿ ಇವೆ. ಜ. 11ರಂದು ಬೆಳಿಗ್ಗೆ ಸಂದರ್ಶನಕ್ಕೆ ಬನ್ನಿ’ ಆರೋಪಿಗಳು ಸಂದೇಶ ಕಳುಹಿಸಿದ್ದರು. ಅದನ್ನು ನಂಬಿದ್ದ ಪ್ರದೀಪ್, ನಿಗದಿತ ದಿನದಂದು ಬೆಂಗಳೂರಿಗೆ ಬಂದಿದ್ದರು. ಅವರನ್ನು ಕಾರಿನಲ್ಲಿ ಹತ್ತಿಸಿಕೊಂಡು ನಗರದಲ್ಲಿ ಸುತ್ತಾಡಿಸಿದ್ದ ಆರೋಪಿಗಳು, ಜೀವ ಬೆದರಿಕೆಯೊಡ್ಡಿ ₹ 6.18 ಲಕ್ಷ ಸುಲಿಗೆ ಮಾಡಿದ್ದರು. ಬಳಿಕ, ದೂರುದಾರರನ್ನು ಬಿಟ್ಟು ಪರಾರಿಯಾಗಿದ್ದರು’ ಎಂದು ಹೇಳಿದರು.</p>.<p>‘ಅಪಹರಣ ಹಾಗೂ ಸುಲಿಗೆ ಸಂಬಂಧ ಪ್ರದೀಪ್ ದೂರು ನೀಡಿದ್ದರು. ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಸುಲಿಗೆ ಮಾಡಿದ್ದ ಹಣದಲ್ಲಿ ಸ್ವಲ್ಪ ಹಣವನ್ನು ಆರೋಪಿಗಳು ಖರ್ಚು ಮಾಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>