ಈ ಸಂಬಂಧ ಟ್ವಿಟರ್ನಲ್ಲಿ ಬರೆದುಕೊಂಡಿರುವ ಅವರು, ‘ಪಾದರಾಯನಪುರದಲ್ಲಿ ಕ್ವಾರಂಟೈನ್ನಲ್ಲಿರಬೇಕಾದ ಕೆಲವು ಮಹಿಳೆಯರು ಹೊರಗೆ ಹೋದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ. ನಾಡಿನ ಜನರ ಆರೋಗ್ಯದ ವಿಷಯದಲ್ಲಿ ಆಟವಾಡುವ ಇಂತಹ ಘಟನೆ ಸಹಿಸಲು ಅಸಾಧ್ಯ. ಇವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಲಾಗುವುದು. ನಾಡಿನ ಜನತೆಯ ಆರೋಗ್ಯ ಕಾಪಾಡುವುದೇ ನಮ್ಮ ಮುಖ್ಯ ಧ್ಯೇಯ’ ಎಂದು ತಿಳಿಸಿದ್ದಾರೆ.