ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರಂಟೈನ್‌ನಿಂದ ಹೊರಗೆ ಹೋದವರ ವಿರುದ್ಧ ತನಿಖೆ: ಶ್ರೀರಾಮುಲು

Last Updated 11 ಮೇ 2020, 17:25 IST
ಅಕ್ಷರ ಗಾತ್ರ

ಬೆಂಗಳೂರು: ಕ್ವಾರಂಟೈನ್‌ನ‌ಲ್ಲಿ ಇರಿಸಲಾಗಿದ್ದ ಕೆಲವು ಮಹಿಳೆಯರು ಹೊರಗೆ ಹೋಗಿದ್ದಾರೆ. ಅಂತಹವರ ವಿರುದ್ಧ ತನಿಖೆಗೆ ಆದೇಶ ನೀಡಲಾಗಿದ್ದು, ಕ್ರಮಕೈಗೊಳ್ಳಲಾಗುವುದುಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ.

ಈ ಸಂಬಂಧ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, ‘ಪಾದರಾಯನಪುರದಲ್ಲಿ ಕ್ವಾರಂಟೈನ್‌ನಲ್ಲಿರಬೇಕಾದ ಕೆಲವು ಮಹಿಳೆಯರು ಹೊರಗೆ ಹೋದ ಬಗ್ಗೆ ತನಿಖೆಗೆ ಸೂಚಿಸಲಾಗಿದೆ. ನಾಡಿನ ಜನರ ಆರೋಗ್ಯದ ವಿಷಯದಲ್ಲಿ ಆಟವಾಡುವ ಇಂತಹ ಘಟನೆ ಸಹಿಸಲು ಅಸಾಧ್ಯ. ಇವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಲಾಗುವುದು. ನಾಡಿನ ಜನತೆಯ ಆರೋಗ್ಯ ಕಾಪಾಡುವುದೇ ನಮ್ಮ ಮುಖ್ಯ ಧ್ಯೇಯ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT