<p><strong>ಬೆಂಗಳೂರು:</strong> ಷೇರು ಪೇಟೆಯಲ್ಲಿ ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಲಾಭಾಂಶ ಕೊಡುವುದಾಗಿ ನಂಬಿಸಿ ವಂಚಕರು ಖಾಸಗಿ ಕಂಪನಿ ಉದ್ಯೋಗಿಯೊಬ್ಬರಿಗೆ ₹55 ಲಕ್ಷ ವಂಚಿಸಿರುವ ಘಟನೆ ನಡೆದಿದೆ.</p>.<p>ಕೆ.ಆರ್.ಪುರ ಠಾಣೆ ವ್ಯಾಪ್ತಿಯ ಹ್ಯಾಪಿ ಗಾರ್ಡನ್ ಲೇಔಟ್ ನಿವಾಸಿ ಪ್ರಶಾಂತ್ ಕುಮಾರ್ ಅವರ ದೂರು ಆಧರಿಸಿ ವೈಟ್ಫೀಲ್ಡ್ ಸೆನ್ ಕ್ರೈಂ ವಿಭಾಗದ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. <br><br>‘ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಭವಾಗಲಿದೆ ಎಂದು ವಂಚಕರು, ಪ್ರಶಾಂತ್ ಅವರಿಗೆ ಸಂದೇಶ ಕಳುಹಿಸಿದ್ದರು. ಇವರ ಮೊಬೈಲ್ ನಂಬರ್ ಅನ್ನು ವಿವಿಧ ವಾಟ್ಸ್ ಆ್ಯಪ್ ಗ್ರೂಪ್ಗಳಿಗೆ ಸೇರಿಸಿದ್ದರು. ವಂಚಕರ ಮಾತು ನಿಜವೆಂದು ನಂಬಿದ ದೂರುದಾರ, ₹50 ಸಾವಿರ, ₹35 ಸಾವಿರ ಹೂಡಿಕೆ ಮಾಡಿದ್ದರು‘ ಎಂದು ಪೊಲೀಸರು ತಿಳಿಸಿದರು.</p>.<p>‘ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ದೂರುದಾರರನ್ನು ವಂಚಕರು ನಂಬಿಸಿದ್ದರು. ಹಲವು ರಾಷ್ಟ್ರೀಕೃತ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ₹55 ಲಕ್ಷವನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದರು. ಕೇವಲ ₹2 ಲಕ್ಷ ಮಾತ್ರ ಲಾಭಾಂಶ ನೀಡಿ, ಉಳಿದ ಹಣ ₹52 ಲಕ್ಷ ಪಡೆಯಬೇಕಾದರೆ ಹೆಚ್ಚಿನ ಹಣ ಹೂಡಿಕೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು’ ಎಂದು ಹೇಳಿದರು.</p>.<p>ಅನುಮಾನಗೊಂಡ ಪ್ರಶಾಂತ್ ಪೊಲೀಸರಿಗೆ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳ ವಿವರವನ್ನು ಪರಿಶೀಲನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಷೇರು ಪೇಟೆಯಲ್ಲಿ ಹೆಚ್ಚಿನ ಹಣ ಹೂಡಿಕೆ ಮಾಡಿದರೆ ಲಾಭಾಂಶ ಕೊಡುವುದಾಗಿ ನಂಬಿಸಿ ವಂಚಕರು ಖಾಸಗಿ ಕಂಪನಿ ಉದ್ಯೋಗಿಯೊಬ್ಬರಿಗೆ ₹55 ಲಕ್ಷ ವಂಚಿಸಿರುವ ಘಟನೆ ನಡೆದಿದೆ.</p>.<p>ಕೆ.ಆರ್.ಪುರ ಠಾಣೆ ವ್ಯಾಪ್ತಿಯ ಹ್ಯಾಪಿ ಗಾರ್ಡನ್ ಲೇಔಟ್ ನಿವಾಸಿ ಪ್ರಶಾಂತ್ ಕುಮಾರ್ ಅವರ ದೂರು ಆಧರಿಸಿ ವೈಟ್ಫೀಲ್ಡ್ ಸೆನ್ ಕ್ರೈಂ ವಿಭಾಗದ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. <br><br>‘ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಭವಾಗಲಿದೆ ಎಂದು ವಂಚಕರು, ಪ್ರಶಾಂತ್ ಅವರಿಗೆ ಸಂದೇಶ ಕಳುಹಿಸಿದ್ದರು. ಇವರ ಮೊಬೈಲ್ ನಂಬರ್ ಅನ್ನು ವಿವಿಧ ವಾಟ್ಸ್ ಆ್ಯಪ್ ಗ್ರೂಪ್ಗಳಿಗೆ ಸೇರಿಸಿದ್ದರು. ವಂಚಕರ ಮಾತು ನಿಜವೆಂದು ನಂಬಿದ ದೂರುದಾರ, ₹50 ಸಾವಿರ, ₹35 ಸಾವಿರ ಹೂಡಿಕೆ ಮಾಡಿದ್ದರು‘ ಎಂದು ಪೊಲೀಸರು ತಿಳಿಸಿದರು.</p>.<p>‘ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ದೂರುದಾರರನ್ನು ವಂಚಕರು ನಂಬಿಸಿದ್ದರು. ಹಲವು ರಾಷ್ಟ್ರೀಕೃತ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ₹55 ಲಕ್ಷವನ್ನು ವಂಚಕರ ಖಾತೆಗೆ ವರ್ಗಾಯಿಸಿದ್ದರು. ಕೇವಲ ₹2 ಲಕ್ಷ ಮಾತ್ರ ಲಾಭಾಂಶ ನೀಡಿ, ಉಳಿದ ಹಣ ₹52 ಲಕ್ಷ ಪಡೆಯಬೇಕಾದರೆ ಹೆಚ್ಚಿನ ಹಣ ಹೂಡಿಕೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು’ ಎಂದು ಹೇಳಿದರು.</p>.<p>ಅನುಮಾನಗೊಂಡ ಪ್ರಶಾಂತ್ ಪೊಲೀಸರಿಗೆ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳ ವಿವರವನ್ನು ಪರಿಶೀಲನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>