<p><strong>ನಾಟಕ ಸ್ಪರ್ಧೆಗೆ ಅರ್ಜಿ ಆಹ್ವಾನ</strong></p><p>ಬೆಂಗಳೂರು: ಎ.ಎಸ್. ಮೂರ್ತಿ ಪ್ರಾರಂಭಿಸಿದ ಚಿತ್ರಾ ತಂಡದ 75ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಅಭಿನಯ ತರಂಗದ ಸಹಯೋಗದಲ್ಲಿ ಅಕ್ಟೋಬರ್ 24 ರಿಂದ 30ರವರೆಗೆ ಸುಚಿತ್ರಾ ಭಾನು ನಾಣಿ ಅಂಗಳದಲ್ಲಿ ನಾಟಕ ಸ್ಪರ್ಧೆಯನ್ನು ಆಯೋಜಿಸಲಾಗಿದೆ. </p><p>ನಾಟಕದ ಅವಧಿಯು ಕನಿಷ್ಠ 45 ನಿಮಿಷ ಹಾಗೂ ಗರಿಷ್ಠ 60 ನಿಮಿಷವಿರಬೇಕು. 40 ವರ್ಷದೊಳಗಿನವರು ನಾಟಕವನ್ನು ನಿರ್ದೇಶಿಸಿರಬೇಕು. ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ ₹50 ಸಾವಿರ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ₹ 20 ಸಾವಿರ ಹಾಗೂ ತೃತೀಯ ಸ್ಥಾನ ಪಡೆಯುವ ತಂಡಕ್ಕೆ ₹10 ಸಾವಿರ ಬಹುಮಾನ ನೀಡಲಾಗುತ್ತದೆ. ಆಸಕ್ತರು ಸೆಪ್ಟೆಂಬರ್ 15ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p><strong>ಇದೇ 15ರಿಂದ ಅಧ್ಯಯನ ಶಿಬಿರ</strong></p><p><strong>ಬೆಂಗಳೂರು</strong>: ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ (ಅಂಬೇಡ್ಕರ್ ವಾದ) ಸೆ.15ರಿಂದ 17ರವರೆಗೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರ ಆಯೋಜಿಸಲಾಗಿದೆ.</p><p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ‘ದಲಿತ ಹಾಗೂ ದಮನಿತ ಸಮುದಾಯಗಳಲ್ಲಿ ಸ್ವಾಭಿಮಾನ ಮತ್ತು ಸ್ವಾವಲಂಬನೆ<br>ಯಿಂದ ಬದುಕಲು ಸಂವಿಧಾನಾತ್ಮಕ ಹಕ್ಕುಗಳಿಗೆ ದಲಿತ ಸಂಘರ್ಷ ಸಮಿತಿ ಚಳವಳಿಯನ್ನು ರೂಪಿಸುತ್ತಿದೆ. ರಾಜ್ಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಗುವ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಬದಲಾವಣೆಗಳನ್ನು ಗ್ರಹಿಸಲು ಅಧ್ಯಯನ ಶಿಬಿರಗಳನ್ನು ಆಯೋಜಿಸಲಾಗುತ್ತದೆ’ ಎಂದರು.</p><p>‘3 ದಿನ ನಡೆಯುವ ಈ ಶಿಬಿರದಲ್ಲಿ ವಿವಿಧ ಗೋಷ್ಠಿಗಳು ನಡೆಯಲಿವೆ. ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್ನ ಅಧ್ಯಕ್ಷೆ ಇಂದಿರಾ ಕೃಷ್ಣಪ್ಪ ಅವರು ಇದೇ 15ರಂದು ಶಿಬಿರವನ್ನು ಉದ್ಘಾಟಿಸಲಿದ್ದಾರೆ, ಸಾಹಿತಿ ಸುಬ್ಬು ಹೊಲೆಯಾರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ’ ಎಂದರು.</p>.<p><strong>ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರ</strong></p><p>ಬೆಂಗಳೂರು: ಕೆ.ಆರ್. ಮಾರುಕಟ್ಟೆಯಿಂದ ಸೋಲೂರಿಗೆ ಹಾಗೂ ಕೆಂಪೇಗೌಡ ಬಸ್ ನಿಲ್ದಾಣ<br>ದಿಂದ ಮಾದಿಗೊಂಡನಹಳ್ಳಿಗೆ ಹೊಸ ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ಬುಧವಾರ ಆರಂಭಗೊಂಡಿದೆ. </p><p>ಕೆ.ಆರ್.ಮಾರುಕಟ್ಟೆಯಿಂದ ಹೊರಡುವ ಬಸ್ ಸುಂಕದಕಟ್ಟೆ, ಕಡಬಗೆರೆ ಕ್ರಾಸ್, ತಾವರೆಕೆರೆ, ವರದೇನಹಳ್ಳಿ ಹ್ಯಾಂಡ್ ಪೋಸ್ಟ್, ಮೋಟಗಾನಹಳ್ಳಿ, ಕೋಡಿಹಳ್ಳಿ, ನಾಗನಹಳ್ಳಿ, ಶೆಟ್ಟಿಪಾಳ್ಯ, ಗುಡೇಮಾರನಹಳ್ಳಿ, ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಮೂಲಕ ಸೋಲೂರು ತಲುಪಲಿದೆ. ಎರಡೂ ಕಡೆಯಿಂದ ದಿನಕ್ಕೆ ತಲಾ ನಾಲ್ಕು ಟ್ರಿಪ್ಗಳು ಇರಲಿವೆ.</p><p>ಕೆಂಪೇಗೌಡ ಬಸ್ ನಿಲ್ದಾಣ–ಮಾದಿಗೊಂಡನಹಳ್ಳಿ ನಡುವೆ ಎರಡೂ ಕಡೆಯಿಂದ ದಿನಕ್ಕೆ ತಲಾ ಎರಡು ಟ್ರಿಪ್ ಇರಲಿದ್ದು, ಯಶವಂತಪುರ, ಮಾದನಾಯಕನಹಳ್ಳಿ, ನೆಲಮಂಗಲ, ಯಂಟಗಾನಹಳ್ಳಿ, ಮಹದೇವಪುರ, ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಮೂಲಕ ಬಸ್ ಸಂಚರಿಸಲಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಮೋಹನ ಕುಂಟಾರ್ಗೆ ಅನುವಾದ ಪ್ರಶಸ್ತಿ</strong></p><p>ಬೆಂಗಳೂರು: ದ್ರಾವಿಡ ಭಾಷಾ ಅನುವಾದಕರ ಸಂಘದ (ಡಿಬಿಟಿಎ) ವತಿಯಿಂದ ನೀಡುವ ಡಿಬಿಟಿಎ ಅನುವಾದ ಪ್ರಶಸ್ತಿಗೆ ಹಂಪಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಎ. ಮೋಹನ ಕುಂಟಾರ್ ಆಯ್ಕೆಯಾಗಿದ್ದಾರೆ ಎಂದು ಡಿಬಿಟಿಎ ಅಧ್ಯಕ್ಷೆ ಸುಷ್ಮಾಶಂಕರ್ತಿ ಳಿಸಿದ್ದಾರೆ.</p><p>ಮಲೆಯಾಳ ಭಾಷೆಯ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ತಕಳಿ ಶಿವಶಂಕರ ಪಿಳ್ಳೈ ಅವರ ಪ್ರಸಿದ್ಧ ಕಾದಂಬರಿ ‘ಚೆಮ್ಮೀನ್’ನ ಕನ್ನಡ ಅನುವಾದಕ್ಕೆ (ಚೆಮ್ಮೀನು) ಪ್ರಶಸ್ತಿ ಲಭಿಸಿದೆ. ₹11,111 ನಗದು, ಪ್ರಶಸ್ತಿ ಪತ್ರ ಮತ್ತು ಫಲಕಗಳನ್ನೊಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಸೆಪ್ಟೆಂಬರ್ 26ರಂದು ನಯನ ಸಭಾಂಗಣದಲ್ಲಿ ಜರುಗಲಿದೆ.</p>.<p><strong>ದಾಳಿಂಬೆ ಕೃಷಿ ಪ್ರವಾಸೋದ್ಯಮ</strong></p><p>ಬೆಂಗಳೂರು: ಯಲಹಂಕ ತಾಲ್ಲೂಕಿನ ನಾಗದಾಸನಹಳ್ಳಿಯಲ್ಲಿ ಸೆಪ್ಟೆಂಬರ್ 13ರಿಂದ ದಾಳಿಂಬೆ ಕೃಷಿ ಪ್ರವಾಸೋದ್ಯಮ ಆಯೋಜಿಸಲಾಗಿದೆ.</p><p>ನಾಗದಾಸನಹಳ್ಳಿಯಲ್ಲಿರುವ ಎನ್ಸಿಆರ್ ಫಾರ್ಮ್ನಲ್ಲಿ ಒಂದು ಎಕರೆ ಪ್ರದೇಶದಲ್ಲಿ ದಾಳಿಂಬೆ ಬೆಳೆಯಲಾಗಿದೆ. ಗ್ರಾಹಕರು ಭೇಟಿ ನೀಡಿ ಇಷ್ಟವಾದ ಗಿಡದಲ್ಲಿರುವ ಹಣ್ಣುಗಳನ್ನು ಆಯ್ಕೆ ಮಾಡಿ, ಖರೀದಿಸಬಹುದು. ಮಾರುಕಟ್ಟೆ ದರದಲ್ಲಿ ಹಣ್ಣುಗಳನ್ನು ಮಾರಾಟ ಮಾಡಲಾಗುತ್ತದೆ. ಪ್ರವೇಶ ಉಚಿತ. ಮಾಹಿತಿಗೆ ಮೊ. 6366656410, 9449836061 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಟಕ ಸ್ಪರ್ಧೆಗೆ ಅರ್ಜಿ ಆಹ್ವಾನ</strong></p><p>ಬೆಂಗಳೂರು: ಎ.ಎಸ್. ಮೂರ್ತಿ ಪ್ರಾರಂಭಿಸಿದ ಚಿತ್ರಾ ತಂಡದ 75ನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ಅಭಿನಯ ತರಂಗದ ಸಹಯೋಗದಲ್ಲಿ ಅಕ್ಟೋಬರ್ 24 ರಿಂದ 30ರವರೆಗೆ ಸುಚಿತ್ರಾ ಭಾನು ನಾಣಿ ಅಂಗಳದಲ್ಲಿ ನಾಟಕ ಸ್ಪರ್ಧೆಯನ್ನು ಆಯೋಜಿಸಲಾಗಿದೆ. </p><p>ನಾಟಕದ ಅವಧಿಯು ಕನಿಷ್ಠ 45 ನಿಮಿಷ ಹಾಗೂ ಗರಿಷ್ಠ 60 ನಿಮಿಷವಿರಬೇಕು. 40 ವರ್ಷದೊಳಗಿನವರು ನಾಟಕವನ್ನು ನಿರ್ದೇಶಿಸಿರಬೇಕು. ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ ₹50 ಸಾವಿರ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ₹ 20 ಸಾವಿರ ಹಾಗೂ ತೃತೀಯ ಸ್ಥಾನ ಪಡೆಯುವ ತಂಡಕ್ಕೆ ₹10 ಸಾವಿರ ಬಹುಮಾನ ನೀಡಲಾಗುತ್ತದೆ. ಆಸಕ್ತರು ಸೆಪ್ಟೆಂಬರ್ 15ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p><strong>ಇದೇ 15ರಿಂದ ಅಧ್ಯಯನ ಶಿಬಿರ</strong></p><p><strong>ಬೆಂಗಳೂರು</strong>: ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ (ಅಂಬೇಡ್ಕರ್ ವಾದ) ಸೆ.15ರಿಂದ 17ರವರೆಗೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ರಾಜ್ಯ ಮಟ್ಟದ ಪದಾಧಿಕಾರಿಗಳ ಅಧ್ಯಯನ ಶಿಬಿರ ಆಯೋಜಿಸಲಾಗಿದೆ.</p><p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, ‘ದಲಿತ ಹಾಗೂ ದಮನಿತ ಸಮುದಾಯಗಳಲ್ಲಿ ಸ್ವಾಭಿಮಾನ ಮತ್ತು ಸ್ವಾವಲಂಬನೆ<br>ಯಿಂದ ಬದುಕಲು ಸಂವಿಧಾನಾತ್ಮಕ ಹಕ್ಕುಗಳಿಗೆ ದಲಿತ ಸಂಘರ್ಷ ಸಮಿತಿ ಚಳವಳಿಯನ್ನು ರೂಪಿಸುತ್ತಿದೆ. ರಾಜ್ಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಗುವ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಬದಲಾವಣೆಗಳನ್ನು ಗ್ರಹಿಸಲು ಅಧ್ಯಯನ ಶಿಬಿರಗಳನ್ನು ಆಯೋಜಿಸಲಾಗುತ್ತದೆ’ ಎಂದರು.</p><p>‘3 ದಿನ ನಡೆಯುವ ಈ ಶಿಬಿರದಲ್ಲಿ ವಿವಿಧ ಗೋಷ್ಠಿಗಳು ನಡೆಯಲಿವೆ. ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್ನ ಅಧ್ಯಕ್ಷೆ ಇಂದಿರಾ ಕೃಷ್ಣಪ್ಪ ಅವರು ಇದೇ 15ರಂದು ಶಿಬಿರವನ್ನು ಉದ್ಘಾಟಿಸಲಿದ್ದಾರೆ, ಸಾಹಿತಿ ಸುಬ್ಬು ಹೊಲೆಯಾರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ’ ಎಂದರು.</p>.<p><strong>ಹೊಸ ಮಾರ್ಗದಲ್ಲಿ ಬಿಎಂಟಿಸಿ ಬಸ್ ಸಂಚಾರ</strong></p><p>ಬೆಂಗಳೂರು: ಕೆ.ಆರ್. ಮಾರುಕಟ್ಟೆಯಿಂದ ಸೋಲೂರಿಗೆ ಹಾಗೂ ಕೆಂಪೇಗೌಡ ಬಸ್ ನಿಲ್ದಾಣ<br>ದಿಂದ ಮಾದಿಗೊಂಡನಹಳ್ಳಿಗೆ ಹೊಸ ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ಬುಧವಾರ ಆರಂಭಗೊಂಡಿದೆ. </p><p>ಕೆ.ಆರ್.ಮಾರುಕಟ್ಟೆಯಿಂದ ಹೊರಡುವ ಬಸ್ ಸುಂಕದಕಟ್ಟೆ, ಕಡಬಗೆರೆ ಕ್ರಾಸ್, ತಾವರೆಕೆರೆ, ವರದೇನಹಳ್ಳಿ ಹ್ಯಾಂಡ್ ಪೋಸ್ಟ್, ಮೋಟಗಾನಹಳ್ಳಿ, ಕೋಡಿಹಳ್ಳಿ, ನಾಗನಹಳ್ಳಿ, ಶೆಟ್ಟಿಪಾಳ್ಯ, ಗುಡೇಮಾರನಹಳ್ಳಿ, ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಮೂಲಕ ಸೋಲೂರು ತಲುಪಲಿದೆ. ಎರಡೂ ಕಡೆಯಿಂದ ದಿನಕ್ಕೆ ತಲಾ ನಾಲ್ಕು ಟ್ರಿಪ್ಗಳು ಇರಲಿವೆ.</p><p>ಕೆಂಪೇಗೌಡ ಬಸ್ ನಿಲ್ದಾಣ–ಮಾದಿಗೊಂಡನಹಳ್ಳಿ ನಡುವೆ ಎರಡೂ ಕಡೆಯಿಂದ ದಿನಕ್ಕೆ ತಲಾ ಎರಡು ಟ್ರಿಪ್ ಇರಲಿದ್ದು, ಯಶವಂತಪುರ, ಮಾದನಾಯಕನಹಳ್ಳಿ, ನೆಲಮಂಗಲ, ಯಂಟಗಾನಹಳ್ಳಿ, ಮಹದೇವಪುರ, ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಮೂಲಕ ಬಸ್ ಸಂಚರಿಸಲಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.</p>.<p><strong>ಮೋಹನ ಕುಂಟಾರ್ಗೆ ಅನುವಾದ ಪ್ರಶಸ್ತಿ</strong></p><p>ಬೆಂಗಳೂರು: ದ್ರಾವಿಡ ಭಾಷಾ ಅನುವಾದಕರ ಸಂಘದ (ಡಿಬಿಟಿಎ) ವತಿಯಿಂದ ನೀಡುವ ಡಿಬಿಟಿಎ ಅನುವಾದ ಪ್ರಶಸ್ತಿಗೆ ಹಂಪಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಎ. ಮೋಹನ ಕುಂಟಾರ್ ಆಯ್ಕೆಯಾಗಿದ್ದಾರೆ ಎಂದು ಡಿಬಿಟಿಎ ಅಧ್ಯಕ್ಷೆ ಸುಷ್ಮಾಶಂಕರ್ತಿ ಳಿಸಿದ್ದಾರೆ.</p><p>ಮಲೆಯಾಳ ಭಾಷೆಯ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ತಕಳಿ ಶಿವಶಂಕರ ಪಿಳ್ಳೈ ಅವರ ಪ್ರಸಿದ್ಧ ಕಾದಂಬರಿ ‘ಚೆಮ್ಮೀನ್’ನ ಕನ್ನಡ ಅನುವಾದಕ್ಕೆ (ಚೆಮ್ಮೀನು) ಪ್ರಶಸ್ತಿ ಲಭಿಸಿದೆ. ₹11,111 ನಗದು, ಪ್ರಶಸ್ತಿ ಪತ್ರ ಮತ್ತು ಫಲಕಗಳನ್ನೊಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಸೆಪ್ಟೆಂಬರ್ 26ರಂದು ನಯನ ಸಭಾಂಗಣದಲ್ಲಿ ಜರುಗಲಿದೆ.</p>.<p><strong>ದಾಳಿಂಬೆ ಕೃಷಿ ಪ್ರವಾಸೋದ್ಯಮ</strong></p><p>ಬೆಂಗಳೂರು: ಯಲಹಂಕ ತಾಲ್ಲೂಕಿನ ನಾಗದಾಸನಹಳ್ಳಿಯಲ್ಲಿ ಸೆಪ್ಟೆಂಬರ್ 13ರಿಂದ ದಾಳಿಂಬೆ ಕೃಷಿ ಪ್ರವಾಸೋದ್ಯಮ ಆಯೋಜಿಸಲಾಗಿದೆ.</p><p>ನಾಗದಾಸನಹಳ್ಳಿಯಲ್ಲಿರುವ ಎನ್ಸಿಆರ್ ಫಾರ್ಮ್ನಲ್ಲಿ ಒಂದು ಎಕರೆ ಪ್ರದೇಶದಲ್ಲಿ ದಾಳಿಂಬೆ ಬೆಳೆಯಲಾಗಿದೆ. ಗ್ರಾಹಕರು ಭೇಟಿ ನೀಡಿ ಇಷ್ಟವಾದ ಗಿಡದಲ್ಲಿರುವ ಹಣ್ಣುಗಳನ್ನು ಆಯ್ಕೆ ಮಾಡಿ, ಖರೀದಿಸಬಹುದು. ಮಾರುಕಟ್ಟೆ ದರದಲ್ಲಿ ಹಣ್ಣುಗಳನ್ನು ಮಾರಾಟ ಮಾಡಲಾಗುತ್ತದೆ. ಪ್ರವೇಶ ಉಚಿತ. ಮಾಹಿತಿಗೆ ಮೊ. 6366656410, 9449836061 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>