<p><strong>ಬೆಂಗಳೂರು</strong>: ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>‘ಕಲಾಸಿಪಾಳ್ಯ ಹಾಗೂ ಬಸವನಗುಡಿ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಲಾಗಿದೆ. ಅವರಿಂದ ₹ 7 ಲಕ್ಷ ನಗದು ಹಾಗೂ ಮೊಬೈಲ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.</p>.<p>‘ಐಪಿಎಸ್ ಪಂದ್ಯಾವಳಿ ಆರಂಭವಾದ ದಿನದಿಂದಲೂ ಆರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದರು. ಸೋಲು–ಗೆಲುವಿನ ಲೆಕ್ಕಾಚಾರದಲ್ಲಿ ಹಣ ಕಟ್ಟಿಸಿಕೊಳ್ಳುತ್ತಿದ್ದರು. ಸೋತವರಿಂದ ಹಣ ಪಡೆದು ಗೆದ್ದವರಿಗೆ ಕೊಡುತ್ತಿದ್ದರು. ಜೊತೆಗೆ, ಕಮಿಷನ್ ಸಹ ಪಡೆಯುತ್ತಿದ್ದರು’ ಎಂದೂ ತಿಳಿಸಿದರು.</p>.<p>‘ಕಲಾಸಿಪಾಳ್ಯ ಠಾಣೆ ವ್ಯಾಪ್ತಿಯ ಮಿನರ್ವ ವೃತ್ತದಲ್ಲಿ ಮೇ 13ರಂದು ನಿಂತಿದ್ದ ಆರೋಪಿ, ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸಲು ಜನರಿಂದ ಹಣ ಪಡೆಯುತ್ತಿದ್ದರು. ಇನ್ನಿಬ್ಬರು ಆರೋಪಿಗಳು, ಬಸವನಗುಡಿಯ ಡಿವಿಜಿ ರಸ್ತೆಯಲ್ಲಿ ಜನರಿಂದ ಹಣ ಕಟ್ಟಿಸಿಕೊಳುತ್ತಿದ್ದರು. ಎರಡೂ ಕಡೆಯಲ್ಲೂ ಪ್ರತ್ಯೇಕ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>‘ಕಲಾಸಿಪಾಳ್ಯ ಹಾಗೂ ಬಸವನಗುಡಿ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಲಾಗಿದೆ. ಅವರಿಂದ ₹ 7 ಲಕ್ಷ ನಗದು ಹಾಗೂ ಮೊಬೈಲ್ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.</p>.<p>‘ಐಪಿಎಸ್ ಪಂದ್ಯಾವಳಿ ಆರಂಭವಾದ ದಿನದಿಂದಲೂ ಆರೋಪಿಗಳು ಬೆಟ್ಟಿಂಗ್ ನಡೆಸುತ್ತಿದ್ದರು. ಸೋಲು–ಗೆಲುವಿನ ಲೆಕ್ಕಾಚಾರದಲ್ಲಿ ಹಣ ಕಟ್ಟಿಸಿಕೊಳ್ಳುತ್ತಿದ್ದರು. ಸೋತವರಿಂದ ಹಣ ಪಡೆದು ಗೆದ್ದವರಿಗೆ ಕೊಡುತ್ತಿದ್ದರು. ಜೊತೆಗೆ, ಕಮಿಷನ್ ಸಹ ಪಡೆಯುತ್ತಿದ್ದರು’ ಎಂದೂ ತಿಳಿಸಿದರು.</p>.<p>‘ಕಲಾಸಿಪಾಳ್ಯ ಠಾಣೆ ವ್ಯಾಪ್ತಿಯ ಮಿನರ್ವ ವೃತ್ತದಲ್ಲಿ ಮೇ 13ರಂದು ನಿಂತಿದ್ದ ಆರೋಪಿ, ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸಲು ಜನರಿಂದ ಹಣ ಪಡೆಯುತ್ತಿದ್ದರು. ಇನ್ನಿಬ್ಬರು ಆರೋಪಿಗಳು, ಬಸವನಗುಡಿಯ ಡಿವಿಜಿ ರಸ್ತೆಯಲ್ಲಿ ಜನರಿಂದ ಹಣ ಕಟ್ಟಿಸಿಕೊಳುತ್ತಿದ್ದರು. ಎರಡೂ ಕಡೆಯಲ್ಲೂ ಪ್ರತ್ಯೇಕ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>