<p><strong>ಬೆಂಗಳೂರು:</strong> ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಐಪಿಎಲ್ ಕ್ರಿಕೆಟ್ ಪಂದ್ಯಗಳ ಟಿಕೆಟ್ ಮಾರುತ್ತಿದ್ದ ನಾಲ್ಕು ಮಂದಿಯನ್ನು ಸಿಸಿಬಿ ಪೊಲೀಸರು (ವಿಶೇಷ ತನಿಖಾ ತಂಡ) ಬಂಧಿಸಿದ್ದಾರೆ.</p>.<p>ನಗರದ ಚರಣ್ ರಾಜ್, ಹರ್ಷವರ್ಧನ, ವಿನಯ್ ಮತ್ತು ವೆಂಕಟಸಾಯಿ ಕಿರಣ್ ಅವರನ್ನು ಬಂಧಿಸಿ, ₹38,400 ಮೌಲ್ಯದ 32 ಐಪಿಎಲ್ ಟಿಕೆಟ್ಗಳು, ನಾಲ್ಕು ಮೊಬೈಲ್ ಮತ್ತು ಒಂದು ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ. </p>.<p>ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಆರ್ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ಟಿಕೆಟ್ಗಳನ್ನು ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. </p>.<p>ಖಚಿತ ಮಾಹಿತಿ ಆಧರಿಸಿದ ಪೊಲೀಸರ ತಂಡ, ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ಟಿಕೆಟ್ ಮಾರಾಟದಲ್ಲಿ ತೊಡಗಿದ್ದ ಆರೋಪಿ ಚರಣ್ ರಾಜ್ ಅವರನ್ನು ವಶಕ್ಕೆ ಪಡೆದು, ₹ 1,200 ಮುಖಬಲೆಯ 12 ಟಿಕೆಟ್ ಮತ್ತು ಮೊಬೈಲ್ ವಶಕ್ಕೆ ಪಡಿಸಿಕೊಂಡು ವಿಚಾರಣೆ ನಡೆಸಿತು.</p>.<p>ಬಳಿಕ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಅವರಿಂದ 20 ಐಪಿಎಲ್ ಟಿಕೆಟ್ಗಳು, ನಾಲ್ಕು ಮೊಬೈಲ್ ಮತ್ತು ಒಂದು ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪ್ರಕರಣವನ್ನು ಸಿಸಿಬಿ ವಿಶೇಷ ವಿಚಾರಣಾ ದಳಕ್ಕೆ ವರ್ಗಾವಣೆಯಾಗಿದ್ದು, ತನಿಖೆ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಐಪಿಎಲ್ ಕ್ರಿಕೆಟ್ ಪಂದ್ಯಗಳ ಟಿಕೆಟ್ ಮಾರುತ್ತಿದ್ದ ನಾಲ್ಕು ಮಂದಿಯನ್ನು ಸಿಸಿಬಿ ಪೊಲೀಸರು (ವಿಶೇಷ ತನಿಖಾ ತಂಡ) ಬಂಧಿಸಿದ್ದಾರೆ.</p>.<p>ನಗರದ ಚರಣ್ ರಾಜ್, ಹರ್ಷವರ್ಧನ, ವಿನಯ್ ಮತ್ತು ವೆಂಕಟಸಾಯಿ ಕಿರಣ್ ಅವರನ್ನು ಬಂಧಿಸಿ, ₹38,400 ಮೌಲ್ಯದ 32 ಐಪಿಎಲ್ ಟಿಕೆಟ್ಗಳು, ನಾಲ್ಕು ಮೊಬೈಲ್ ಮತ್ತು ಒಂದು ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ. </p>.<p>ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಆರ್ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯದ ಟಿಕೆಟ್ಗಳನ್ನು ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. </p>.<p>ಖಚಿತ ಮಾಹಿತಿ ಆಧರಿಸಿದ ಪೊಲೀಸರ ತಂಡ, ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ಟಿಕೆಟ್ ಮಾರಾಟದಲ್ಲಿ ತೊಡಗಿದ್ದ ಆರೋಪಿ ಚರಣ್ ರಾಜ್ ಅವರನ್ನು ವಶಕ್ಕೆ ಪಡೆದು, ₹ 1,200 ಮುಖಬಲೆಯ 12 ಟಿಕೆಟ್ ಮತ್ತು ಮೊಬೈಲ್ ವಶಕ್ಕೆ ಪಡಿಸಿಕೊಂಡು ವಿಚಾರಣೆ ನಡೆಸಿತು.</p>.<p>ಬಳಿಕ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಅವರಿಂದ 20 ಐಪಿಎಲ್ ಟಿಕೆಟ್ಗಳು, ನಾಲ್ಕು ಮೊಬೈಲ್ ಮತ್ತು ಒಂದು ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪ್ರಕರಣವನ್ನು ಸಿಸಿಬಿ ವಿಶೇಷ ವಿಚಾರಣಾ ದಳಕ್ಕೆ ವರ್ಗಾವಣೆಯಾಗಿದ್ದು, ತನಿಖೆ ಮುಂದುವರಿದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>