ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಲಳುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಆರ್. ರಮೇಶ್ ಸೋಮವಾರ ಬೆಳಿಗ್ಗೆ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾದರು.
ಅಗ್ನಿಶಾಮಕ ಮತ್ತು ತುರ್ತು ಸೇವೆಯ ಡಿಐಜಿ ಆಗಿದ್ದ ಅವರು, 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಿಗ್ಗೆ 8 ಗಂಟೆಗೆ ಆಸ್ಪತ್ರೆಯಲ್ಲಿ ನಿಧನರಾದರು.
2005ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದ ರಮೇಶ್, ಸಿಎಆರ್ ಡಿಸಿಪಿ, ಬೆಂಗಳೂರು ಅಪರಾಧ ವಿಭಾಗದ ಡಿಸಿಪಿ ಆಗಿ ಕರ್ತವ್ಯ ನಿರ್ವಹಿಸಿದ್ದರು. ರಮೇಶ್ ಅವರುಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.