<p><strong>ಬೆಂಗಳೂರು:</strong> ಮಧ್ಯಪ್ರದೇಶದಿಂದ ನಗರಕ್ಕೆ ಬಂದು ಸರಗಳವು ಮಾಡಿಕೊಂಡು ಪರಾರಿಯಾಗುತ್ತಿದ್ದ ಇರಾನಿ ಗ್ಯಾಂಗ್ನ ಮಹಿಳೆ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>‘ಮಧ್ಯಪ್ರದೇಶದ ಅಬುಜರ್, ಅಬುಲ್ ಹುಸೇನ್ ಹಾಗೂ ಜಿನಿಯಾ ಬಂಧಿತರು. ಇವರಿಂದ ₹ 40 ಲಕ್ಷ ಮೌಲ್ಯದ 1.1 ಕೆ.ಜಿ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಹೇಳಿದರು.</p>.<p>‘ವೃದ್ಧ ಮಹಿಳೆಯರನ್ನು ಗುರಿಯಾಗಿಸಿಕೊಂಡು ಕೃತ್ಯ ಎಸಗುತ್ತಿದ್ದ ಆರೋಪಿಗಳು, ನಗರದ 23 ಕಡೆಗಳಲ್ಲಿ ಸರಗಳವು ಮಾಡಿದ್ದರು. ನಗರದಿಂದ ಪರಾರಿಯಾಗಿ ಧಾರವಾಡ ಟೋಲ್ನಾಕಾ ಬಳಿಯ ಇರಾನಿ ಕಾಲೊನಿಯಲ್ಲಿ ಉಳಿದುಕೊಂಡಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸರು, ಧಾರವಾಡಕ್ಕೆ ಹೋಗಿ ಆರೋಪಿಗಳನ್ನು ಬಂಧಿಸಿ ನಗರಕ್ಕೆ ಕರೆತಂದಿದ್ದಾರೆ’ ಎಂದು ತಿಳಿಸಿದರು.</p>.<p>‘ನಗರದ ಕೆ.ಆರ್.ಪುರ, ಮಡಿವಾಳ, ಬಾಣಸವಾಡಿ, ಬಾಗಲೂರು, ಹಲಸೂರು, ಹಲಸೂರು ಗೇಟ್, ಜ್ಞಾನಭಾರತಿ, ವಿಜಯನಗರ, ವಿವೇಕನಗರ, ಚಾಮರಾಜಪೇಟೆ, ವೈಯಾಲಿಕಾವಲ್, ಪರಪ್ಪನ ಅಗ್ರಹಾರ, ಸಿದ್ದಾಪುರ ಹಾಗೂ ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲಿ ಸರಗಳವು ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ’ ಎಂದರು.</p>.<p class="Subhead">ಆಭರಣ ಮಾರುತ್ತಿದ್ದ ಮಹಿಳೆ: ‘ಮಧ್ಯಪ್ರದೇಶದ ಆರೋಪಿಗಳು, ಮೊದಲಿಗೆ ಮಹಾರಾಷ್ಟ್ರಕ್ಕೆ ಬಂದು ಅಲ್ಲಿಯೇ ಸರಗಳವು ಮಾಡುತ್ತಿದ್ದರು. ನಂತರ, ಅಲ್ಲಿಂದ ಬೆಂಗಳೂರಿಗೆ ಬಂದು ಕೃತ್ಯ ಎಸಗುತ್ತಿದ್ದರು. ಬಳಿಕ ಧಾರವಾಡಕ್ಕೆ ಹೋಗಿ ವಾಸ್ತವ್ಯ ಹೂಡುತ್ತಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಆರೋಪಿಗಳು ಕದ್ದ ಆಭರಣವನ್ನೆಲ್ಲ ಜಿನಿಯಾಳಿಗೆ ಕೊಡುತ್ತಿದ್ದರು. ನಂತರ, ಆಕೆಯೇ ಅವುಗಳನ್ನು ಮಾರಾಟ ಮಾಡುತ್ತಿದ್ದಳು. ಬಂದ ಹಣವನ್ನು ಮೂವರು ಹಂಚಿಕೊಳ್ಳುತ್ತಿದ್ದರು’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಧ್ಯಪ್ರದೇಶದಿಂದ ನಗರಕ್ಕೆ ಬಂದು ಸರಗಳವು ಮಾಡಿಕೊಂಡು ಪರಾರಿಯಾಗುತ್ತಿದ್ದ ಇರಾನಿ ಗ್ಯಾಂಗ್ನ ಮಹಿಳೆ ಸೇರಿ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>‘ಮಧ್ಯಪ್ರದೇಶದ ಅಬುಜರ್, ಅಬುಲ್ ಹುಸೇನ್ ಹಾಗೂ ಜಿನಿಯಾ ಬಂಧಿತರು. ಇವರಿಂದ ₹ 40 ಲಕ್ಷ ಮೌಲ್ಯದ 1.1 ಕೆ.ಜಿ ಚಿನ್ನಾಭರಣ ಜಪ್ತಿ ಮಾಡಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಹೇಳಿದರು.</p>.<p>‘ವೃದ್ಧ ಮಹಿಳೆಯರನ್ನು ಗುರಿಯಾಗಿಸಿಕೊಂಡು ಕೃತ್ಯ ಎಸಗುತ್ತಿದ್ದ ಆರೋಪಿಗಳು, ನಗರದ 23 ಕಡೆಗಳಲ್ಲಿ ಸರಗಳವು ಮಾಡಿದ್ದರು. ನಗರದಿಂದ ಪರಾರಿಯಾಗಿ ಧಾರವಾಡ ಟೋಲ್ನಾಕಾ ಬಳಿಯ ಇರಾನಿ ಕಾಲೊನಿಯಲ್ಲಿ ಉಳಿದುಕೊಂಡಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸರು, ಧಾರವಾಡಕ್ಕೆ ಹೋಗಿ ಆರೋಪಿಗಳನ್ನು ಬಂಧಿಸಿ ನಗರಕ್ಕೆ ಕರೆತಂದಿದ್ದಾರೆ’ ಎಂದು ತಿಳಿಸಿದರು.</p>.<p>‘ನಗರದ ಕೆ.ಆರ್.ಪುರ, ಮಡಿವಾಳ, ಬಾಣಸವಾಡಿ, ಬಾಗಲೂರು, ಹಲಸೂರು, ಹಲಸೂರು ಗೇಟ್, ಜ್ಞಾನಭಾರತಿ, ವಿಜಯನಗರ, ವಿವೇಕನಗರ, ಚಾಮರಾಜಪೇಟೆ, ವೈಯಾಲಿಕಾವಲ್, ಪರಪ್ಪನ ಅಗ್ರಹಾರ, ಸಿದ್ದಾಪುರ ಹಾಗೂ ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲಿ ಸರಗಳವು ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ’ ಎಂದರು.</p>.<p class="Subhead">ಆಭರಣ ಮಾರುತ್ತಿದ್ದ ಮಹಿಳೆ: ‘ಮಧ್ಯಪ್ರದೇಶದ ಆರೋಪಿಗಳು, ಮೊದಲಿಗೆ ಮಹಾರಾಷ್ಟ್ರಕ್ಕೆ ಬಂದು ಅಲ್ಲಿಯೇ ಸರಗಳವು ಮಾಡುತ್ತಿದ್ದರು. ನಂತರ, ಅಲ್ಲಿಂದ ಬೆಂಗಳೂರಿಗೆ ಬಂದು ಕೃತ್ಯ ಎಸಗುತ್ತಿದ್ದರು. ಬಳಿಕ ಧಾರವಾಡಕ್ಕೆ ಹೋಗಿ ವಾಸ್ತವ್ಯ ಹೂಡುತ್ತಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಆರೋಪಿಗಳು ಕದ್ದ ಆಭರಣವನ್ನೆಲ್ಲ ಜಿನಿಯಾಳಿಗೆ ಕೊಡುತ್ತಿದ್ದರು. ನಂತರ, ಆಕೆಯೇ ಅವುಗಳನ್ನು ಮಾರಾಟ ಮಾಡುತ್ತಿದ್ದಳು. ಬಂದ ಹಣವನ್ನು ಮೂವರು ಹಂಚಿಕೊಳ್ಳುತ್ತಿದ್ದರು’ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>