‘ಬೇರೆ ಯಾವುದೇ ರಾಜ್ಯಗಳ ಮೇಲೂ ಕಬ್ಬಿಣ ರಫ್ತಿಗೆ ಸಂಬಂಧಿಸಿದಂತೆ ನಿಷೇಧ ಹೇರಿಲ್ಲ. ನಮ್ಮ ರಾಜ್ಯಕ್ಕೆ ಮಾತ್ರ ನಿಷೇಧ ವಿಧಿಸಿರುವುದರಿಂದ ಸರ್ಕಾರದ ಬೊಕ್ಕಸಕ್ಕೆ ಬರುತ್ತಿದ್ದ ವರಮಾನ ನಿಂತು ಹೋಗಿದೆ. ಇದೀಗ ಕೇಂದ್ರ ಸರ್ಕಾರವೂ ಸಂಪೂರ್ಣ ಸಹಕಾರ ನೀಡಲು ಮುಂದಾಗಿದೆ. ನ್ಯಾಯಾಲಯದಲ್ಲಿ ಕಾನೂನಿನ ನೆರವು ನೀಡುವುದಾಗಿ ಜೋಶಿ ತಿಳಿಸಿದ್ದಾರೆ. ನಮ್ಮ ನಿಲುವನ್ನು ನ್ಯಾಯಾಲಯ ಒಪ್ಪುವ ಸಾಧ್ಯತೆ ಇದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.