<p><strong>ಬೆಂಗಳೂರು</strong>: ನಗರದಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ.</p>.<p>ಕೆಂಗೇರಿ ಉಪನಗರದಲ್ಲಿ ಶನಿವಾರ ನಡೆದ ಸಂಚಾರ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಮಾತನಾಡಿ, ನಗರದ ಹಲವು ಕಡೆ ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದೆ. ಸಂಚಾರ ದಟ್ಟಣೆ ಉಂಟಾಗುತ್ತಿದೆ. ಈ ಸಂಬಂಧ ದೂರುಗಳೂ ಬರುತ್ತಿವೆ. ಹೀಗಾಗಿ ಸುಗಮ ಸಂಚಾರಕ್ಕಾಗಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರಲು ಚರ್ಚಿಸಲಾಗುತ್ತಿದೆ ಎಂದರು.</p>.<p>ಈ ಹಿಂದೆ ಟೋಯಿಂಗ್ ವ್ಯವಸ್ಥೆ ಜಾರಿಯಲ್ಲಿದ್ದಾಗ ಈ ರೀತಿಯ ಅವ್ಯವಸ್ಥೆ ಇರಲಿಲ್ಲ ಎಂದರು.</p>.<p>ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್, ಪಶ್ಚಿಮ ವಿಭಾಗದ ಡಿಸಿಪಿ ಬಿ.ಎಚ್.ಅನಿತಾ ಇದ್ದರು. ಹಲವು ವಿವಾದ ಹಾಗೂ ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿದ್ದರಿಂದ ಈ ಹಿಂದೆ ಟೋಯಿಂಗ್ ವ್ಯವಸ್ಥೆ ರದ್ದು ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ.</p>.<p>ಕೆಂಗೇರಿ ಉಪನಗರದಲ್ಲಿ ಶನಿವಾರ ನಡೆದ ಸಂಚಾರ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಮಾತನಾಡಿ, ನಗರದ ಹಲವು ಕಡೆ ಎಲ್ಲೆಂದರಲ್ಲಿ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದೆ. ಸಂಚಾರ ದಟ್ಟಣೆ ಉಂಟಾಗುತ್ತಿದೆ. ಈ ಸಂಬಂಧ ದೂರುಗಳೂ ಬರುತ್ತಿವೆ. ಹೀಗಾಗಿ ಸುಗಮ ಸಂಚಾರಕ್ಕಾಗಿ ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೆ ತರಲು ಚರ್ಚಿಸಲಾಗುತ್ತಿದೆ ಎಂದರು.</p>.<p>ಈ ಹಿಂದೆ ಟೋಯಿಂಗ್ ವ್ಯವಸ್ಥೆ ಜಾರಿಯಲ್ಲಿದ್ದಾಗ ಈ ರೀತಿಯ ಅವ್ಯವಸ್ಥೆ ಇರಲಿಲ್ಲ ಎಂದರು.</p>.<p>ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್, ಪಶ್ಚಿಮ ವಿಭಾಗದ ಡಿಸಿಪಿ ಬಿ.ಎಚ್.ಅನಿತಾ ಇದ್ದರು. ಹಲವು ವಿವಾದ ಹಾಗೂ ಸಾರ್ವಜನಿಕರಿಂದ ಭಾರಿ ಆಕ್ರೋಶ ವ್ಯಕ್ತವಾಗಿದ್ದರಿಂದ ಈ ಹಿಂದೆ ಟೋಯಿಂಗ್ ವ್ಯವಸ್ಥೆ ರದ್ದು ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>