<p><strong>ಬೆಂಗಳೂರು</strong>: ಬಳಕೆಯಾದ ಪಿಪಿಇ ಕಿಟ್ ಸಂಗ್ರಹ ಮತ್ತು ವಿಲೇವಾರಿಗೆ ಯಾವ ರೀತಿಯ ವ್ಯವಸ್ಥೆ ಇದೆ ಎಂಬುದರ ಬಗ್ಗೆ ವರದಿ ಸಲ್ಲಿಸುವಂತೆ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಕೋವಿಡ್ ಸಂಬಂಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ವಿಭಾಗೀಯ ಪೀಠ, ‘ಪ್ಲಾಸ್ಟಿಕ್ಗಿಂತ ಪಿಪಿಇ ಕಿಟ್ಗಳ ಅವೈಜ್ಞಾನಿಕ ವಿಲೇವಾರಿ ಹೆಚ್ಚು ಗಂಭೀರವಾದ ವಿಷಯ’ ಎಂದು ಅಭಿಪ್ರಾಯಪಟ್ಟಿತು.</p>.<p>ಬೆಂಗಳೂರಿನಲ್ಲೇ 380 ಕೋವಿಡ್ ಆಸ್ಪತ್ರೆಗಳಿವೆ. ಬೇರೆ ಆಸ್ಪತ್ರೆಗಳಲ್ಲೂ ಪಿಪಿಇ ಕಿಟ್ ಬಳಸಲಾಗುತ್ತಿದೆ. ಇವುಗಳನ್ನು ವಿಲೇವಾರಿ ಮಾಡಲು ವಿಪತ್ತು ನಿರ್ವಹಣಾ ಕಾಯ್ದೆಯಡಿ ನಿರ್ದಿಷ್ಟ ಆದೇಶಗಳನ್ನು ಮಾಡಲಾಗಿದೆಯೇ ಎಂಬುದೇ ಪ್ರಶ್ನೆ. ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸರ್ಕಾರ ಮತ್ತು ಕರ್ನಾಟಕ ಮಾಲಿನ್ಯ ನಿಯಂತ್ರಣಾ ಮಂಡಳಿಗೆ ಪೀಠ ನಿರ್ದೇಶನ ನೀಡಿತು.</p>.<p>ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ವಕೀಲ ಎಂ.ಕೆ. ವಿಜಯಕುಮಾರ್, ‘ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗದರ್ಶಿ ಸೂತ್ರಗಳಲ್ಲಿ(ಎಸ್ಒಪಿ) ಪಿಪಿಇ ಕಿಟ್ಗಳ ವಿಲೇವಾರಿ ಬಗ್ಗೆ ನಿರ್ದಿಷ್ಟವಾಗಿ ಹೇಳಿಲ್ಲ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಳಕೆಯಾದ ಪಿಪಿಇ ಕಿಟ್ ಸಂಗ್ರಹ ಮತ್ತು ವಿಲೇವಾರಿಗೆ ಯಾವ ರೀತಿಯ ವ್ಯವಸ್ಥೆ ಇದೆ ಎಂಬುದರ ಬಗ್ಗೆ ವರದಿ ಸಲ್ಲಿಸುವಂತೆ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಕೋವಿಡ್ ಸಂಬಂಧದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ವಿಭಾಗೀಯ ಪೀಠ, ‘ಪ್ಲಾಸ್ಟಿಕ್ಗಿಂತ ಪಿಪಿಇ ಕಿಟ್ಗಳ ಅವೈಜ್ಞಾನಿಕ ವಿಲೇವಾರಿ ಹೆಚ್ಚು ಗಂಭೀರವಾದ ವಿಷಯ’ ಎಂದು ಅಭಿಪ್ರಾಯಪಟ್ಟಿತು.</p>.<p>ಬೆಂಗಳೂರಿನಲ್ಲೇ 380 ಕೋವಿಡ್ ಆಸ್ಪತ್ರೆಗಳಿವೆ. ಬೇರೆ ಆಸ್ಪತ್ರೆಗಳಲ್ಲೂ ಪಿಪಿಇ ಕಿಟ್ ಬಳಸಲಾಗುತ್ತಿದೆ. ಇವುಗಳನ್ನು ವಿಲೇವಾರಿ ಮಾಡಲು ವಿಪತ್ತು ನಿರ್ವಹಣಾ ಕಾಯ್ದೆಯಡಿ ನಿರ್ದಿಷ್ಟ ಆದೇಶಗಳನ್ನು ಮಾಡಲಾಗಿದೆಯೇ ಎಂಬುದೇ ಪ್ರಶ್ನೆ. ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸರ್ಕಾರ ಮತ್ತು ಕರ್ನಾಟಕ ಮಾಲಿನ್ಯ ನಿಯಂತ್ರಣಾ ಮಂಡಳಿಗೆ ಪೀಠ ನಿರ್ದೇಶನ ನೀಡಿತು.</p>.<p>ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ವಕೀಲ ಎಂ.ಕೆ. ವಿಜಯಕುಮಾರ್, ‘ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗದರ್ಶಿ ಸೂತ್ರಗಳಲ್ಲಿ(ಎಸ್ಒಪಿ) ಪಿಪಿಇ ಕಿಟ್ಗಳ ವಿಲೇವಾರಿ ಬಗ್ಗೆ ನಿರ್ದಿಷ್ಟವಾಗಿ ಹೇಳಿಲ್ಲ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>