ಕಾಲೇಜಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳನ್ನೊಳಗೊಂಡ ಯೋಜನಾ ತಂಡವು ಗ್ರಾಮಗಳ ಸಮೀಕ್ಷೆ ನಡೆಸಿ ಪ್ರಾಥಮಿಕ ಮಾಹಿತಿ, ಅಂಕಿ–ಅಂಶಗಳನ್ನು ಸಂಗ್ರಹಿಸುತ್ತದೆ. ತರುವಾಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ, ವಾಸ್ತವ ಮಾಹಿತಿಗೂ ಸರ್ಕಾರದ ಬಳಿ ಇರುವ ಅಂಕಿ–ಅಂಶಕ್ಕೂ ಇರುವ ವ್ಯತ್ಯಾಸಗಳನ್ನು ಗುರುತಿಸಲಿದೆ. ವಸ್ತುಸ್ಥಿತಿಗೆ ತಕ್ಕಂತೆ ಗ್ರಾಮದ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸುವ ವಿಶಿಷ್ಟ ಯೋಜನೆ ಇದಾಗಿದೆ ಎಂದು ಕಾಲೇಜಿನ ಮೂಲಗಳು ತಿಳಿಸಿವೆ.