ಈ ಕುರಿತು ‘ಪ್ರಜಾವಾಣಿ’ ಯೊಂದಿಗೆ ಮಾತನಾಡಿದ ಸುಧಾಕರ್, ‘ಸದ್ಗುರು ಜಗ್ಗಿ ವಾಸುದೇವ್ ಅವರ ತಾಯಿ ಚಿಕ್ಕಬಳ್ಳಾಪುರದವರು. ನಾಲ್ಕೈದು ತಿಂಗಳ ಹಿಂದೆ ಸದ್ಗುರು ಅವರು ಬೆಂಗಳೂರಿಗೆ ಭೇಟಿ ನೀಡಿದಾಗ, ಆವಲಗುರ್ಕಿ ಬಳಿ ಜಾಗತಿಕ ಅಧ್ಯಾತ್ಮ ಕೇಂದ್ರ ಮತ್ತು ನಂದಿ ಬೆಟ್ಟದ ತಪ್ಪಲಿನಲ್ಲಿ ಆದಿ ಯೋಗಿ ಮೂರ್ತಿ ಸ್ಥಾಪಿಸುವಂತೆ ವೈಯಕ್ತಿಕವಾಗಿ ವಿನಂತಿಸಿದ್ದೆ. ಅದಕ್ಕೆ ಅವರು ಒಪ್ಪಿದ್ದಾರೆ’ ಎಂದು ತಿಳಿಸಿದರು.