ಕಳೆದ ವಿಚಾರಣೆಯಲ್ಲಿ, ‘ಕಾಮಗಾರಿ ಕೈಗೊಳ್ಳದಂತೆ, ಲೋಹದ ಮೂರ್ತಿ ಪ್ರತಿಷ್ಠಾಪನೆ ಮಾಡದಂತೆ ಮತ್ತು ಹಬ್ಬದ ದಿನಗಳಲ್ಲಿ ಲಕ್ಷಗಟ್ಟಲೆ ಸಂಖ್ಯೆಯಲ್ಲಿ ಜನರು ಜಮಾಯಿಸದಂತೆ ನಿರ್ಬಂಧಿಸಬೇಕು’ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿದಾರರ (ಪಿಐಎಲ್) ಮಧ್ಯಂತರ ಮನವಿಯನ್ನು ಮಾನ್ಯ ಮಾಡಿದ್ದ ಹೈಕೋರ್ಟ್, ಈ ಪ್ರದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿತ್ತು.