ವಿಧಾನ ಪರಿಷತ್ನಲ್ಲಿ ಬಿಜೆಪಿಯ ತುಳಸಿ ಮುನಿರಾಜುಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, 1,051 ಒತ್ತುವರಿ ಪ್ರಕರಣಗಳಲ್ಲಿ 339 ಪ್ರಕರಣಗಳಲ್ಲಿ 403 ಎಕರೆ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ದಕ್ಷಿಣ ಹಾಗೂ ಆನೇಕಲ್ನಲ್ಲೂ 587 ಎಕರೆ ಒತ್ತುವರಿ ಪತ್ತೆ ಹಚ್ಚಲಾಗಿದೆ. 18 ಪ್ರಕರಣಗಳಲ್ಲಿ ಒತ್ತುವರಿ ತೆರವು ಮಾಡದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಎಲ್ಲ ಜಾಗ ಮರಳಿ ಪಡೆಯಲು ಪ್ರಯತ್ನ ಮುಂದುವರಿಸಲಾಗುವುದು ಎಂದರು.