<p><strong>ಬೆಂಗಳೂರು:</strong> ನಗರದ ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳ ಐಸಿರಿ ರಾಜ್ಯಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. </p>.<p>ರಾಜ್ಯದ ವಿವಿಧ ಜಿಲ್ಲೆಗಳ ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕನ್ನಡ ಸೇನೆ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ.ಆರ್. ಕುಮಾರ್ ಅವರು ಉದ್ಘಾಟಿಸಿದರು.</p><p>ವಿದ್ಯಾರ್ಥಿಗಳು ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದರು. ಕಿರುತೆರೆ ನಟ ಅಶ್ವಿನ್ ಯಾದವ್ ಅವರು ಸಮಾರೋಪದಲ್ಲಿ ಭಾಗವಹಿಸಿ ಬಹುಮಾನ ವಿತರಣೆ ಮಾಡಿದರು. </p><p>ಸಮಗ್ರ ವಿಜೇತ ತಂಡವಾಗಿ ಜ್ಯೋತಿ ನಿವಾಸ ಕಾಲೇಜು ಹಾಗೂ ಎರಡನೇ ಬಹುಮಾನವನ್ನು ಮೌಂಟ್ ಕಾರ್ಮೆಲ್ ಕಾಲೇಜು ಪಡೆದವು. </p><p>ಕನ್ನಡ ವಿಭಾಗದ ಡಾ. ಈರಯ್ಯ ಹಂಪಾಪುರ, ಡಾ. ಹನುಮಂತರಾಯಪ್ಪ, ಡಾ. ಪೂರ್ಣಿಮಾ ಬಿ.ಎನ್, ಡಾ.ಪೂರ್ಣಿಮಾ ಎಸ್. ಹಾಗೂ ಡಾ. ಕುಮಾರಸ್ವಾಮಿ ಬೆಜ್ಜಿಹಳ್ಳಿ ಅವರು ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳ ಐಸಿರಿ ರಾಜ್ಯಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. </p>.<p>ರಾಜ್ಯದ ವಿವಿಧ ಜಿಲ್ಲೆಗಳ ಕಾಲೇಜು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕನ್ನಡ ಸೇನೆ ಸಂಘಟನೆಯ ರಾಜ್ಯಾಧ್ಯಕ್ಷರಾದ ಕೆ.ಆರ್. ಕುಮಾರ್ ಅವರು ಉದ್ಘಾಟಿಸಿದರು.</p><p>ವಿದ್ಯಾರ್ಥಿಗಳು ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದರು. ಕಿರುತೆರೆ ನಟ ಅಶ್ವಿನ್ ಯಾದವ್ ಅವರು ಸಮಾರೋಪದಲ್ಲಿ ಭಾಗವಹಿಸಿ ಬಹುಮಾನ ವಿತರಣೆ ಮಾಡಿದರು. </p><p>ಸಮಗ್ರ ವಿಜೇತ ತಂಡವಾಗಿ ಜ್ಯೋತಿ ನಿವಾಸ ಕಾಲೇಜು ಹಾಗೂ ಎರಡನೇ ಬಹುಮಾನವನ್ನು ಮೌಂಟ್ ಕಾರ್ಮೆಲ್ ಕಾಲೇಜು ಪಡೆದವು. </p><p>ಕನ್ನಡ ವಿಭಾಗದ ಡಾ. ಈರಯ್ಯ ಹಂಪಾಪುರ, ಡಾ. ಹನುಮಂತರಾಯಪ್ಪ, ಡಾ. ಪೂರ್ಣಿಮಾ ಬಿ.ಎನ್, ಡಾ.ಪೂರ್ಣಿಮಾ ಎಸ್. ಹಾಗೂ ಡಾ. ಕುಮಾರಸ್ವಾಮಿ ಬೆಜ್ಜಿಹಳ್ಳಿ ಅವರು ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>