<p><strong>ಬೆಂಗಳೂರು</strong>: ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್. ಸೋಮನಾಥ್ ಅವರಿಗೆ ನೀಡಲಾಗಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರದಾನ ಮಾಡಿದರು. </p>.<p>ವಿಶ್ವವಿದ್ಯಾಲಯ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎಸ್. ಸೋಮನಾಥ್ ಅವರ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಗೆಹಲೋತ್, ‘ಸೋಮನಾಥ್ ಅವರ ನಾಯಕತ್ವದಲ್ಲಿ ಇಸ್ರೊ ಗಮನಾರ್ಹ ಸಾಧನೆಗಳನ್ನು ಮಾಡಿದೆ. ಚಂದ್ರಯಾನ-3 ಯೋಜನೆಯ ಹಿಂದಿನ ಪ್ರೇರಕ ಶಕ್ತಿಯಾಗಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರ ನಾಯಕತ್ವ ಮತ್ತು ದೂರದೃಷ್ಟಿಯಿಂದ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಅತ್ಯುನ್ನತ ಸಾಧನೆಗಳನ್ನು ಮಾಡುತ್ತಿದೆ’ ಎಂದು ಹೇಳಿದರು. </p>.<p>‘ಕರ್ನಾಟಕವು ಶಿಕ್ಷಣ, ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಇಲ್ಲಿ ಅನೇಕ ವಿಶ್ವ ದರ್ಜೆಯ ಸಂಶೋಧನಾ ಕೇಂದ್ರಗಳು ಮತ್ತು ಶಿಕ್ಷಣ ಸಂಸ್ಥೆಗಳಿವೆ. ಅದರಲ್ಲಿ ಬೆಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದೆ’ ಎಂದರು. </p>.<p>ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಸಮಾರಂಭದಲ್ಲಿ ಎಸ್. ಸೋಮನಾಥ್ ಅವರಿಗೆ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್. ಸೋಮನಾಥ್ ಅವರಿಗೆ ನೀಡಲಾಗಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರದಾನ ಮಾಡಿದರು. </p>.<p>ವಿಶ್ವವಿದ್ಯಾಲಯ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎಸ್. ಸೋಮನಾಥ್ ಅವರ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಗೆಹಲೋತ್, ‘ಸೋಮನಾಥ್ ಅವರ ನಾಯಕತ್ವದಲ್ಲಿ ಇಸ್ರೊ ಗಮನಾರ್ಹ ಸಾಧನೆಗಳನ್ನು ಮಾಡಿದೆ. ಚಂದ್ರಯಾನ-3 ಯೋಜನೆಯ ಹಿಂದಿನ ಪ್ರೇರಕ ಶಕ್ತಿಯಾಗಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರ ನಾಯಕತ್ವ ಮತ್ತು ದೂರದೃಷ್ಟಿಯಿಂದ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಅತ್ಯುನ್ನತ ಸಾಧನೆಗಳನ್ನು ಮಾಡುತ್ತಿದೆ’ ಎಂದು ಹೇಳಿದರು. </p>.<p>‘ಕರ್ನಾಟಕವು ಶಿಕ್ಷಣ, ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಇಲ್ಲಿ ಅನೇಕ ವಿಶ್ವ ದರ್ಜೆಯ ಸಂಶೋಧನಾ ಕೇಂದ್ರಗಳು ಮತ್ತು ಶಿಕ್ಷಣ ಸಂಸ್ಥೆಗಳಿವೆ. ಅದರಲ್ಲಿ ಬೆಂಗಳೂರು ವಿಶ್ವವಿದ್ಯಾಲಯವೂ ಒಂದಾಗಿದೆ’ ಎಂದರು. </p>.<p>ಬೆಂಗಳೂರು ವಿಶ್ವವಿದ್ಯಾಲಯದ 58ನೇ ಘಟಿಕೋತ್ಸವ ಸಮಾರಂಭದಲ್ಲಿ ಎಸ್. ಸೋಮನಾಥ್ ಅವರಿಗೆ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>