<p><strong>ಯಲಹಂಕ:</strong> ‘ಈ ವರ್ಷದ ಜನವರಿಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) 100ನೇ ಮಿಷನ್ ‘ಜಿಎಸ್ಎಲ್ವಿ-ಎಫ್15’ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವುದರೊಂದಿಗೆ ಭಾರತ, ಜಾಗತಿಕ ಬಾಹ್ಯಾಕಾಶ ಶಕ್ತಿಯಾಗಿ ಹೊರಹೊಮ್ಮುತ್ತಿದೆ’ ಎಂದು ಇಸ್ರೊ ಸಂಸ್ಥೆಯ ಅಧ್ಯಕ್ಷ ಡಾ.ವಿ.ನಾರಾಯಣನ್ ತಿಳಿಸಿದರು.</p>.<p>ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಐಇಇಇ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಐದು ದಶಕಗಳಲ್ಲಿ ಭಾರತದ ಬೆಳವಣಿಗೆಗೆ ಕೊಡುಗೆ ನೀಡುವ ಇಸ್ರೊ ಮೂಲಕ ಮಹತ್ವದ ಮೈಲುಗಲ್ಲುಗಳನ್ನು ಸಾಧಿಸಿದೆ. ಈ ಸಂಸ್ಥೆಯು ವಿಶ್ವದ ಅತ್ಯಂತ ಗೌರವಾನ್ವಿತ ಬಾಹ್ಯಾಕಾಶ ಸಂಸ್ಥೆಗಳಲ್ಲಿ ಒಂದಾಗಿದೆ’ ಎಂದರು.</p>.<p>ವಿಕಸಿತ ಭಾರತ-2047ರ ಕನಸು ವೇಗವಾಗಿ ವಾಸ್ತವಕ್ಕೆ ತಿರುಗುತ್ತಿದೆ. ಶೈಕ್ಷಣಿಕ ಸಂಶೋಧನೆ ಮತ್ತು ಉದ್ಯಮದಲ್ಲಿ ಜಾಗತಿಕ ನಾಯಕರನ್ನು ಒಟ್ಟುಗೂಡಿಸುವಲ್ಲಿ ಇಂತಹ ಸಮ್ಮೇಳನಗಳು ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟರು.</p>.<p>ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಪತಿ ನಿಸ್ಸಾರ್ ಅಹಮದ್, ಪುದುಚೆರಿಯ ಎನ್ಐಟಿ ನಿರ್ದೇಶಕ ಮಕರಂದ್ ಮಾಧವ್ ಘಂಗ್ರೇಕರ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ‘ಈ ವರ್ಷದ ಜನವರಿಯಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) 100ನೇ ಮಿಷನ್ ‘ಜಿಎಸ್ಎಲ್ವಿ-ಎಫ್15’ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವುದರೊಂದಿಗೆ ಭಾರತ, ಜಾಗತಿಕ ಬಾಹ್ಯಾಕಾಶ ಶಕ್ತಿಯಾಗಿ ಹೊರಹೊಮ್ಮುತ್ತಿದೆ’ ಎಂದು ಇಸ್ರೊ ಸಂಸ್ಥೆಯ ಅಧ್ಯಕ್ಷ ಡಾ.ವಿ.ನಾರಾಯಣನ್ ತಿಳಿಸಿದರು.</p>.<p>ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಐಇಇಇ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಐದು ದಶಕಗಳಲ್ಲಿ ಭಾರತದ ಬೆಳವಣಿಗೆಗೆ ಕೊಡುಗೆ ನೀಡುವ ಇಸ್ರೊ ಮೂಲಕ ಮಹತ್ವದ ಮೈಲುಗಲ್ಲುಗಳನ್ನು ಸಾಧಿಸಿದೆ. ಈ ಸಂಸ್ಥೆಯು ವಿಶ್ವದ ಅತ್ಯಂತ ಗೌರವಾನ್ವಿತ ಬಾಹ್ಯಾಕಾಶ ಸಂಸ್ಥೆಗಳಲ್ಲಿ ಒಂದಾಗಿದೆ’ ಎಂದರು.</p>.<p>ವಿಕಸಿತ ಭಾರತ-2047ರ ಕನಸು ವೇಗವಾಗಿ ವಾಸ್ತವಕ್ಕೆ ತಿರುಗುತ್ತಿದೆ. ಶೈಕ್ಷಣಿಕ ಸಂಶೋಧನೆ ಮತ್ತು ಉದ್ಯಮದಲ್ಲಿ ಜಾಗತಿಕ ನಾಯಕರನ್ನು ಒಟ್ಟುಗೂಡಿಸುವಲ್ಲಿ ಇಂತಹ ಸಮ್ಮೇಳನಗಳು ಸಹಕಾರಿಯಾಗಲಿವೆ ಎಂದು ಅಭಿಪ್ರಾಯಪಟ್ಟರು.</p>.<p>ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಪತಿ ನಿಸ್ಸಾರ್ ಅಹಮದ್, ಪುದುಚೆರಿಯ ಎನ್ಐಟಿ ನಿರ್ದೇಶಕ ಮಕರಂದ್ ಮಾಧವ್ ಘಂಗ್ರೇಕರ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>