<p><strong>ಕೆ.ಆರ್.ಪುರ:</strong> ‘ಖರೀದಿಸಿದ್ದ ನಿವೇಶನದಲ್ಲಿ ಮನೆ ನಿರ್ಮಿಸಲು ಅಡ್ಡಿಪಡಿಸಿದ್ದಾರೆ’ ಎನ್ನುವ ಕಾರಣಕ್ಕೆ ನೊಂದು ಐ.ಟಿ ಕಂಪನಿ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ಫೀಲ್ಡ್ ಪೋಲಿಸ್ ಠಾಣೆ ವ್ಯಾಪ್ತಿಯ ನಲ್ಲೂರಹಳ್ಳಿ ಬಳಿ ನಡೆದಿದೆ.</p>.<p>ಮುರುಳಿ (45) ಆತ್ಮಹತ್ಯೆ ಮಾಡಿಕೊಂಡವರು. ಈ ಘಟನೆ ಸಂಬಂಧ ಉಷಾ ನಂಬಿಯಾರ್ ಹಾಗೂ ಶಶಿ ನಂಬಿಯಾರ್ ಎಂಬುವರನ್ನು ಬಂಧಿಸಲಾಗಿದೆ.</p>.<p>ಉಷಾ ನಂಬಿಯಾರ್ ಹಾಗೂ ಶಶಿ ನಂಬಿಯಾರ್ ಅವರ ಸಂಬಂಧಿಯೊಬ್ಬರಿಂದ 2018ರಲ್ಲಿ ಮುರುಳಿ ಅವರು ನಿವೇಶನ ಖರೀದಿಸಿದ್ದರು. ಅದೇ ನಿವೇಶನದಲ್ಲಿ ಮನೆ ನಿರ್ಮಿಸಲು ಮುಂದಾಗಿದ್ದರು. ಮನೆ ಪಕ್ಕದಲ್ಲಿಯೇ ನೆಲಸಿದ್ದ ಉಷಾ ಹಾಗೂ ಶಶಿ ಅವರು ₹20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಸಂಬಂಧಿಕರು ದೂರಿದ್ದಾರೆ.</p>.<p>‘ಹಣ ಕೊಡಲು ನಿರಾಕರಿಸಿದ್ದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಕಾರಿಗಳ ಜೊತೆಗೂಡಿ ಆರೋಪಿಗಳು, ಮನೆ ನಿರ್ಮಾಣಕ್ಕೆ ಅಡ್ಡಿ ಪಡಿಸುತ್ತಿದ್ದರು. ಇದರಿಂದ ನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಮುರುಳಿ ಅವರ ತಾಯಿ ದೂರು ನೀಡಿದ್ದಾರೆ. ದೂರು ಆಧರಿಸಿ ಇಬ್ಬರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ‘ಖರೀದಿಸಿದ್ದ ನಿವೇಶನದಲ್ಲಿ ಮನೆ ನಿರ್ಮಿಸಲು ಅಡ್ಡಿಪಡಿಸಿದ್ದಾರೆ’ ಎನ್ನುವ ಕಾರಣಕ್ಕೆ ನೊಂದು ಐ.ಟಿ ಕಂಪನಿ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ಫೀಲ್ಡ್ ಪೋಲಿಸ್ ಠಾಣೆ ವ್ಯಾಪ್ತಿಯ ನಲ್ಲೂರಹಳ್ಳಿ ಬಳಿ ನಡೆದಿದೆ.</p>.<p>ಮುರುಳಿ (45) ಆತ್ಮಹತ್ಯೆ ಮಾಡಿಕೊಂಡವರು. ಈ ಘಟನೆ ಸಂಬಂಧ ಉಷಾ ನಂಬಿಯಾರ್ ಹಾಗೂ ಶಶಿ ನಂಬಿಯಾರ್ ಎಂಬುವರನ್ನು ಬಂಧಿಸಲಾಗಿದೆ.</p>.<p>ಉಷಾ ನಂಬಿಯಾರ್ ಹಾಗೂ ಶಶಿ ನಂಬಿಯಾರ್ ಅವರ ಸಂಬಂಧಿಯೊಬ್ಬರಿಂದ 2018ರಲ್ಲಿ ಮುರುಳಿ ಅವರು ನಿವೇಶನ ಖರೀದಿಸಿದ್ದರು. ಅದೇ ನಿವೇಶನದಲ್ಲಿ ಮನೆ ನಿರ್ಮಿಸಲು ಮುಂದಾಗಿದ್ದರು. ಮನೆ ಪಕ್ಕದಲ್ಲಿಯೇ ನೆಲಸಿದ್ದ ಉಷಾ ಹಾಗೂ ಶಶಿ ಅವರು ₹20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಸಂಬಂಧಿಕರು ದೂರಿದ್ದಾರೆ.</p>.<p>‘ಹಣ ಕೊಡಲು ನಿರಾಕರಿಸಿದ್ದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಕಾರಿಗಳ ಜೊತೆಗೂಡಿ ಆರೋಪಿಗಳು, ಮನೆ ನಿರ್ಮಾಣಕ್ಕೆ ಅಡ್ಡಿ ಪಡಿಸುತ್ತಿದ್ದರು. ಇದರಿಂದ ನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಮುರುಳಿ ಅವರ ತಾಯಿ ದೂರು ನೀಡಿದ್ದಾರೆ. ದೂರು ಆಧರಿಸಿ ಇಬ್ಬರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>