<p><strong>ಬೆಂಗಳೂರು:</strong> ಐ.ಟಿ ಯೋಜನೆ ಕೊಡಿಸುವುದಾಗಿ ಆಮಿಷವೊಡ್ಡಿ ನವೋದ್ಯಮಿಗಳಿಂದ ಹಣ ಪಡೆದು ವಂಚಿಸಿದ ಆರೋಪದಡಿ ರೂಪೇಶ್ ಎಂಬಾತನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಯಾಗಿರುವ ಆತನ ಅಕ್ಕ ಕಾವ್ಯಾ ತಲೆಮರೆಸಿಕೊಂಡಿದ್ದಾರೆ.</p>.<p>‘ಅಮೆರಿಕದ ಕಂಪನಿಯೊಂದರಿಂದ ಯೋಜನೆ ಕೊಡಿಸುವುದಾಗಿ ಹೇಳಿದ್ದ ಆರೋಪಿಗಳು ₹ 50 ಲಕ್ಷ ಪಡೆದು ವಂಚಿಸಿದ್ದಾರೆಂದು ನವೋದ್ಯಮಿಯೊಬ್ಬರು ಇತ್ತೀಚೆಗೆ ದೂರು ನೀಡಿದ್ದರು. ಅದರನ್ವಯ ಪ್ರಕರಣ ದಾಖಲಿಸಿಕೊಂಡು ರೂಪೇಶ್ನನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಎಂಇಐ ಬಡಾವಣೆ ನಿವಾಸಿಗಳಾದ ರೂಪೇಶ್ ಮತ್ತು ಕಾವ್ಯಾ, ಎಂಟು ನವೋದ್ಯಮಿಗಳಿಂದ ಹಣ ಪಡೆದಿರುವುದಕ್ಕೆ ಪುರಾವೆಗಳಿವೆ. ಲಾಕ್ಡೌನ್ನಿಂದ ಕೆಲಸವಿಲ್ಲದೇ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ನವೋದ್ಯಮಿಗಳು, ಹೊಸ ಯೋಜನೆಗಳಿಗಾಗಿ ಹುಡುಕಾಡುತ್ತಿದ್ದರು. ಅಂಥವರನ್ನು ಸಂಪರ್ಕಿಸುತ್ತಿದ್ದ ಆರೋಪಿಗಳು, ಕಮಿಷನ್ ನೆಪದಲ್ಲಿ ಮುಂಗಡವಾಗಿ ಹಣ ಪಡೆದು ವಂಚಿಸಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಐ.ಟಿ ಯೋಜನೆ ಕೊಡಿಸುವುದಾಗಿ ಆಮಿಷವೊಡ್ಡಿ ನವೋದ್ಯಮಿಗಳಿಂದ ಹಣ ಪಡೆದು ವಂಚಿಸಿದ ಆರೋಪದಡಿ ರೂಪೇಶ್ ಎಂಬಾತನನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಆರೋಪಿಯಾಗಿರುವ ಆತನ ಅಕ್ಕ ಕಾವ್ಯಾ ತಲೆಮರೆಸಿಕೊಂಡಿದ್ದಾರೆ.</p>.<p>‘ಅಮೆರಿಕದ ಕಂಪನಿಯೊಂದರಿಂದ ಯೋಜನೆ ಕೊಡಿಸುವುದಾಗಿ ಹೇಳಿದ್ದ ಆರೋಪಿಗಳು ₹ 50 ಲಕ್ಷ ಪಡೆದು ವಂಚಿಸಿದ್ದಾರೆಂದು ನವೋದ್ಯಮಿಯೊಬ್ಬರು ಇತ್ತೀಚೆಗೆ ದೂರು ನೀಡಿದ್ದರು. ಅದರನ್ವಯ ಪ್ರಕರಣ ದಾಖಲಿಸಿಕೊಂಡು ರೂಪೇಶ್ನನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಎಂಇಐ ಬಡಾವಣೆ ನಿವಾಸಿಗಳಾದ ರೂಪೇಶ್ ಮತ್ತು ಕಾವ್ಯಾ, ಎಂಟು ನವೋದ್ಯಮಿಗಳಿಂದ ಹಣ ಪಡೆದಿರುವುದಕ್ಕೆ ಪುರಾವೆಗಳಿವೆ. ಲಾಕ್ಡೌನ್ನಿಂದ ಕೆಲಸವಿಲ್ಲದೇ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ನವೋದ್ಯಮಿಗಳು, ಹೊಸ ಯೋಜನೆಗಳಿಗಾಗಿ ಹುಡುಕಾಡುತ್ತಿದ್ದರು. ಅಂಥವರನ್ನು ಸಂಪರ್ಕಿಸುತ್ತಿದ್ದ ಆರೋಪಿಗಳು, ಕಮಿಷನ್ ನೆಪದಲ್ಲಿ ಮುಂಗಡವಾಗಿ ಹಣ ಪಡೆದು ವಂಚಿಸಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>