ಬೆಂಗಳೂರು: ‘ಕೋವಿಡ್ ವಿರುದ್ಧದ ಹೋರಾಟಕ್ಕೆ ಇಡೀ ಮನುಕುಲವೇ ಜೊತೆಯಾಗಬೇಕು. ನಿರ್ದಿಷ್ಟವಾಗಿ ಒಬ್ಬರತ್ತ ಬೊಟ್ಟು ಮಾಡುವುದನ್ನು ಬಿಡಬೇಕು. ರೋಷ, ದುಃಖ, ಹತಾಶೆಗಳಿಂದ ಯಾವ ಪ್ರಯೋಜನವೂ ಇಲ್ಲ. ಇದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಬಹುದಷ್ಟೇ. ಹೀಗಾಗಿ ನಾವೆಲ್ಲಾ ಜವಾಬ್ದಾರಿ ಅರಿತು ಕೆಲಸ ಮಾಡಬೇಕು’ ಎಂದು ಈಶ ಫೌಂಡೇಷನ್ನ ಸಂಸ್ಥಾಪಕ ಜಗ್ಗಿ ವಾಸುದೇವ್ ತಿಳಿಸಿದರು.