<p><strong>ಬೆಂಗಳೂರು</strong>: ‘ಕಾವೇರಿ ಕೂಗು‘ ಅಭಿಯಾನದ ಪ್ರಗತಿಯ ನಡುವೆಯೇ, ಜಗ್ಗಿ ವಾಸುದೇವ್ ನೇತೃತ್ವದ ಈಶ ಪ್ರತಿಷ್ಠಾನವು ಗ್ರಾಮ ಸಂಪರ್ಕ ಅಭಿಯಾನವನ್ನು ಸೋಮವಾರದಿಂದ ಪ್ರಾರಂಭಿಸಿದೆ. ಮರ ಆಧಾರಿತ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ.</p>.<p>‘ರಾಜ್ಯದ ಕಾವೇರಿ ಜಲಾನಯನ ಪ್ರದೇಶದುದ್ದಕ್ಕೂ ಬರುವ ಒಂಬತ್ತು ಜಿಲ್ಲೆಗಳಲ್ಲಿನ 1,785 ಗ್ರಾಮ ಪಂಚಾಯಿತಿಗಳಲ್ಲಿ 24 ಲಕ್ಷ ರೈತರನ್ನು ತಲುಪುವ ಗುರಿಯನ್ನು ಹೊಂದಲಾಗಿದೆ’ ಎಂದು ಸದ್ಗುರು ಜಗ್ಗಿ ವಾಸುದೇವ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘2020ರಲ್ಲಿ ಪ್ರಾರಂಭಿಸಲಾಗಿರುವ ‘ಕಾವೇರಿ ಕೂಗು’ ಅಭಿಯಾನದ ಅಡಿ ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ಜಲಾನಯನ ಪ್ರದೇಶದಲ್ಲಿ ಅಂದಾಜು 1.10 ಕೋಟಿ ಸಸಿಗಳನ್ನು ನೆಡುವಲ್ಲಿ ಯಶಸ್ವಿಯಾಗಿದ್ದೇವೆ. ಕಾವೇರಿ ಕೊಳ್ಳದ 28 ಜಿಲ್ಲೆಗಳ 189 ತಾಲ್ಲೂಕುಗಳಲ್ಲಿ 33 ಸಾವಿರ ರೈತರು ಅಭಿಯಾನಕ್ಕೆ ಕೈಜೋಡಿಸಿದ್ದಾರೆ’ ಎಂದರು.</p>.<p>‘ಇದರ ಮುಂದುವರಿದ ಭಾಗವಾಗಿ ‘ಮರ ಆಧಾರಿತ ಕೃಷಿ’ ಅಭಿಯಾನದಡಿ ಐದುಪಟ್ಟು ಅಂದರೆ 5 ಕೋಟಿ ಸಸಿಗಳನ್ನು ನೆಡುವ ಗುರಿ ಇದೆ. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಅರಣ್ಯ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಸಹಯೋಗದಲ್ಲಿ ಇದನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p><strong>‘ಮರ ಮಿತ್ರರ’ ನೇಮಕ: </strong>ಇದಕ್ಕಾಗಿ 890 ‘ಮರ ಮಿತ್ರ’ರನ್ನು ನೇಮಿಸಲಾಗಿದ್ದು, ಪಂಚಾಯಿತಿ ಮಟ್ಟದಲ್ಲಿ ಇವರು ರೈತರನ್ನು ಉತ್ತೇಜಿಸಲಿದ್ದಾರೆ. ಈಗಾಗಲೇ ವಿವಿಧ ಪಂಚಾಯಿತಿಗಳಲ್ಲಿ ಮರ ಆಧಾರಿತ ಕೃಷಿ ಅಭಿಯಾನಕ್ಕೆ ಸಂಬಂಧಿಸಿದ1,800 ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಉತ್ತಮ ಸ್ಪಂದನೆಯೂ ದೊರಕಿದೆ. ಈ ಅಭಿಯಾನದಿಂದ ರೈತರ ಆದಾಯ ಶೇ 300ರಿಂದ ಶೇ 800ರಷ್ಟು ಹೆಚ್ಚಾಗಲಿದೆ ಎಂದು ಜಗ್ಗಿ ವಾಸುದೇವ್ ಹೇಳಿದರು.</p>.<p>‘ಸ್ಟೇಟ್ ಆಫ್ ದಿ ಆರ್ಟ್’ ಮೊಬೈಲ್ ಆ್ಯಪ್ವೊಂದನ್ನು ಅಭಿವೃದ್ಧಿಪಡಿಸಿದ್ದು, ಇದರಲ್ಲಿ ಹೆಸರು ನೋಂದಾಯಿಸಿಕೊಳ್ಳುವ ರೈತರ ಮನೆ ಬಾಗಿಲಿಗೇ ‘ಮರ ಮಿತ್ರ’ರು ಸಸಿಗಳನ್ನು ತಲುಪಿಸಲಿದ್ದಾರೆ ಎಂದೂ ಅವರು ಮಾಹಿತಿ ನೀಡಿದರು.</p>.<p>‘ಸರ್ಕಾರಿ ಜಾಗದಲ್ಲಿ ಒಂದೇ ಒಂದು ಸಸಿಯನ್ನು ನಾವು ನೆಟ್ಟಿಲ್ಲ. ರೈತರ ಖಾಸಗಿ ಭೂಮಿಯಲ್ಲಿ, ಅವರ ಒಪ್ಪಿಗೆ ಪಡೆದೇ ಸಸಿಗಳನ್ನು ನೆಟ್ಟಿದ್ದೇವೆ. ಅಲ್ಲದೆ, ಅವರಿಗೆ ಯಾವುದೇ ಬಲವಂತ ಮಾಡಿ ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳುತ್ತಿಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಹಿರಿಯ ವಿಜ್ಞಾನಿ ಎ.ಎಸ್. ಕಿರಣ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕಾವೇರಿ ಕೂಗು‘ ಅಭಿಯಾನದ ಪ್ರಗತಿಯ ನಡುವೆಯೇ, ಜಗ್ಗಿ ವಾಸುದೇವ್ ನೇತೃತ್ವದ ಈಶ ಪ್ರತಿಷ್ಠಾನವು ಗ್ರಾಮ ಸಂಪರ್ಕ ಅಭಿಯಾನವನ್ನು ಸೋಮವಾರದಿಂದ ಪ್ರಾರಂಭಿಸಿದೆ. ಮರ ಆಧಾರಿತ ಕೃಷಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ.</p>.<p>‘ರಾಜ್ಯದ ಕಾವೇರಿ ಜಲಾನಯನ ಪ್ರದೇಶದುದ್ದಕ್ಕೂ ಬರುವ ಒಂಬತ್ತು ಜಿಲ್ಲೆಗಳಲ್ಲಿನ 1,785 ಗ್ರಾಮ ಪಂಚಾಯಿತಿಗಳಲ್ಲಿ 24 ಲಕ್ಷ ರೈತರನ್ನು ತಲುಪುವ ಗುರಿಯನ್ನು ಹೊಂದಲಾಗಿದೆ’ ಎಂದು ಸದ್ಗುರು ಜಗ್ಗಿ ವಾಸುದೇವ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘2020ರಲ್ಲಿ ಪ್ರಾರಂಭಿಸಲಾಗಿರುವ ‘ಕಾವೇರಿ ಕೂಗು’ ಅಭಿಯಾನದ ಅಡಿ ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ಜಲಾನಯನ ಪ್ರದೇಶದಲ್ಲಿ ಅಂದಾಜು 1.10 ಕೋಟಿ ಸಸಿಗಳನ್ನು ನೆಡುವಲ್ಲಿ ಯಶಸ್ವಿಯಾಗಿದ್ದೇವೆ. ಕಾವೇರಿ ಕೊಳ್ಳದ 28 ಜಿಲ್ಲೆಗಳ 189 ತಾಲ್ಲೂಕುಗಳಲ್ಲಿ 33 ಸಾವಿರ ರೈತರು ಅಭಿಯಾನಕ್ಕೆ ಕೈಜೋಡಿಸಿದ್ದಾರೆ’ ಎಂದರು.</p>.<p>‘ಇದರ ಮುಂದುವರಿದ ಭಾಗವಾಗಿ ‘ಮರ ಆಧಾರಿತ ಕೃಷಿ’ ಅಭಿಯಾನದಡಿ ಐದುಪಟ್ಟು ಅಂದರೆ 5 ಕೋಟಿ ಸಸಿಗಳನ್ನು ನೆಡುವ ಗುರಿ ಇದೆ. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಅರಣ್ಯ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಸಹಯೋಗದಲ್ಲಿ ಇದನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p><strong>‘ಮರ ಮಿತ್ರರ’ ನೇಮಕ: </strong>ಇದಕ್ಕಾಗಿ 890 ‘ಮರ ಮಿತ್ರ’ರನ್ನು ನೇಮಿಸಲಾಗಿದ್ದು, ಪಂಚಾಯಿತಿ ಮಟ್ಟದಲ್ಲಿ ಇವರು ರೈತರನ್ನು ಉತ್ತೇಜಿಸಲಿದ್ದಾರೆ. ಈಗಾಗಲೇ ವಿವಿಧ ಪಂಚಾಯಿತಿಗಳಲ್ಲಿ ಮರ ಆಧಾರಿತ ಕೃಷಿ ಅಭಿಯಾನಕ್ಕೆ ಸಂಬಂಧಿಸಿದ1,800 ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಉತ್ತಮ ಸ್ಪಂದನೆಯೂ ದೊರಕಿದೆ. ಈ ಅಭಿಯಾನದಿಂದ ರೈತರ ಆದಾಯ ಶೇ 300ರಿಂದ ಶೇ 800ರಷ್ಟು ಹೆಚ್ಚಾಗಲಿದೆ ಎಂದು ಜಗ್ಗಿ ವಾಸುದೇವ್ ಹೇಳಿದರು.</p>.<p>‘ಸ್ಟೇಟ್ ಆಫ್ ದಿ ಆರ್ಟ್’ ಮೊಬೈಲ್ ಆ್ಯಪ್ವೊಂದನ್ನು ಅಭಿವೃದ್ಧಿಪಡಿಸಿದ್ದು, ಇದರಲ್ಲಿ ಹೆಸರು ನೋಂದಾಯಿಸಿಕೊಳ್ಳುವ ರೈತರ ಮನೆ ಬಾಗಿಲಿಗೇ ‘ಮರ ಮಿತ್ರ’ರು ಸಸಿಗಳನ್ನು ತಲುಪಿಸಲಿದ್ದಾರೆ ಎಂದೂ ಅವರು ಮಾಹಿತಿ ನೀಡಿದರು.</p>.<p>‘ಸರ್ಕಾರಿ ಜಾಗದಲ್ಲಿ ಒಂದೇ ಒಂದು ಸಸಿಯನ್ನು ನಾವು ನೆಟ್ಟಿಲ್ಲ. ರೈತರ ಖಾಸಗಿ ಭೂಮಿಯಲ್ಲಿ, ಅವರ ಒಪ್ಪಿಗೆ ಪಡೆದೇ ಸಸಿಗಳನ್ನು ನೆಟ್ಟಿದ್ದೇವೆ. ಅಲ್ಲದೆ, ಅವರಿಗೆ ಯಾವುದೇ ಬಲವಂತ ಮಾಡಿ ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳುತ್ತಿಲ್ಲ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಹಿರಿಯ ವಿಜ್ಞಾನಿ ಎ.ಎಸ್. ಕಿರಣ್ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>