ಬೆಂಗಳೂರಿನಿಂದ ತುಮಕೂರು ಕಡೆಗೆ ಹೋಗುತ್ತಿದ್ದ ಕಾರು ಇದ್ದಕ್ಕಿದ್ದಂತೆ ನಿಂತ ಕಾರಣ, ಬಾನೆಟ್ ತೆರೆಯಲಾಗಿತ್ತು. ಈ ವೇಳೆ ಬೆಂಕಿ ಹೊತ್ತಿ ಉರಿದಿದೆ. ತಾಂತ್ರಿಕ ದೋಷದಿಂದ ಕಾರಿನ ಬಾನೆಟ್ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರು.