<p><strong>ಬೆಂಗಳೂರು:</strong> ಜೈಲು ವಾರ್ಡ್ನಲ್ಲಿ (ವಿಕ್ಟೋರಿಯಾ ಆಸ್ಪತ್ರೆ) ಮತ್ತು ಪರಪ್ಪನ ಅಗ್ರಹಾರ ಜೈಲಿನಲ್ಲಿ ಪಾಶ್ಚಿಮಾತ್ಯ ಶೈಲಿಯ ಕಮೋಡ್ಗಳಿವೆ. ಆರೋಪಿ ಪರ ವಕೀಲರು ಹೇಳುವಂತೆ ಜೈಲಿನಲ್ಲಿ ಕಮೋಡ್ ಇಲ್ಲ ಎಂಬ ಹೇಳಿಕೆಯನ್ನು ಒಪ್ಪಲಾಗದು. ಆದ್ದರಿಂದ ಕೈದಿ, ಜೈಲಿನ ವ್ಯವಸ್ಥೆಯಲ್ಲೇ ಮಂಡಿಚಿಪ್ಪಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿ...</p>.<p>ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಆರೋಪಿ ವಸೀಂ ಅಹಮದ್ ತಮ್ಮ ಎಡಗಾಲಿನ ಎಸಿಎಲ್ (ಆ್ಯಂಟೀರಿಯರ್ ಕ್ರೂಷಿಯೇಟ್ ಲಿಗಮೆಂಟ್) ಶಸ್ತ್ರಚಿಕಿತ್ಸೆಗಾಗಿ ತಾತ್ಕಾಲಿಕ ಜಾಮೀನು ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿರುವ ಹೈಕೋರ್ಟ್, ಈ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ಗುರುವಾರ ಈ ಕುರಿತ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹಾಗೂ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ವಿಭಾಗೀಯ ನ್ಯಾಯಪೀಠ, ವಿಕ್ಟೋರಿಯಾ ಆಸ್ಪತ್ರೆಯ ಕೀಲು ಮೂಳೆ ತಜ್ಞರು, ಪರಪ್ಪನ ಅಗ್ರಹಾರ ಜೈಲಿನ ಸೂಪರಿಂಟೆಂಡೆಂಟ್ ಹಾಗೂ ಮುಖ್ಯ ವೈದ್ಯಾಧಿಕಾರಿಗಳ ಅಭಿಪ್ರಾಯ ಆಲಿಸಿತು.</p>.<p>ವಿಚಾರಣೆ ವೇಳೆ ಈ ಅಧಿಕಾರಿಗಳು, ‘ಆರೋಪಿ ದೂರಿರುವಂತೆ ಜೈಲಿನಲ್ಲಿ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ<br />ಶಸ್ತ್ರಚಿಕಿತ್ಸೆಗೆ ಸೂಕ್ತ ಸೌಲಭ್ಯಗಳಿಲ್ಲ’ ಎಂಬ ತಕರಾರನ್ನು ಅಲ್ಲಗಳೆದರು.</p>.<p>ಇದಕ್ಕೆ ಆರೋಪಿ ಪರ ವಕೀಲ ತಾಹಿರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರಾದರೂ, ನ್ಯಾಯಪೀಠ ಅವರನ್ನು ತರಾಟೆಗೆ ತೆಗೆದುಕೊಂಡಿತು. ‘ಇದೊಂದು ಗಂಭೀರ ಪ್ರಕರಣವಾಗಿದ್ದು ಆರೋಪಿ ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿ’ ಎಂದು ಜೈಲು ಪ್ರಾಧಿಕಾರಕ್ಕೆ ನಿರ್ದೇಶಿಸಿತು.</p>.<p class="Subhead"><strong>ಏನೀ ಮೇಲ್ಮನವಿ?:</strong> ‘ನಾನು 2009ರಲ್ಲಿ ಬಲಗಾಲಿನ ಎಸಿಎಲ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೆ. ಈಗ ಎಡಗಾಲಿನ ಮೊಣಕಾಲಿಗೂ ಶಸ್ತ್ರಚಿಕಿತ್ಸೆ ಅಗತ್ಯವೆಂದು ವೈದ್ಯರು ಹೇಳಿದ್ದಾರೆ. ಅದಕ್ಕಾಗಿ 3 ತಿಂಗಳ ತಾತ್ಕಾಲಿಕ ಜಾಮೀನು ನೀಡಬೇಕು’ ಎಂದು ಕೋರಿ ವಸೀಂ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>ಈ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿದ್ದಲಿಂಗ ಪ್ರಭು ತಿರಸ್ಕರಿಸಿದ್ದರು. ಈ ಆದೇಶ ಪ್ರಶ್ನಿಸಿ ವಸೀಂ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಎನ್ಐಎ ಪರ ವಕೀಲ ಪಿ.ಪ್ರಸನ್ನಕುಮಾರ್ ವಾದ ಮಂಡಿಸಿದರು.</p>.<p class="Subhead"><strong>ಪ್ರಕರಣವೇನು?: </strong>ಶಿವಾಜಿ ನಗರದಲ್ಲಿರುವ ಕಾಮರಾಜ ರಸ್ತೆಯಲ್ಲಿನ ಶ್ರೀನಿವಾಸ ಮೆಡಿಕಲ್ ಸ್ಟೋರ್ ಎದುರು ತನ್ನ ಸ್ನೇಹಿತರ ಜತೆ ನಿಂತಿದ್ದ ರುದ್ರೇಶ್ ಅವರನ್ನು ಬೈಕ್ನಲ್ಲಿ ಬಂದ ಇಬ್ಬರು ಆಸಾಮಿಗಳು ಹತ್ಯೆ ಮಾಡಿದ್ದರು. ಈ ಘಟನೆ 2016ರ ಅಕ್ಟೋಬರ್ 16ರಂದು ಬೆಳಿಗ್ಗೆ 9 ಗಂಟೆ ಸುಮಾರು ನಡೆದಿತ್ತು.</p>.<p>ಈ ಪ್ರಕರಣದಲ್ಲಿ, ಅಸೀಮ್ ಶರೀಫ್, ಇರ್ಫಾನ್ ಪಾಷಾ, ವಸೀಂ ಅಹಮದ್, ಮಹಮ್ಮದ್ ಸಾದಿಕ್ ಅಲಿಯಾಸ್ ಮಜಹರ್ ಮತ್ತು ಮಹಮ್ಮದ್ ಮುಬೀಬುಲ್ಲಾ ಅಲಿಯಾಸ್ ಮೌಲಾ ಆರೋಪಿಗಳಾಗಿದ್ದಾರೆ. ಎನ್ಐಎ ವಿಶೇಷ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜೈಲು ವಾರ್ಡ್ನಲ್ಲಿ (ವಿಕ್ಟೋರಿಯಾ ಆಸ್ಪತ್ರೆ) ಮತ್ತು ಪರಪ್ಪನ ಅಗ್ರಹಾರ ಜೈಲಿನಲ್ಲಿ ಪಾಶ್ಚಿಮಾತ್ಯ ಶೈಲಿಯ ಕಮೋಡ್ಗಳಿವೆ. ಆರೋಪಿ ಪರ ವಕೀಲರು ಹೇಳುವಂತೆ ಜೈಲಿನಲ್ಲಿ ಕಮೋಡ್ ಇಲ್ಲ ಎಂಬ ಹೇಳಿಕೆಯನ್ನು ಒಪ್ಪಲಾಗದು. ಆದ್ದರಿಂದ ಕೈದಿ, ಜೈಲಿನ ವ್ಯವಸ್ಥೆಯಲ್ಲೇ ಮಂಡಿಚಿಪ್ಪಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿ...</p>.<p>ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಆರೋಪಿ ವಸೀಂ ಅಹಮದ್ ತಮ್ಮ ಎಡಗಾಲಿನ ಎಸಿಎಲ್ (ಆ್ಯಂಟೀರಿಯರ್ ಕ್ರೂಷಿಯೇಟ್ ಲಿಗಮೆಂಟ್) ಶಸ್ತ್ರಚಿಕಿತ್ಸೆಗಾಗಿ ತಾತ್ಕಾಲಿಕ ಜಾಮೀನು ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿರುವ ಹೈಕೋರ್ಟ್, ಈ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p>ಗುರುವಾರ ಈ ಕುರಿತ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹಾಗೂ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ವಿಭಾಗೀಯ ನ್ಯಾಯಪೀಠ, ವಿಕ್ಟೋರಿಯಾ ಆಸ್ಪತ್ರೆಯ ಕೀಲು ಮೂಳೆ ತಜ್ಞರು, ಪರಪ್ಪನ ಅಗ್ರಹಾರ ಜೈಲಿನ ಸೂಪರಿಂಟೆಂಡೆಂಟ್ ಹಾಗೂ ಮುಖ್ಯ ವೈದ್ಯಾಧಿಕಾರಿಗಳ ಅಭಿಪ್ರಾಯ ಆಲಿಸಿತು.</p>.<p>ವಿಚಾರಣೆ ವೇಳೆ ಈ ಅಧಿಕಾರಿಗಳು, ‘ಆರೋಪಿ ದೂರಿರುವಂತೆ ಜೈಲಿನಲ್ಲಿ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ<br />ಶಸ್ತ್ರಚಿಕಿತ್ಸೆಗೆ ಸೂಕ್ತ ಸೌಲಭ್ಯಗಳಿಲ್ಲ’ ಎಂಬ ತಕರಾರನ್ನು ಅಲ್ಲಗಳೆದರು.</p>.<p>ಇದಕ್ಕೆ ಆರೋಪಿ ಪರ ವಕೀಲ ತಾಹಿರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರಾದರೂ, ನ್ಯಾಯಪೀಠ ಅವರನ್ನು ತರಾಟೆಗೆ ತೆಗೆದುಕೊಂಡಿತು. ‘ಇದೊಂದು ಗಂಭೀರ ಪ್ರಕರಣವಾಗಿದ್ದು ಆರೋಪಿ ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿ’ ಎಂದು ಜೈಲು ಪ್ರಾಧಿಕಾರಕ್ಕೆ ನಿರ್ದೇಶಿಸಿತು.</p>.<p class="Subhead"><strong>ಏನೀ ಮೇಲ್ಮನವಿ?:</strong> ‘ನಾನು 2009ರಲ್ಲಿ ಬಲಗಾಲಿನ ಎಸಿಎಲ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೆ. ಈಗ ಎಡಗಾಲಿನ ಮೊಣಕಾಲಿಗೂ ಶಸ್ತ್ರಚಿಕಿತ್ಸೆ ಅಗತ್ಯವೆಂದು ವೈದ್ಯರು ಹೇಳಿದ್ದಾರೆ. ಅದಕ್ಕಾಗಿ 3 ತಿಂಗಳ ತಾತ್ಕಾಲಿಕ ಜಾಮೀನು ನೀಡಬೇಕು’ ಎಂದು ಕೋರಿ ವಸೀಂ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.</p>.<p>ಈ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿದ್ದಲಿಂಗ ಪ್ರಭು ತಿರಸ್ಕರಿಸಿದ್ದರು. ಈ ಆದೇಶ ಪ್ರಶ್ನಿಸಿ ವಸೀಂ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಎನ್ಐಎ ಪರ ವಕೀಲ ಪಿ.ಪ್ರಸನ್ನಕುಮಾರ್ ವಾದ ಮಂಡಿಸಿದರು.</p>.<p class="Subhead"><strong>ಪ್ರಕರಣವೇನು?: </strong>ಶಿವಾಜಿ ನಗರದಲ್ಲಿರುವ ಕಾಮರಾಜ ರಸ್ತೆಯಲ್ಲಿನ ಶ್ರೀನಿವಾಸ ಮೆಡಿಕಲ್ ಸ್ಟೋರ್ ಎದುರು ತನ್ನ ಸ್ನೇಹಿತರ ಜತೆ ನಿಂತಿದ್ದ ರುದ್ರೇಶ್ ಅವರನ್ನು ಬೈಕ್ನಲ್ಲಿ ಬಂದ ಇಬ್ಬರು ಆಸಾಮಿಗಳು ಹತ್ಯೆ ಮಾಡಿದ್ದರು. ಈ ಘಟನೆ 2016ರ ಅಕ್ಟೋಬರ್ 16ರಂದು ಬೆಳಿಗ್ಗೆ 9 ಗಂಟೆ ಸುಮಾರು ನಡೆದಿತ್ತು.</p>.<p>ಈ ಪ್ರಕರಣದಲ್ಲಿ, ಅಸೀಮ್ ಶರೀಫ್, ಇರ್ಫಾನ್ ಪಾಷಾ, ವಸೀಂ ಅಹಮದ್, ಮಹಮ್ಮದ್ ಸಾದಿಕ್ ಅಲಿಯಾಸ್ ಮಜಹರ್ ಮತ್ತು ಮಹಮ್ಮದ್ ಮುಬೀಬುಲ್ಲಾ ಅಲಿಯಾಸ್ ಮೌಲಾ ಆರೋಪಿಗಳಾಗಿದ್ದಾರೆ. ಎನ್ಐಎ ವಿಶೇಷ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>