‘ಅಂಗಳದಲ್ಲಿ ಕಸ ಬಿದ್ದಿರುತ್ತಿದ್ದ ಹಾಗೂ ರಂಗೋಲಿ ಹಾಕಿರದ ಮನೆಗಳನ್ನು ಆರೋಪಿಗಳು ಗುರುತಿಸುತ್ತಿದ್ದರು. ಬೀಗ ಮುರಿದು ಮನೆಯೊಳಗೆ ನುಗ್ಗಿ ನಗದು ಹಾಗೂ ಚಿನ್ನಾಭರಣ ಕದ್ದುಕೊಂಡು ಪರಾರಿಯಾಗುತ್ತಿದ್ದರು. ಚಿಕ್ಕಮಗಳೂರು, ಹಿರಿಯೂರು, ಭದ್ರಾವತಿ, ತುಮಕೂರು, ಉಡುಪಿ, ಚಾಮರಾಜನಗರ, ವಿಜಯಪುರ, ಯಾದಗಿರಿ ಸೇರಿದಂತೆ ವಿವಿಧೆಡೆ ಆರೋಪಿಗಳು ಕಳ್ಳತನ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ’ ಎಂದೂ ಹೇಳಿದರು.