ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭಕ್ತೆ’ ಸೋಗಿನಲ್ಲಿ ದೇವರ ಬೆಳ್ಳಿ ಸಾಮಗ್ರಿ ಕಳವು

ಮನೆ ಸಾಗಿಸಲು ಕೃತ್ಯವೆಂದ ಮಹಿಳೆ
Last Updated 21 ಅಕ್ಟೋಬರ್ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೆ.ಪಿ. ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿರುವ ಜೈನ ಬಸದಿಯೊಂದಕ್ಕೆ ಭಕ್ತೆ ಸೋಗಿನಲ್ಲಿ ಪ್ರವೇಶಿಸಿ ದೇವರ ಬೆಳ್ಳಿ ಸಾಮಗ್ರಿಗಳನ್ನು ಕದ್ದಿದ್ದ ಆರೋಪದಡಿ ಮಂಜು ಅಲಿಯಾಸ್ ಮುನ್ನಿಬಾನು (35) ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

‘ಅ. 16ರಂದು ಬೆಳ್ಳಿ ಸಾಮಗ್ರಿಗಳು ಕಳ್ಳತನವಾಗಿದ್ದವು. ಈ ಬಗ್ಗೆ ಭಕ್ತರೊಬ್ಬರು ದೂರು ನೀಡಿದ್ದರು. ಅದರನ್ವಯ ಪ್ರಕರಣ ದಾಖಲಿಸಿಕೊಂಡು ಮುನ್ನಿಬಾನುಳನ್ನು ಬಂಧಿಸಲಾಗಿದೆ. 379 ಗ್ರಾಂ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಬಸದಿಯಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ದೂರುದಾರ ಹಾಗೂ ಅವರ ಕುಟುಂಬದವರು, ದೇವರ ಬೆಳ್ಳಿ ಸಾಮಗ್ರಿಗಳನ್ನು ಬಸದಿಗೆ ತಂದು ಪೂಜೆ ಮಾಡಿದ್ದರು. ಪೂಜೆ ಮುಗಿದ ನಂತರ ಸಾಮಗ್ರಿಗಳನ್ನು ಚೀಲದಲ್ಲಿ ತುಂಬಿ ಇರಿಸಿದ್ದರು. ಪ್ರಸಾದ ನೀಡಲೆಂದು ದೂರುದಾರ ಬಸದಿಯಿಂದ ಹೊರಗೆ ಹೋಗಿದ್ದರು. ಇದೇ ಸಂದರ್ಭದಲ್ಲೇ ಆರೋಪಿ, ಚೀಲವನ್ನು ಕದ್ದುಕೊಂಡು ಹೋಗಿದ್ದರು’ ಎಂದೂ ತಿಳಿಸಿದರು.

ಮನೆ ಸಾಗಿಸಲು ಕೃತ್ಯ: ‘ಜೈನ ಸಮುದಾಯಕ್ಕೆ ಸೇರಿದ್ದ ಮಂಜು, ಅನ್ಯಧರ್ಮದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ತನ್ನ ಹೆಸರು ಮುನ್ನಿಬಾಯಿ ಎಂಬುದಾಗಿ ಬದಲಾಯಿಸಿಕೊಂಡಿದ್ದಾಳೆ. ಈಕೆಯ ಪತಿ ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಮದ್ಯವ್ಯಸನಿಯಾಗಿದ್ದ ಪತಿ, ದುಡಿದ ಹಣವನ್ನೆಲ್ಲ ಮದ್ಯ ಖರೀದಿಗೆ ಖರ್ಚು ಮಾಡುತ್ತಿದ್ದ. ಮನೆ ನಡೆಸುವುದು ಕಷ್ಟವಾಗಿತ್ತು. ಇದೇ ಕಾರಣಕ್ಕೆ ಆರೋಪಿ, ಕಳ್ಳತನ ಮಾಡಲಾರಂಭಿಸಿದ್ದಳು. ಈ ಬಗ್ಗೆ ಆಕೆ ಹೇಳಿಕೆ ನೀಡಿದ್ದಾಳೆ’ ಎಂದೂ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT