<p><strong>ಬೆಂಗಳೂರು</strong>: ಜೈನ್ ಅಭಿವೃದ್ಧಿ ನಿಗಮ ಸ್ಥಾಪಿಸಿ, ನಿಗಮಕ್ಕೆ ಪ್ರತಿವರ್ಷ ₹200 ಕೋಟಿ ಅನುದಾನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 29 ರಂದು ಜೈನ ಸಮುದಾಯದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ಜೈನ ಸಮಾಜ ಹಿತರಕ್ಷಣಾ ಒಕ್ಕೂಟ ತಿಳಿಸಿದೆ.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸದಸ್ಯರಾದ ಬಾಬುಭಾಯಿ ಮೆಹ್ತಾ, ಕವಿತಾ ಜೈನ್, ಇಂದ್ರಮಲ್ ನಹಾರ್, ‘ಪ್ರತಿ ಜಿಲ್ಲೆಗೊಂದು ವಿದ್ಯಾರ್ಥಿನಿಲಯ ಹಾಗೂ ಜೈನ್ ಸಮುದಾಯ ಜನಸಂಖ್ಯೆ ಹೆಚ್ಚಿರುವ ಕಡೆಗೆ ಮತ್ತು ಶೈಕ್ಷಣಿಕ ಕೇಂದ್ರಗಳಲ್ಲಿ ಎರಡು ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು. </p>.<p>‘ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಸ್ಥಾನವನ್ನು ಜೈನ್ ಸಮುದಾಯಕ್ಕೆ ನೀಡಬೇಕು. ನಿಗಮದಲ್ಲಿ ನಿರ್ದೇಶಕರ ಹುದ್ದೆಗೆ ಹಾಗೂ ಆಯೋಗದ ಸದಸ್ಯರಾಗಿ ಜೈನ್ ಸಮುದಾಯದವರನ್ನು ಆಯ್ಕೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಅಲ್ಪಸಂಖ್ಯಾತರ ವಿಭಾಗದಲ್ಲಿ ಜೈನ್ ಸಮುದಾಯಕ್ಕೆ ಶೇಕಡ 5ರಷ್ಟು ಇರುವ ಮೀಸಲಾತಿಯನ್ನು ಶೇ 20ಕ್ಕೆ ಹೆಚ್ಚಿಸಬೇಕು. ಪ್ರಾಚೀನ ಜೈನ್ ಬಸದಿ ಹಾಗೂ ಬಸದಿಗಳ ಆಸ್ತಿ ಸಂರಕ್ಷಣೆಗೆ ಕಾನೂನು ರೂಪಿಸಬೇಕು. ಎಲ್ಲ ಪ್ರಾಚೀನ ಜೈನ್ ಬಸದಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಸಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜೈನ್ ಅಭಿವೃದ್ಧಿ ನಿಗಮ ಸ್ಥಾಪಿಸಿ, ನಿಗಮಕ್ಕೆ ಪ್ರತಿವರ್ಷ ₹200 ಕೋಟಿ ಅನುದಾನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 29 ರಂದು ಜೈನ ಸಮುದಾಯದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ಜೈನ ಸಮಾಜ ಹಿತರಕ್ಷಣಾ ಒಕ್ಕೂಟ ತಿಳಿಸಿದೆ.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸದಸ್ಯರಾದ ಬಾಬುಭಾಯಿ ಮೆಹ್ತಾ, ಕವಿತಾ ಜೈನ್, ಇಂದ್ರಮಲ್ ನಹಾರ್, ‘ಪ್ರತಿ ಜಿಲ್ಲೆಗೊಂದು ವಿದ್ಯಾರ್ಥಿನಿಲಯ ಹಾಗೂ ಜೈನ್ ಸಮುದಾಯ ಜನಸಂಖ್ಯೆ ಹೆಚ್ಚಿರುವ ಕಡೆಗೆ ಮತ್ತು ಶೈಕ್ಷಣಿಕ ಕೇಂದ್ರಗಳಲ್ಲಿ ಎರಡು ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು. </p>.<p>‘ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಸ್ಥಾನವನ್ನು ಜೈನ್ ಸಮುದಾಯಕ್ಕೆ ನೀಡಬೇಕು. ನಿಗಮದಲ್ಲಿ ನಿರ್ದೇಶಕರ ಹುದ್ದೆಗೆ ಹಾಗೂ ಆಯೋಗದ ಸದಸ್ಯರಾಗಿ ಜೈನ್ ಸಮುದಾಯದವರನ್ನು ಆಯ್ಕೆ ಮಾಡಬೇಕು’ ಎಂದು ಒತ್ತಾಯಿಸಿದರು.</p>.<p>‘ಅಲ್ಪಸಂಖ್ಯಾತರ ವಿಭಾಗದಲ್ಲಿ ಜೈನ್ ಸಮುದಾಯಕ್ಕೆ ಶೇಕಡ 5ರಷ್ಟು ಇರುವ ಮೀಸಲಾತಿಯನ್ನು ಶೇ 20ಕ್ಕೆ ಹೆಚ್ಚಿಸಬೇಕು. ಪ್ರಾಚೀನ ಜೈನ್ ಬಸದಿ ಹಾಗೂ ಬಸದಿಗಳ ಆಸ್ತಿ ಸಂರಕ್ಷಣೆಗೆ ಕಾನೂನು ರೂಪಿಸಬೇಕು. ಎಲ್ಲ ಪ್ರಾಚೀನ ಜೈನ್ ಬಸದಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಸಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>