ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಶಾಂತಿಗಾಗಿ ಉಪವಾಸ ವ್ರತ

Last Updated 1 ಆಗಸ್ಟ್ 2019, 19:23 IST
ಅಕ್ಷರ ಗಾತ್ರ

ಬೆಂಗಳೂರು‌: ಜಾತಿ, ವರ್ಗಗಳ ನಡುವೆ ಪರಸ್ಪರ ಹೆಚ್ಚುತ್ತಿರುವ ಸಂಘರ್ಷ ತಪ್ಪಿಸಿ ಎಲ್ಲಾ ವರ್ಗದ ಜನರ ನಡುವೆ ಪ್ರೀತಿ ಹಂಚುವ ಕಾರ್ಯ ತುರ್ತಾಗಿ ನಡೆಯುವ ಅಗತ್ಯವಿದೆ ಎಂದು ಜೈನಮುನಿ ಪ್ರವೀಣ್ ಋಷಿಜಿ ಹೇಳಿದರು.

ಗುರು ಆನಂದ ಚಾತುರ್ಮಾಸ್ಯ ಸಮಿತಿ ವತಿಯಿಂದ ಆಚಾರ್ಯ ಆನಂದ ಋಷಿಜಿ ಅವರ 120ನೇ ಜನ್ಮದಿನದ ಅಂಗವಾಗಿ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ವಿಶ್ವಶಾಂತಿಗಾಗಿ ಉಪವಾಸ ವ್ರತದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕೇವಲ ನೀರು ಕುಡಿದು 192 ಗಂಟೆಗಳ ಕಾಲ ಉಪವಾಸ ಮಾಡುವುದು ಸುಲಭದ ಕೆಲಸವಲ್ಲ. ಆದರೂ, ವಿಶ್ವ ಶಾಂತಿಗಾಗಿ ಈ ವ್ರತ ಆಚರಿಸಲಾಯಿತು. ಎಲ್ಲಾ ವರ್ಗ, ಜಾತಿಯ ಜನರು ಇದರಲ್ಲಿ ಪಾಲ್ಗೊಂಡಿದ್ದು ಸಂತಸದ ಸಂಗತಿ’ ಎಂದರು.

ಕಾರ್ಯಕ್ರಮದಲ್ಲಿ ಜೈನ ಸಮುದಾಯದ ನೂರಾರು ಭಕ್ತರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT