<p><strong>ಕೆಂಗೇರಿ</strong>: ‘ಮಹಾತ್ಮ ಗಾಂಧೀಜಿ ಅವರು ತಮ್ಮ ಜೀವನದುದ್ದಕ್ಕೂ ಪ್ರತಿಪಾದಿಸಿದ ಸತ್ಯ ಹಾಗೂ ಅಹಿಂಸೆಗೆ ಜೈನ ಧರ್ಮದ ತತ್ವ ಮತ್ತು ಆದರ್ಶಗಳೇ ಪ್ರೇರಕ ಶಕ್ತಿಯಾಗಿದ್ದವು’ ಎಂದು ಶೇಷಾದ್ರಿಪುರ ಶಿಕ್ಷಣ ದತ್ತಿಯ ಗೌರವ ಕಾರ್ಯದರ್ಶಿ ವೂಡೇ ಪಿ.ಕೃಷ್ಣ ತಿಳಿಸಿದರು.</p>.<p>ಹಂಪಿ ಕನ್ನಡ ವಿಶ್ವವಿದ್ಯಾಲಯದ ಜೈನ ಸಾಹಿತ್ಯ ಸಂಸ್ಕೃತಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿಕೆಂಗೇರಿ ಉಪನಗರದ ಶೇಷಾದ್ರಿಪುರ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ‘ಜೈನ ಧರ್ಮದಲ್ಲಿ ಲೌಕಿಕ ಮತ್ತು ಬದುಕಿನ ಪರಿಕಲ್ಪನೆ’ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>‘ಜೈನ ಧರ್ಮದ ಮೂಲ ತತ್ವವಾದ ಅಹಿಂಸಾ ಭಾವದ ಅಚರಣೆಯಿಂದಲೇ ಗಾಂಧೀಜಿ ರಾಜಕೀಯ ಸಂತನಾಗಲು ಸಾಧ್ಯವಾಯಿತು’ ಎಂದರು.</p>.<p>ಸಾಹಿತಿ ಹಂಪ ನಾಗರಾಜಯ್ಯ,‘ರನ್ನ, ಪೊನ್ನ, ಜನ್ನ ಸೇರಿದಂತೆ ಹಲವಾರು ಜೈನ ಕವಿಗಳು ಕನ್ನಡ ಸಾಹಿತ್ಯ ಪ್ರಾಕಾರಕ್ಕೆ ಅಮೂಲಾಗ್ರ ಕೊಡುಗೆ ನೀಡಿದ್ದಾರೆ. ಎಲ್ಲ ಜೀವಿಗೂ ಸ್ವತಂತ್ರವಾಗಿ, ನೆಮ್ಮದಿಯಿಂದ ಜೀವಿಸುವ ಅವಕಾಶ ನೀಡುವ ಜೈನ ಧರ್ಮ ನಿಜವಾದ ಅರ್ಥದಲ್ಲಿ ಪರಿಸರ ಸ್ನೇಹಿ ಧರ್ಮ’ ಎಂದರು.</p>.<p>‘ಎಲ್ಲ ಧರ್ಮಗಳಲ್ಲೂ ಒಳ್ಳೆಯ ಅಂಶಗಳಿರುತ್ತದೆ. ಧಾರ್ಮಿಕ ಜಿಜ್ಞಾಸೆಗಳನ್ನು ಬದಿಗಿಟ್ಟು, ಧರ್ಮದ ಸಾರವನ್ನು ಮಾತ್ರ ಗ್ರಹಿಸಬೇಕು ಎಂದು ಹೇಳುವ ಮೂಲಕ ಗಾಂಧಿ ಅವರಲ್ಲಿ ಹಿಂದೂ ಧರ್ಮದ ಬಗ್ಗೆ ಮೂಡಿದ್ದ ಗೊಂದಲಕ್ಕೆ ತೆರೆ ಎಳೆದಿದ್ದು ಜೈನ ಮುನಿಗಳು’ ಎಂದು ಸಾಹಿತಿ ಕಮಲಾ ಹಂಪನಾ ಹೇಳಿದರು.</p>.<p>ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಕುಲಪತಿ ಸ.ಚಿ.ರಮೇಶ್,‘ಜೈನ ಧರ್ಮ ಸ್ವಚ್ಛತೆ, ಶಾಂತಿ, ಅಹಿಂಸೆಯಿಂದ ಕೂಡಿದ ಜೀವನ ಕ್ರಮ ಪ್ರತಿಪಾದಿಸುತ್ತದೆ. ಜೈನ ತತ್ವಾದರ್ಶಗಳನ್ನು ಅರಿತು ಪಾಲಿಸಿದರೆ, ಗಾಂಧಿ ಮತ್ತು ಲೋಹಿಯಾ ಕಂಡ ಸಮ ಸಮಾಜ ನಿರ್ಮಾಣ ಸಾಧ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ</strong>: ‘ಮಹಾತ್ಮ ಗಾಂಧೀಜಿ ಅವರು ತಮ್ಮ ಜೀವನದುದ್ದಕ್ಕೂ ಪ್ರತಿಪಾದಿಸಿದ ಸತ್ಯ ಹಾಗೂ ಅಹಿಂಸೆಗೆ ಜೈನ ಧರ್ಮದ ತತ್ವ ಮತ್ತು ಆದರ್ಶಗಳೇ ಪ್ರೇರಕ ಶಕ್ತಿಯಾಗಿದ್ದವು’ ಎಂದು ಶೇಷಾದ್ರಿಪುರ ಶಿಕ್ಷಣ ದತ್ತಿಯ ಗೌರವ ಕಾರ್ಯದರ್ಶಿ ವೂಡೇ ಪಿ.ಕೃಷ್ಣ ತಿಳಿಸಿದರು.</p>.<p>ಹಂಪಿ ಕನ್ನಡ ವಿಶ್ವವಿದ್ಯಾಲಯದ ಜೈನ ಸಾಹಿತ್ಯ ಸಂಸ್ಕೃತಿ ಅಧ್ಯಯನ ಕೇಂದ್ರದ ಸಹಯೋಗದಲ್ಲಿಕೆಂಗೇರಿ ಉಪನಗರದ ಶೇಷಾದ್ರಿಪುರ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ‘ಜೈನ ಧರ್ಮದಲ್ಲಿ ಲೌಕಿಕ ಮತ್ತು ಬದುಕಿನ ಪರಿಕಲ್ಪನೆ’ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>‘ಜೈನ ಧರ್ಮದ ಮೂಲ ತತ್ವವಾದ ಅಹಿಂಸಾ ಭಾವದ ಅಚರಣೆಯಿಂದಲೇ ಗಾಂಧೀಜಿ ರಾಜಕೀಯ ಸಂತನಾಗಲು ಸಾಧ್ಯವಾಯಿತು’ ಎಂದರು.</p>.<p>ಸಾಹಿತಿ ಹಂಪ ನಾಗರಾಜಯ್ಯ,‘ರನ್ನ, ಪೊನ್ನ, ಜನ್ನ ಸೇರಿದಂತೆ ಹಲವಾರು ಜೈನ ಕವಿಗಳು ಕನ್ನಡ ಸಾಹಿತ್ಯ ಪ್ರಾಕಾರಕ್ಕೆ ಅಮೂಲಾಗ್ರ ಕೊಡುಗೆ ನೀಡಿದ್ದಾರೆ. ಎಲ್ಲ ಜೀವಿಗೂ ಸ್ವತಂತ್ರವಾಗಿ, ನೆಮ್ಮದಿಯಿಂದ ಜೀವಿಸುವ ಅವಕಾಶ ನೀಡುವ ಜೈನ ಧರ್ಮ ನಿಜವಾದ ಅರ್ಥದಲ್ಲಿ ಪರಿಸರ ಸ್ನೇಹಿ ಧರ್ಮ’ ಎಂದರು.</p>.<p>‘ಎಲ್ಲ ಧರ್ಮಗಳಲ್ಲೂ ಒಳ್ಳೆಯ ಅಂಶಗಳಿರುತ್ತದೆ. ಧಾರ್ಮಿಕ ಜಿಜ್ಞಾಸೆಗಳನ್ನು ಬದಿಗಿಟ್ಟು, ಧರ್ಮದ ಸಾರವನ್ನು ಮಾತ್ರ ಗ್ರಹಿಸಬೇಕು ಎಂದು ಹೇಳುವ ಮೂಲಕ ಗಾಂಧಿ ಅವರಲ್ಲಿ ಹಿಂದೂ ಧರ್ಮದ ಬಗ್ಗೆ ಮೂಡಿದ್ದ ಗೊಂದಲಕ್ಕೆ ತೆರೆ ಎಳೆದಿದ್ದು ಜೈನ ಮುನಿಗಳು’ ಎಂದು ಸಾಹಿತಿ ಕಮಲಾ ಹಂಪನಾ ಹೇಳಿದರು.</p>.<p>ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಕುಲಪತಿ ಸ.ಚಿ.ರಮೇಶ್,‘ಜೈನ ಧರ್ಮ ಸ್ವಚ್ಛತೆ, ಶಾಂತಿ, ಅಹಿಂಸೆಯಿಂದ ಕೂಡಿದ ಜೀವನ ಕ್ರಮ ಪ್ರತಿಪಾದಿಸುತ್ತದೆ. ಜೈನ ತತ್ವಾದರ್ಶಗಳನ್ನು ಅರಿತು ಪಾಲಿಸಿದರೆ, ಗಾಂಧಿ ಮತ್ತು ಲೋಹಿಯಾ ಕಂಡ ಸಮ ಸಮಾಜ ನಿರ್ಮಾಣ ಸಾಧ್ಯ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>