ಗ್ರಾಮದ ಮನೆಗಳಿಂದ ದೇವರಿಗೆ ತಣುಮುದ್ದೆ ಸಮರ್ಪಿಸಲಾಯಿತು. ವಿವಿಧ ಬಗೆಯ ಹೂವುಗಳು ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಿದ್ದ ಪಲ್ಲಕ್ಕಿಗಳಲ್ಲಿ ದೇವರ ವಿಗ್ರಹಗಳನ್ನು ಕೂರಿಸಿ, ಮಂಗಳವಾರ ಸಂಜೆ 4 ಗಂಟೆಗೆ ಜಕ್ಕೂರು ವೃತ್ತದಿಂದ ಆರಂಭವಾದ ಮೆರವಣಿಗೆಯು ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ರಾತ್ರಿ 10 ಗಂಟೆಗೆ ಕೊನೆಗೊಂಡಿತು.