‘ಕಟ್ಟಡ ಕಾಮಗಾರಿಗಳಿಗೆ ಸಂಸ್ಕರಿಸಿದ ನೀರು ನೀಡುವ ಉದ್ದೇಶ ಬಹಳ ಉತ್ತಮವಾಗಿದೆ. ನಮಗೆ ನೀಡುತ್ತಿರುವ ನೀರಿನ ಬೆಲೆ ಬಹಳ ಕಡಿಮೆಯಿದೆ. ನಾವು ಉತ್ತಮ ಗುಣಮಟ್ಟದ ನೀರಿಗೆ ಇನ್ನೂ ಹೆಚ್ಚಿನ ದರ ನೀಡಲು ಸಿದ್ಧರಿದ್ದೇವೆ. ಆದರೆ, ನೀರು ಸಾಗಣೆ ಹಾಗೂ ಸಂಗ್ರಹದ್ದೇ ಸಮಸ್ಯೆ. ಕೆಲವು ಸಂದರ್ಭದಲ್ಲಿ ನೀರಿನಲ್ಲಿ ಕ್ಲೋರಿನ್ನಂತಹ ರಾಸಾಯನಿಕಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತಿದೆ. ಹೆಚ್ಚು ಬೇಡಿಕೆ ಇರುವ ಕಡೆಗಳಲ್ಲಿ ಪೈಪ್ಲೈನ್ ಮೂಲಕ ಸಂಸ್ಕರಿಸಿದ ನೀರು ಸರಬರಾಜು ಮಾಡಬೇಕು’ ಎಂದು ಕ್ರೆಡೈ ಬೆಂಗಳೂರಿನ ಅಧ್ಯಕ್ಷ ರಾಮ್ ಮೈಸೂರು ಮನವಿ ಮಾಡಿದರು.