ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮುವಿನಲ್ಲಿ ಸೈನಿಕರ ಮೇಲೆ ಕಲ್ಲು ತೂರಾಟ: ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ಆರೋಪಿ

Last Updated 7 ಜೂನ್ 2022, 2:19 IST
ಅಕ್ಷರ ಗಾತ್ರ

ಬೆಂಗಳೂರು: ಜಮ್ಮುವಿನಲ್ಲಿ ಸೈನಿಕರು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣದ ಆರೋಪಿ ತಾಲಿಬ್ ಹುಸೇನ್ ಎಂಬಾತ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾನೆ.

‘ತಾಂತ್ರಿಕ ಸುಳಿವು ಆಧರಿಸಿ ನಗರಕ್ಕೆ ಬಂದಿದ್ದ ಕಾಶ್ಮೀರ ಪೊಲೀಸರ ತಂಡ, ತಾಲಿಬ್‌ನನ್ನು ಬಂಧಿಸಿ ಕರೆದೊಯ್ದಿದೆ’ ಎಂದು ನಗರದ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಜಮ್ಮು ನಿವಾಸಿ ಆಗಿದ್ದ ತಾಲಿಬ್, 2 ವರ್ಷಗಳ ಹಿಂದೆ ನಡೆದಿದ್ದ ಕಲ್ಲು ತೂರಾಟ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. ಈತನ ವಿರುದ್ಧ ಜಮ್ಮುವಿನ ಕಿಸ್ತವಾರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT