ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಜನೌಷಧ ಕೇಂದ್ರ: ಸಚಿವ ಡಿ.ವಿ. ಸದಾನಂದಗೌಡ

Last Updated 19 ಫೆಬ್ರುವರಿ 2021, 4:49 IST
ಅಕ್ಷರ ಗಾತ್ರ

ಬೆಂಗಳೂರು: ಜನ ಸಾಮಾನ್ಯರ ಅನುಕೂಲಕ್ಕಾಗಿ ದೇಶದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಜನೌಷಧ ಕೇಂದ್ರ ತೆರೆಯಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಹೇಳಿದರು.

ನಾಗರಬಾವಿಯಲ್ಲಿ ಜನೌಷಧಿ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ‘ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಅದರಲ್ಲೂ ಬಡವರಿಗೆ ಜನೌಷಧಿಯನ್ನೇ ವೈದ್ಯರು ಬರೆದುಕೊಡಬೇಕು’ ಎಂದು ಮನವಿ ಮಾಡಿದರು.

‘ಜನೌಷಧಿಯೂ ಬ್ರಾಂಡೆಡ್ ಔಷಧಗಳಷ್ಟೇ ಗುಣಮಟ್ಟದ್ದು. ಆದರೆ, ದರ ಕಡಿಮೆ. ಉದಾಹರಣೆಗೆ ಮಧುಮೇಹ, ರಕ್ತದೊತ್ತಡ ಮುಂತಾದ ಖಾಯಿಲೆಗಳಿಗೆ ಸಾಮಾನ್ಯ ಔಷಧ ಅಂಗಡಿಗಳಲ್ಲಿ ಔಷಧ ಖರೀದಿಸಬೇಕೆಂದರೆ ತಿಂಗಳಿಗೆ ₹2,500 ರಿಂದ ₹3 ಸಾವಿರ ವೆಚ್ಚವಾಗುತ್ತದೆ. ಇದೇ ಔಷಧ ಜನೌಷಧ ಕೇಂದ್ರಗಳಲ್ಲಿ ₹250ರಿಂದ ₹300ರೊಳಗೆ ಸಿಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT