<p><strong>ಬೆಂಗಳೂರು:</strong> ಅಪರಾಧ ಪ್ರಕರಣಗಳಿಗೆ ಸಂಬಂಧಪಟ್ಟ ಮಾಹಿತಿ ಪಡೆಯಲು ಹಾಗೂ ಸಮಸ್ಯೆಗಳನ್ನು ಹೇಳಿಕೊಳ್ಳಲು ಸಾರ್ವಜನಿಕರಿಗೆ ನೆರವಾಗುವ ನಿಟ್ಟಿನಲ್ಲಿ ಪೊಲೀಸರು ಜಾರಿಗೆ ತಂದಿರುವ ‘ಜನ ಸಂಪರ್ಕ’ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು.</p>.<p>ಪುಲಿಕೇಶಿನಗರ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್, ಜನ ಸಂಪರ್ಕ ಸಭೆಗೆ ಚಾಲನೆ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು. ನಗರದ ಎಲ್ಲ ಠಾಣೆಗಳಲ್ಲೂ ಈ ಕಾರ್ಯಕ್ರಮ ನಡೆಯಿತು. </p>.<p>ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಠಾಣೆಯಲ್ಲಿ ದಾಖಲಾದ ಪ್ರಕರಣಗಳು, ಅದರ ತನಿಖೆ ಪ್ರಗತಿ ಮಾಹಿತಿ ಹಾಗೂ ಇತರೆ ಮಾಹಿತಿಯನ್ನು ಸಾರ್ವಜನಿಕರು ಪಡೆದುಕೊಂಡರು. ಕೆಲವರು, ತಮ್ಮ ಸಮಸ್ಯೆಗಳನ್ನು ಪೊಲೀಸ್ ಇನ್ಸ್ಪೆಕ್ಟರ್ ಎದುರು ಹೇಳಿಕೊಂಡರು. ನಗರದಾದ್ಯಂತ ಸಾವಿರಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮದ ಉಪಯೋಗ ಪಡೆದುಕೊಂಡರು ಎಂಬುದಾಗಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.</p>.<p>ಕಮಲ್ ಪಂತ್ ಮಾತನಾಡಿ, ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಪ್ರತಿ ತಿಂಗಳ ನಾಲ್ಕನೇ ಶನಿವಾರದಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ’ ಎಂದರು.</p>.<p>ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಜಯ್ ಕುಮಾರ್ ಸಿಂಗ್, ‘ಪೊಲೀಸರದ್ದು ಬಹಳ ಕಷ್ಟದ ಕೆಲಸ. ಕರ್ತವ್ಯವನ್ನು ಚೆನ್ನಾಗಿ ನಿರ್ವಹಿಸಬೇಕಾದರೆ ಜನರ ಸಹಕಾರ ಅಗತ್ಯ. ಪೊಲೀಸರು ಜನಪರ ಮನೋಭಾವನೆಯಿಂದ ಕೆಲಸ ಮಾಡುವುದು ಮುಖ್ಯ’ ಎಂದರು.</p>.<p>‘ದೂರು ಕೊಟ್ಟ ನಂತರ ಶೇ 90ರಷ್ಟು ಪ್ರಕರಣಗಳಲ್ಲಿ ಮಾತ್ರ ತನಿಖೆ ನಡೆಯುತ್ತದೆ. ಶೇ 10ರಷ್ಟು ಪ್ರಕರಣಗಳಲ್ಲಿ ತನಿಖೆ ಆಗುವುದೇ ಇಲ್ಲ. ಇಂಥ ಪ್ರಕರಣಗಳ ಮೇಲೆ ಬೆಳಕು ಚೆಲ್ಲಲು ಈ ಕಾರ್ಯಕ್ರಮ ನೆರವಾಗಲಿದೆ’ ಎಂದೂ ಹೇಳಿದರು.</p>.<p>‘ನಗರದ ಪಶ್ಚಿಮ ವಿಭಾಗದ ಠಾಣೆಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ 892 ಮಂದಿ ಪಾಲ್ಗೊಂಡು ಅಹವಾಲು ಹೇಳಿಕೊಂಡಿದ್ದಾರೆ’ ಎಂದು ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.</p>.<p>‘ಡ್ರಗ್ಸ್ ಮಾರಾಟ, ಪಾದಚಾರಿಗಳು ಹಾಗೂ ವಾಯುವಿಹಾರಿಗಳಿಗೆ ಬೆದರಿಕೆ ಸೇರಿ ಹಲವು ದೂರುಗಳು ಬಂದಿವೆ. ಅವುಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗಿದೆ’ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಪರಾಧ ಪ್ರಕರಣಗಳಿಗೆ ಸಂಬಂಧಪಟ್ಟ ಮಾಹಿತಿ ಪಡೆಯಲು ಹಾಗೂ ಸಮಸ್ಯೆಗಳನ್ನು ಹೇಳಿಕೊಳ್ಳಲು ಸಾರ್ವಜನಿಕರಿಗೆ ನೆರವಾಗುವ ನಿಟ್ಟಿನಲ್ಲಿ ಪೊಲೀಸರು ಜಾರಿಗೆ ತಂದಿರುವ ‘ಜನ ಸಂಪರ್ಕ’ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು.</p>.<p>ಪುಲಿಕೇಶಿನಗರ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್, ಜನ ಸಂಪರ್ಕ ಸಭೆಗೆ ಚಾಲನೆ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು. ನಗರದ ಎಲ್ಲ ಠಾಣೆಗಳಲ್ಲೂ ಈ ಕಾರ್ಯಕ್ರಮ ನಡೆಯಿತು. </p>.<p>ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಠಾಣೆಯಲ್ಲಿ ದಾಖಲಾದ ಪ್ರಕರಣಗಳು, ಅದರ ತನಿಖೆ ಪ್ರಗತಿ ಮಾಹಿತಿ ಹಾಗೂ ಇತರೆ ಮಾಹಿತಿಯನ್ನು ಸಾರ್ವಜನಿಕರು ಪಡೆದುಕೊಂಡರು. ಕೆಲವರು, ತಮ್ಮ ಸಮಸ್ಯೆಗಳನ್ನು ಪೊಲೀಸ್ ಇನ್ಸ್ಪೆಕ್ಟರ್ ಎದುರು ಹೇಳಿಕೊಂಡರು. ನಗರದಾದ್ಯಂತ ಸಾವಿರಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮದ ಉಪಯೋಗ ಪಡೆದುಕೊಂಡರು ಎಂಬುದಾಗಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.</p>.<p>ಕಮಲ್ ಪಂತ್ ಮಾತನಾಡಿ, ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಪ್ರತಿ ತಿಂಗಳ ನಾಲ್ಕನೇ ಶನಿವಾರದಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ’ ಎಂದರು.</p>.<p>ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಜಯ್ ಕುಮಾರ್ ಸಿಂಗ್, ‘ಪೊಲೀಸರದ್ದು ಬಹಳ ಕಷ್ಟದ ಕೆಲಸ. ಕರ್ತವ್ಯವನ್ನು ಚೆನ್ನಾಗಿ ನಿರ್ವಹಿಸಬೇಕಾದರೆ ಜನರ ಸಹಕಾರ ಅಗತ್ಯ. ಪೊಲೀಸರು ಜನಪರ ಮನೋಭಾವನೆಯಿಂದ ಕೆಲಸ ಮಾಡುವುದು ಮುಖ್ಯ’ ಎಂದರು.</p>.<p>‘ದೂರು ಕೊಟ್ಟ ನಂತರ ಶೇ 90ರಷ್ಟು ಪ್ರಕರಣಗಳಲ್ಲಿ ಮಾತ್ರ ತನಿಖೆ ನಡೆಯುತ್ತದೆ. ಶೇ 10ರಷ್ಟು ಪ್ರಕರಣಗಳಲ್ಲಿ ತನಿಖೆ ಆಗುವುದೇ ಇಲ್ಲ. ಇಂಥ ಪ್ರಕರಣಗಳ ಮೇಲೆ ಬೆಳಕು ಚೆಲ್ಲಲು ಈ ಕಾರ್ಯಕ್ರಮ ನೆರವಾಗಲಿದೆ’ ಎಂದೂ ಹೇಳಿದರು.</p>.<p>‘ನಗರದ ಪಶ್ಚಿಮ ವಿಭಾಗದ ಠಾಣೆಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ 892 ಮಂದಿ ಪಾಲ್ಗೊಂಡು ಅಹವಾಲು ಹೇಳಿಕೊಂಡಿದ್ದಾರೆ’ ಎಂದು ಡಿಸಿಪಿ ಸಂಜೀವ್ ಪಾಟೀಲ ಹೇಳಿದರು.</p>.<p>‘ಡ್ರಗ್ಸ್ ಮಾರಾಟ, ಪಾದಚಾರಿಗಳು ಹಾಗೂ ವಾಯುವಿಹಾರಿಗಳಿಗೆ ಬೆದರಿಕೆ ಸೇರಿ ಹಲವು ದೂರುಗಳು ಬಂದಿವೆ. ಅವುಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗಿದೆ’ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>