‘ಬಡಾವಣೆಯಲ್ಲಿ 500ಕ್ಕೂ ಅಧಿಕ ಮನೆಗಳಿವೆ. ಹೆಣ್ಣೂರಿನಿಂದ ಹೋಗುವವರು ಬಡಾವಣೆ ಪ್ರವೇಶಿಸಲು ಈ ರಸ್ತೆಯನ್ನೇ ಅವಲಂಬಿಸಬೇಕಿತ್ತು. ಈಗ ದಾರಿಯೇ ಇಲ್ಲದಂತಾಗಿದೆ. ಜನ ಪರ್ಯಾಯ ಮಾರ್ಗದ ಮೊರೆಹೋಗಿದ್ದು, ಕಚ್ಚಾರಸ್ತೆಯಲ್ಲಿ 3 ಕಿ.ಮೀ. ಸುತ್ತಿ ಬರುವುದು ಅನಿವಾರ್ಯವಾಗಿದೆ. ಪರ್ಯಾಯ ಮಾರ್ಗದಲ್ಲಿ ಸಾಗುವಾಗ ರಾತ್ರಿ ದುಷ್ಕರ್ಮಿಗಳು ದಾಳಿ ಮಾಡುವ ಅಪಾಯ ಎದುರಾಗಿದೆ’ ಎಂದು ಸ್ಥಳೀಯರಾದ ಜೇಕಬ್ಆತಂಕ ವ್ಯಕ್ತಪಡಿಸಿದರು.