<p><strong>ಬೆಂಗಳೂರು: </strong>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪದ್ಮನಾಭನಗರದ ಅಟಲ್ ಬಿಹಾರಿ ವಾಜಪೇಯಿ ರಂಗಮಂದಿರದಲ್ಲಿ ಆಯೋಜಿಸಿರುವ ‘ಜಾನಪದ ಜಾತ್ರೆ’ಯ ಅಂಗವಾಗಿ ಶನಿವಾರ ಜಾನಪದ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆದವು. ನಾಡಿನ ಪ್ರಸಿದ್ಧ ಕಲಾತಂಡಗಳು ಕಾರ್ಯಕ್ರಮ ಪ್ರಸ್ತುತ ಪಡಿಸಿದವು.</p>.<p>ಜಾನಪದ ಜಾತ್ರೆಯ ಸಮಾರೋಪ ಸಮಾರಂಭ ಏ.10ರ ಸಂಜೆ 6 ಗಂಟೆಗೆ ನೆರವೇರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾರೋಪ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಆರ್.ಅಶೋಕ ಪಾಲ್ಗೊಳ್ಳಲಿದ್ದಾರೆ.</p>.<p>ಜಾನಪದ ಕಲಾವಿದರು ವಿಶೇಷ ಪ್ರದರ್ಶನ ನೀಡಲಿದ್ದಾರೆ. ಮಲೆಮಹದೇಶ್ವರರ ಹಾಡುಗಳು, ಮೈಸೂರಿನ ಚಂಡಿ ನಗಾರಿ, ಕೊಳ್ಳೇಗಾಲದ ನೀಲಗಾರರ ಪದ, ಸೋಲಿಗರ ಹಾಡು, ಮಂಗಳೂರಿನ ಕೋಲಾಟ, ವೀರಗಾಸೆ, ಜಗ್ಗಲಿಗೆ ಕುಣಿತದ ಮೂಲಕ ಕಲಾವಿದರು ಪ್ರೇಕ್ಷಕರನ್ನು ರಂಜಿಸಲಿದ್ದಾರೆ.</p>.<p>ರಾಜ್ಯದ 17 ಜಾನಪದ ಕಲಾ ತಂಡಗಳ ಸುಮಾರು 250ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಲಿದ್ದಾರೆ.ರಾಜ್ಯದ ವಿವಿಧ ಭಾಗಗಳ ಜನಪದ ಗಾಯಕರಿಂದ ವಿಶೇಷ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 300 ಕಲಾವಿದರು ಏಕಕಾಲದಲ್ಲೇ ವಿಶೇಷ ನೃತ್ಯ ಪ್ರದರ್ಶಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p class="Briefhead"><strong>ರಾಮ ರಥಯಾತ್ರೆ ಇಂದು</strong></p>.<p>ರಾಮನವಮಿ ಪ್ರಯುಕ್ತ ರಾಮ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಪದ್ಮನಾಭನಗರದ ವಾಜಪೇಯಿ ಮೈದಾನದಲ್ಲಿ ಏ.10ರಂದು ಬೆಳಿಗ್ಗೆ ಶ್ರೀರಾಮನಿಗೆ ಪೂಜೆ ಸಲ್ಲಿಸುವ ಮೂಲಕ 10 ಗಂಟೆಗೆ ಚಾಲನೆ ನೀಡಲಾಗುತ್ತದೆ. ಮಂತ್ರಾಲಯದ ಸುಭುದೇಂದ್ರ ತೀರ್ಥ ಸ್ವಾಮೀಜಿ, ಕಾಗಿನೆಲೆಯ ಈಶ್ವರಾನಂದಪುರಿ ಸ್ವಾಮೀಜಿ, ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ.</p>.<p>ಯಾತ್ರೆಯಲ್ಲಿ ಸುಮಾರು 10 ಸಾವಿರ ಮಂದಿ ಪಾಲ್ಗೊಳ್ಳಲಿದ್ದು, ಪದ್ಮನಾಭನಗರದ ಶಾಸಕರ ಕಚೇರಿವರೆಗೆ ಯಾತ್ರೆ ಸಾಗಲಿದೆ. ಮಧ್ಯಾಹ್ನ 1 ಗಂಟೆಗೆ ಪೂಜೆ, ಮಹಾಮಂಗಳಾರತಿ, ನಂತರ ಪ್ರಸಾದ ವಿನಿಯೋಗ ನಡೆಯಲಿದೆ. ಯಾತ್ರೆಯುದ್ದಕ್ಕೂ ಪಾನಕ, ಮಜ್ಜಿಗೆ ವಿತರಣೆ ಇರಲಿದೆ.</p>.<p>ಎಲ್ಲರೂ ಶ್ವೇತವಸ್ತ್ರಧಾರಿಗಳಾಗಿ ಯಾತ್ರೆಯಲ್ಲಿ ಸಾಗಲಿದ್ದು, ಕಂದಾಯ ಸಚಿವ ಆರ್.ಅಶೋಕ ನೇತೃತ್ವ ವಹಿಸಲಿದ್ದಾರೆ. ಜಾನಪದ ಕಲಾವಿದರು ನೃತ್ಯ, ಹಾಡುಗಳಿಂದ ರಂಜಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಪದ್ಮನಾಭನಗರದ ಅಟಲ್ ಬಿಹಾರಿ ವಾಜಪೇಯಿ ರಂಗಮಂದಿರದಲ್ಲಿ ಆಯೋಜಿಸಿರುವ ‘ಜಾನಪದ ಜಾತ್ರೆ’ಯ ಅಂಗವಾಗಿ ಶನಿವಾರ ಜಾನಪದ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆದವು. ನಾಡಿನ ಪ್ರಸಿದ್ಧ ಕಲಾತಂಡಗಳು ಕಾರ್ಯಕ್ರಮ ಪ್ರಸ್ತುತ ಪಡಿಸಿದವು.</p>.<p>ಜಾನಪದ ಜಾತ್ರೆಯ ಸಮಾರೋಪ ಸಮಾರಂಭ ಏ.10ರ ಸಂಜೆ 6 ಗಂಟೆಗೆ ನೆರವೇರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾರೋಪ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಆರ್.ಅಶೋಕ ಪಾಲ್ಗೊಳ್ಳಲಿದ್ದಾರೆ.</p>.<p>ಜಾನಪದ ಕಲಾವಿದರು ವಿಶೇಷ ಪ್ರದರ್ಶನ ನೀಡಲಿದ್ದಾರೆ. ಮಲೆಮಹದೇಶ್ವರರ ಹಾಡುಗಳು, ಮೈಸೂರಿನ ಚಂಡಿ ನಗಾರಿ, ಕೊಳ್ಳೇಗಾಲದ ನೀಲಗಾರರ ಪದ, ಸೋಲಿಗರ ಹಾಡು, ಮಂಗಳೂರಿನ ಕೋಲಾಟ, ವೀರಗಾಸೆ, ಜಗ್ಗಲಿಗೆ ಕುಣಿತದ ಮೂಲಕ ಕಲಾವಿದರು ಪ್ರೇಕ್ಷಕರನ್ನು ರಂಜಿಸಲಿದ್ದಾರೆ.</p>.<p>ರಾಜ್ಯದ 17 ಜಾನಪದ ಕಲಾ ತಂಡಗಳ ಸುಮಾರು 250ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಲಿದ್ದಾರೆ.ರಾಜ್ಯದ ವಿವಿಧ ಭಾಗಗಳ ಜನಪದ ಗಾಯಕರಿಂದ ವಿಶೇಷ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 300 ಕಲಾವಿದರು ಏಕಕಾಲದಲ್ಲೇ ವಿಶೇಷ ನೃತ್ಯ ಪ್ರದರ್ಶಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p class="Briefhead"><strong>ರಾಮ ರಥಯಾತ್ರೆ ಇಂದು</strong></p>.<p>ರಾಮನವಮಿ ಪ್ರಯುಕ್ತ ರಾಮ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಪದ್ಮನಾಭನಗರದ ವಾಜಪೇಯಿ ಮೈದಾನದಲ್ಲಿ ಏ.10ರಂದು ಬೆಳಿಗ್ಗೆ ಶ್ರೀರಾಮನಿಗೆ ಪೂಜೆ ಸಲ್ಲಿಸುವ ಮೂಲಕ 10 ಗಂಟೆಗೆ ಚಾಲನೆ ನೀಡಲಾಗುತ್ತದೆ. ಮಂತ್ರಾಲಯದ ಸುಭುದೇಂದ್ರ ತೀರ್ಥ ಸ್ವಾಮೀಜಿ, ಕಾಗಿನೆಲೆಯ ಈಶ್ವರಾನಂದಪುರಿ ಸ್ವಾಮೀಜಿ, ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ.</p>.<p>ಯಾತ್ರೆಯಲ್ಲಿ ಸುಮಾರು 10 ಸಾವಿರ ಮಂದಿ ಪಾಲ್ಗೊಳ್ಳಲಿದ್ದು, ಪದ್ಮನಾಭನಗರದ ಶಾಸಕರ ಕಚೇರಿವರೆಗೆ ಯಾತ್ರೆ ಸಾಗಲಿದೆ. ಮಧ್ಯಾಹ್ನ 1 ಗಂಟೆಗೆ ಪೂಜೆ, ಮಹಾಮಂಗಳಾರತಿ, ನಂತರ ಪ್ರಸಾದ ವಿನಿಯೋಗ ನಡೆಯಲಿದೆ. ಯಾತ್ರೆಯುದ್ದಕ್ಕೂ ಪಾನಕ, ಮಜ್ಜಿಗೆ ವಿತರಣೆ ಇರಲಿದೆ.</p>.<p>ಎಲ್ಲರೂ ಶ್ವೇತವಸ್ತ್ರಧಾರಿಗಳಾಗಿ ಯಾತ್ರೆಯಲ್ಲಿ ಸಾಗಲಿದ್ದು, ಕಂದಾಯ ಸಚಿವ ಆರ್.ಅಶೋಕ ನೇತೃತ್ವ ವಹಿಸಲಿದ್ದಾರೆ. ಜಾನಪದ ಕಲಾವಿದರು ನೃತ್ಯ, ಹಾಡುಗಳಿಂದ ರಂಜಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>